ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇರಳದಲ್ಲಿ ಇಸ್ರೇಲಿ ಮಹಿಳೆ ಮನೆಯಲ್ಲಿಯೇ ಸಾವು ; ಕೊಲೆ ಶಂಕೆ..!

Twitter
Facebook
LinkedIn
WhatsApp
ಕೇರಳದಲ್ಲಿ ಇಸ್ರೇಲಿ ಮಹಿಳೆ ಮನೆಯಲ್ಲಿಯೇ ಸಾವು ; ಕೊಲೆ ಶಂಕೆ..!

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಇಸ್ರೇಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಅವರ ಮನೆಯಲ್ಲಿಯೇ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮಹಿಳೆ ಲಿವ್ ಇನ್ ಸಂಗಾತಿಯ ಮೇಲೆ ಅನುಮಾನ ಮೂಡಿದೆ.ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಆರೋಪಿಯು ಯೋಗ ಶಿಕ್ಷಕ ಎಂದು ತನ್ನನ್ನು ತಾನು ಗುರುತಿಸಿಕೊಂಡಿದ್ದಾನೆ. ಅವರಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಈ ನಿರ್ಧಾರದ ಭಾಗವಾಗಿ ಮಹಿಳೆಯ ಕತ್ತು ಸೀಳಿದ್ದಾನೆ. ತನ್ನ ಕುತ್ತಿಗೆ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದುಕೊಂಡಿದ್ದಾನೆ.

ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರ ಕಣ್ಗಾವಲಿನಲ್ಲಿದ್ದಾನೆ. ಮಹಿಳೆಯ ಕುತ್ತಿಗೆ ಭಾಗವನ್ನು ಹೊರತುಪಡಿಸಿ ಆಕೆಯ ದೇಹದ ಇತರೆ ಭಾಗಗಳಲ್ಲಿ ಚಾಕು ಇರಿತದ ಗಾಯಗಳಿವೆ.

ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ, ಆರೋಪಿಯ ಸಂಬಂಧಿಯೊಬ್ಬರು ಇಬ್ಬರು ಗಾಯಗೊಂಡಿರುವುದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಮಹಿಳೆ ಖಿನ್ನತೆಗೆ ಒಳಗಾಗಿದ್ದಳು, ಯೋಗಾಭ್ಯಾಸ ಮಾಡಿದರೂ ಕೂಡ ಆರೋಗ್ಯ ಸ್ಥಿತಿ ಹಾಗೆಯೇ ಇತ್ತು ಎನ್ನುವ ವಿಚಾರ ತಿಳಿದುಬಂದಿದೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಚಿಕ್ಕಬಳ್ಳಾಫುರ: ತಂಗಿ ಮೇಲಿನ ಕೋಪಕ್ಕೆ ಆಕೆಯ ಆರು ವರ್ಷದ ಮಗನನ್ನು ಕೊಲೆ ಮಾಡಿ ಹೂತು ಹಾಕಿದ ಅಕ್ಕ

ಚಿಕ್ಕಬಳ್ಳಾಪುರ, ಡಿ.1: ಎಲೆ, ಅಡಿಕೆ ತಿನ್ನಿಸಿ 9 ತಿಂಗಳ ಮಗುವನ್ನು ಅಜ್ಜಿ ಕೊಲೆ ಮಾಡಿದ ಆರೋಪ ಗದಗದಲ್ಲಿ ಇತ್ತೀಚೆಗೆ ಕೇಳಿಬಂದಿತ್ತು. ಇದರ ಬೆನ್ನಲ್ಲೇ, ಚಿಕ್ಕಬಳ್ಳಾಪುರದಲ್ಲಿ (Chikkaballapura) ತಾಲೂಕಿನ ಮುತಕದಹಳ್ಳಿ ಗ್ರಾಮದಲ್ಲಿ ತನ್ನ ಅನೈತಿಕ ಸಂಬಂಧಕ್ಕೆ ತಂಗಿ ಅಡ್ಡ ಬರುತ್ತಾಳೆಂದು ಆಕೆಯ ಆರು ವರ್ಷದ ಮಗನನ್ನು ಅಕ್ಕ ಕೊಲೆ ಮಾಡಿ ಹೂತಿಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಅಂಬಿಕಾ ಹಾಗೂ ಅನಿತಾ ಅಕ್ಕ ತಂಗಿಯರು. ಆದರೆ ಅಂಬಿಕಾ ಅನೈತಿಕ ಸಂಬಂಧ ಹೊಂದಿದ್ದ ವಿಚಾರ ಅನಿತಾಗೆ ತಿಳಿದು ಬಂದಿದೆ. ಅದರಂತೆ ವಿರೋಧವೂ ವ್ಯಕ್ತಪಡಿಸಿದ್ದಳು. ಇದರಿಂದ ಕೋಪಗೊಂಡ ಅಂಬಿಕಾ, ಅನಿತಾಳ ಆರು ವರ್ಷದ ಮಗ ಮಧುನನ್ನು ಕೊಲೆ ಮಾಡಿ ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ಹೂತು ಹಾಕಿದ್ದಾಳೆ. ಸ್ಥಳಕ್ಕೆ ಪೆರೆಸಂದ್ರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಎಸ್​ಪಿ ಡಿ.ಎಲ್.ನಾಗೇಶ, ತನ್ನ ಇಬ್ಬರು ಮಕ್ಕಳನ್ನು ಕಿಡ್ನಾಪ್ ಮಾಡಿರುವ ಬಗ್ಗೆ ನಿನ್ನೆ ಅನಿತಾ ಎನ್ನುವವರು ದೂರು ನೀಡಿದ್ದರು. ಅನಿತಾ ಸ್ವತಃ ತನ್ನ ಅಕ್ಕ ಅಂಬಿಕಾ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಪತ್ತೆಯಾಗಿರುವ ಅಂಬಿಕಾಳನ್ನು ತನಿಖೆ ನಡೆಸಿದಾಗ ಪ್ರಕರಣ ಬಯಲಾಗಿದೆ ಎಂದರು.

