ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಣ್ಣ ಬೆರೆಸುವ ಮಿಕ್ಸರ್‌ಗೆ ಜಡೆ ಸಿಲುಕಿ ಮಹಿಳೆ ಸಾವು

Twitter
Facebook
LinkedIn
WhatsApp
ಬಣ್ಣ ಬೆರೆಸುವ ಮಿಕ್ಸರ್‌ಗೆ ಜಡೆ ಸಿಲುಕಿ ಮಹಿಳೆ ಸಾವು

ಬೆಂಗಳೂರು: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್‌ಗೆ (Paint Mixer) ಕೂದಲು (Hair) ಸಿಲುಕಿ ಮಹಿಳೆ (Woman) ದಾರುಣವಾಗಿ ಸಾವನ್ನಪ್ಪಿದ ಘಟನೆ ನೆಲಗದರನಹಳ್ಳಿಯ ಕಾರ್ಖಾನೆಯೊಂದರಲ್ಲಿ (Factory) ನಡೆದಿದೆ.

ಶ್ವೇತಾ (34) ಸಾವನ್ನಪ್ಪಿದ ಮಹಿಳೆ. ಗಂಡ ಮತ್ತು ಮಗನ ಜೊತೆ ಶ್ವೇತಾ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಬಣ್ಣ ಬೆರೆಸುವ ಮಿಕ್ಸರ್‌ಗೆ ಜಡೆ ಸಿಲುಕಿ ಘಟನೆ ನಡೆದಿದೆ. 

ಬಣ್ಣ ಗಟ್ಟಿಯಾಗುತ್ತಿದ್ದರಿಂದ ಪರಿಶೀಲಿಸಲು ಮಿಕ್ಸರ್ ಬಳಿ ಬಂದು ಬಗ್ಗಿದಾಗ ಈ ಅವಘಡ ಸಂಭವಿಸಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಮಿಕ್ಸರ್ ಶಬ್ದದಿಂದಾಗಿ ಯಾರಿಗೂ ಕೇಳಿಸಿಲ್ಲ. ಬಳಿಕ ಉಳಿದ ಕೆಲಸಗಾರರು ಮಿಕ್ಸರ್ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯ (Peenya) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಫ್‍ಡಿಎ ಪರೀಕ್ಷೆ ಅಕ್ರಮ ತನಿಖೆ ಚುರುಕು – ಕಿಂಗ್‍ಪಿನ್‍ನಿಂದ ಜಾಮೀನಿನ ಮೊರೆ

ಯಾದಗಿರಿ: ಎಫ್‍ಡಿಎ ಪರೀಕ್ಷೆ ಅಕ್ರಮದ (FDA Exam Scam) ತನಿಖೆ ವೇಳೆ ಕಿಂಗ್‍ಪಿನ್ ಆರ್.ಡಿ ಪಾಟೀಲ್ (R.D Patil) ಹೆಸರು ಕೇಳಿ ಬರುತ್ತಿದ್ದಂತೆ ನಿರೀಕ್ಷಣಾ ಜಾಮೀನಿಗೆ (Anticipatory Bail) ಅರ್ಜಿ ಸಲ್ಲಿಸಿದ್ದಾನೆ.

ಈಗಾಗಲೇ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಆರ್.ಡಿ ಪಾಟೀಲ್ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು (Police) ಆತನಿಗಾಗಿ ಭಾರೀ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದಾಗಿ ಆರ್.ಡಿ ಪಾಟೀಲ್ ಯಾದಗಿರಿಯ (Yadgir) ಜಿಲ್ಲಾ ಕೋರ್ಟ್‍ಗೆ ಜಾಮೀನಿಗಾಗಿ ವಕೀಲರ ಮೂಲಕ ಮೊರೆ ಹೋಗಿದ್ದಾನೆ. ಯಾದಗಿರಿ ನಗರ ಠಾಣೆಯಲ್ಲಿ ದಾಖಲಾಗಿರುವ ಐದು ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ.

ಬಂಧನಕ್ಕೆ ಸಿದ್ಧತೆ ನಡೆಸುತ್ತಿರುವ ಪೊಲೀಸರ ಕಣ್ಣನ್ನು ಪದೇ ಪದೇ ತಪ್ಪಿಸುತ್ತಿರುವ ಆರ್.ಡಿ ಪಾಟೀಲ್ ನಿರಂತರ ಜಾಗ ಬದಲಿಸುತ್ತಿದ್ದಾನೆ. ಬುಧವಾರ ಪೊಲೀಸರು ಆತನ ಇಬ್ಬರು ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪಾಟೀಲ್ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡಿರುವ ಮಾಹಿತಿ ತಿಳಿದು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಹುಡುಕಾಟ ನಡೆಸಿದ್ದರು.

ಆರೋಪಿ ಆರ್.ಡಿ ಪಾಟೀಲ್ ಮೊಬೈಲ್ ಲೊಕೇಶನ್ ಉತ್ತರ ಪ್ರದೇಶವನ್ನು ತೋರಿಸಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಉತ್ತರ ಪ್ರದೇಶಕ್ಕೆ ಇನ್ನೊಬ್ಬನ ಬಳಿ ಮೊಬೈಲ್ ಕೊಟ್ಟು ಕಳಿಸಿರುವುದು ಬೆಳಕಿಗೆ ಬಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist