ಬಾಲಿವುಡ್ (Bollywood) ಖ್ಯಾತ ನಟಿ ಮಾಧುರಿ ದೀಕ್ಷಿತ್ (Madhuri Dixit) ರಾಜಕಾರಣಕ್ಕೆ (Politics) ಪ್ರವೇಶ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಹಲವಾರು ನಟ ನಟಿಯರು ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಮಾಧುರಿ ರಾಜಕೀಯ ಅಖಾಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ರಾಜಕಾರಣಕ್ಕೆ ಎಂಟ್ರಿ ಕೊಡಲು ಸಿದ್ಧರಾದ ಮಾಧುರಿ ದೀಕ್ಷಿತ್ ; ಯಾವ ಪಕ್ಷಕ್ಕೆ..!
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಸ್ಪರ್ಧಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಬಿಜೆಪಿಯಿಂದ ಟಿಕೆಟ್ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಜೆಪಿಯ ಮುಖಂಡರು ಮಾಧುರಿಯನ್ನು ಸಂಪರ್ಕಿಸಿದ್ದಾರಂತೆ. ಅಲ್ಲದೇ, ಪುಣೆಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ ಎನ್ನಲಾಗುತ್ತಿದೆ.
ಪುಣೆಯ ಲೋಕಸಭಾ ಕ್ಷೇತ್ರವು ಅತ್ಯಂತ ಪ್ರತಿಷ್ಠಿತ ಕಣವಾಗಿದ್ದು, ಇಲ್ಲಿಂದಲೇ ಮಾಧುರಿ ಅವರನ್ನು ಅಖಾಡಕ್ಕೆ ಇಳಿಸಲು ಚಿಂತನೆ ಮಾಡಲಾಗುತ್ತಿದೆ. ಬಿಜೆಪಿ (BJP) ಮತ್ತು ಮಾಧುರಿ ನಡೆವೆ ಈಗಾಗಲೇ ಒಂದು ಸುತ್ತಿನ ಮಾತುಕತೆ ಕೂಡ ಮಾಡಲಾಗಿದೆ. ಬಹುತೇಕ ಬಿಜೆಪಿಯನ್ನು ಮಾಧುರಿ ಸೇರುವುದು ಪಕ್ಕಾ ಎನ್ನುವ ಮಾಹಿತಿ ಇದೆ.
ಬಿಗ್ ಬಾಸ್ ಸ್ಪರ್ಧಿ ತನಿಷಾ ಪ್ರಕರಣ : ವರದಿಗಾಗಿ ಕಾಯುತ್ತಿದ್ದಾರೆ ಪೊಲೀಸರು
ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಷಾ ಮೇಲಿನ ಪ್ರಕರಣದ ತನಿಖೆಯನ್ನು ಮಾಗಡಿ ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಪ್ರಕರಣದ ಕುರಿತಂತೆ ರಾಮನಗರ ಎಸ್ಪಿ ಮಾತನಾಡಿ, ‘ತನಿಷಾ ಅವರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವನ್ನು ಎಫ್.ಎಸ್.ಎಲ್ (FSL)ಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಮಾಗಡಿ ಡಿವೈಎಸ್್ಪಿ ಪ್ರವೀಣ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿಗಾಗಿ ಕಾಯುತ್ತಿದ್ದಾರೆ.
ಈ ನಡುವೆ ತನಿಷಾ ಕುಪ್ಪಂಡ (Tanisha Kuppanda) ವಿರುದ್ಧ ಮತ್ತೊಂದು ದೂರು (Complaint) ದಾಖಲಾಗಿದೆ. ಸದ್ಯ ಬಿಗ್ ಬಾಸ್ (Big Boss Kannada) ಮನೆಯಲ್ಲಿರುವ ನಟಿ ಮೇಲೆ ಜಾತಿ ನಿಂದನೆ ವಿಚಾರವಾಗಿ ಎಸ್ಸಿಎಸ್ಟಿ ಕಾಯ್ದೆಯಡಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ. ಈ ಹಿಂದೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಟಿ ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 11ರಂದು ದೂರು ದಾಖಲಾಗಿದ್ದು, ನವೆಂಬರ್ 12 ದೂರಿನ ಆಧಾರದ ಮೇಲೆ ಕುಂಬಳಗೋಡು ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕುಂಬಳಗೋಡು ಪೊಲೀಸರು (Police) ಬಿಗ್ ಬಾಸ್ ಮನೆಗೆ ತೆರಳಿ, ನಟಿಯ ವಿಚಾರಣೆ ನಡೆಸಿದ್ದಾರೆ. ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.