ಪೊಲೀಸರಿಗೆ ಮಾಹಿತಿ ನೀಡಿದ ಆಟೋ ಚಾಲಕ

ಬೆಂಗಳೂರಿನ ಆಟೊ ಚಾಲಕರೊಬ್ಬರ ಮೂಲಕ ಆರೋಪಿ ಮಹಿಳೆ ಪತ್ತೆಯಾಗಿದ್ದಾಳೆ ಎಂದು ಎಸ್​ಪಿ ನಾಗೇಶ ಹೇಳಿದ್ದಾರೆ. ಮತ್ತೊಂದು ಹೆಣ್ಣು ಮಗುವಿನ ಜೊತೆ ಆಟೋದಲ್ಲಿ ತೆರಳುತ್ತಿದ್ದಾಗ ಆಟೋ ಚಾಲಕನಿಗೆ ಅನುಮಾನ ವ್ಯಕ್ತವಾಗಿದೆ. ಅಲ್ಲದೆ, ಆಕೆ ಮಹಿಳೆ ಫೋನ್​ನಲ್ಲಿ ಮಾತನಾಡುವುದನ್ನು ಗಮನಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಬಿಕಾಳನ್ನು ವಶಕ್ಕೆ ಪಡೆದಿದ್ದಾರೆ. ನಂತರ ಅವರು ಪರೇಸಂದ್ರ ಪೊಲೀಸರಿಗೆ ಮಹಿಳೆಯನ್ನು ಒಪ್ಪಿಸಿದ್ದಾರೆ ಎಂದರು.

ಇತ್ತೀಚೆಗೆ, ಒಂಬತ್ತು ತಿಂಗಳ ಹಸುಗೂಸಿಗೆ ಎಲೆ, ಅಡಿಕೆ ತಿನ್ನಿಸಿ ಅಜ್ಜಿ ಕೊಲೆ ಮಾಡಿರುವ ಆರೋಪ ಗದಗ ಜಿಲ್ಲೆಯಲ್ಲಿ ಕೇಳಿಬಂದಿತ್ತು. ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ನವೆಂಬರ್ 22 ರಂದು ಈ ಹತ್ಯೆ ನಡೆದಿತ್ತು. ಮೂರು ದಿನಗಳ ನಂತರ ಮೃತ ಮಗುವಿನ ತಾಯಿ ನಾಗರತ್ನ ತನ್ನ ಅತ್ತೆ ಸರೋಜಾ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಗೆ ದೂರು ನೀಡಿ ಇವರೇ ನನ್ನ ಮಗುವನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಹೆರಿಗೆಯಾದ 5 ತಿಂಗಳ ಬಳಿಕ ನಾಗರತ್ನ ಗಂಡನ ಮನೆಗೆ ಬಂದಿದ್ದರು. ಈ ವೇಳೆ ಅತ್ತೆ ಸರೋಜಾ, ಇಷ್ಟು ಬೇಗ ಮಗು ಬೇಕಿತ್ತಾ ಅಂತ ಪ್ರಶ್ನೆ ಮಾಡಿದ್ದಾರೆ. ಇದೇ ಕೋಪದಲ್ಲಿ ಮಗುವಿಗೆ ಅಡಕೆ ಹೋಳು, ಎಲೆ ತಿನ್ನಿಸಿ ಕೊಲೆ ಮಾಡಿದ್ದಾರೆ ಎಂದು ನಾಗರಾತ್ನ ಆರೋಪಿಸಿದ್ದರು. ನ.22ರಂದು ಮಗುವಿನ ಅಂತ್ಯಸಂಸ್ಕಾರ ನೆರವೇರಿತ್ತು. ನಾಗರಾತ್ನ ದೂರು ನೀಡಿದ ನಂತರ ಹೂತಿಟ್ಟ ಮಗುವಿನ ಮೃತದೇಹವನ್ನು ಪೊಲೀಸರು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist