ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!

Twitter
Facebook
LinkedIn
WhatsApp
8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!

ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ (Dasara Elephant Arjuna) ಮೃತಪಟ್ಟಿದೆ. ಸಕಲೇಶಪುರ ತಾಲೂಕಿನ‌ ಯಸಳೂರು ವಲಯದ ಬಾಳೆಕೆರೆ ಅರಣ್ಯದಲ್ಲಿ ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡು ಅರ್ಜುನ (Dasara Elephant Arjuna) ಕೊನೆಯುಸಿರೆಳೆದಿದೆ.

ಬಾಳೆಕೆರೆ ಅರಣ್ಯದಲ್ಲಿ ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. 12 ಕಾಡಾನೆಗನ್ನು ಸೆರೆ ಹಿಡಿಯಲು ಅರಿವಳಿಕೆ ಮದ್ದು ನೀಡುವಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ದಾಳಿ ತೀವ್ರವಾಗುತ್ತಿದ್ದಂತೆ ಮೂರು ಆನೆಗಳು ಹಿಂದೆ ಸರಿದಿವೆ. ಆದರೆ, ಹಿಮ್ಮೆಟ್ಟಿಸಲು ಯತ್ನಿಸಿದ ಅರ್ಜುನ ಮೇಲೆ ಕಾಡಾನೆ ಭೀಕರ ದಾಳಿ ನಡೆಸಿ ಹೊಟ್ಟೆ ಭಾಗಕ್ಕೆ ದಂತಗಳಿಂದ ತಿವಿದಿದ್ದರಿಂದ ಅರ್ಜುನ ಮೃತಪಟ್ಟಿದೆ.

 

ಕಳೆದ ಒಂದು ವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಎಲ್ಲಾ ಸಾಕಾನೆಗಳಿಗಿಂತ ಬಲಶಾಲಿಯಾಗಿದ್ದ ಅರ್ಜುನ, ಆಪರೇಷನ್‌ನಲ್ಲಿ ತಂಡದ ನಾಯಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ಅರ್ಜುನನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೀರವ ಮೌನ ಆವರಿಸಿದ್ದು, ಮಾವುತರು ಕಣ್ಣೀರಿಡುತ್ತಿದ್ದಾರೆ.

 

ಅರ್ಜುನ ಸಾವು ಹಿನ್ನೆಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಕಾಡಾನೆ ಅಲ್ಲಿಯೇ ಇದ್ದಿದ್ದರಿಂದ ಕೆಲಕಾಲ ಮೃತ ಅರ್ಜುನನ ಸಮೀಪವೂ ಹೋಗಲಾರದೆ ಅರಣ್ಯ ಇಲಾಖೆ ಸಿಬ್ಬಂದಿ ದೂರನಿಂತಿದ್ದರು. ಕಾಡಾನೆ ದೂರ ಸರಿದ ಬಳಿಕ ಅರ್ಜನನ ಬಳಿ ಸಿಬ್ಬಂದಿ ತೆರಳಲಿದರು. ಕೊಂಚ ಎಡವಟ್ಟಾಗಿದ್ದರೂ ಕೂಡ ಹಲವು ಸಿಬ್ಬಂದಿ ಪ್ರಾಣಕ್ಕೆ ಸಂಚಕಾರ ಉಂಟಾಗುತ್ತಿತ್ತು. ಅದೃಷ್ಟವಶಾತ್ ಅರ್ಜುನ, ಕಾಡಾನೆ ಜತೆ ಕಾಳಗಕ್ಕೆ ನಿಂತಿದ್ದರಿಂದ ದುರಂತ ತಪ್ಪಿದ್ದು, ತನ್ನ ಪ್ರಾಣ ತ್ಯಾಗ ಮಾಡಿ ಹಲವರ ಜೀವವನ್ನು ಅರ್ಜುನ ಉಳಿಸಿದ್ದಾನೆ.

ಡಿಎಫ್‌ಒ ಮೋಹನ್ ಕುಮಾರ್ ಮಾತನಾಡಿ, ಕಾಡಾನೆ‌ ಸೆರೆ ಕಾರ್ಯಾಚರಣೆ ವೇಳೆ ಮದವೇರಿದ ಗಂಡಾನೆ ನಮ್ಮ‌ ಅರ್ಜುನನ ಮೇಲೆ ಅಟ್ಯಾಕ್ ಮಾಡಿತು. ಅರಿವಳಿಕೆ ಮದ್ದು ನೀಡಿದರೂ ನಿಲ್ಲದೆ ಅದು ದಾಳಿ ಮಾಡಿದ್ದರಿಂದ ನಮ್ಮ ಸಿಬ್ಬಂದಿ, ಸಾಕಾನೆಗಳು ವಾಪಸ್‌ ಬಂದಿವೆ. ಆದರೆ, ಕಾಡಾನೆ ಸ್ವಲ್ಪ ಬಲಿಷ್ಟವಾಗಿತ್ತು, ಅಲ್ಲದೇ ದಂತಗಳು ಚೂಪಾಗಿದ್ದವು. ಕಾದಾಟದಲ್ಲಿ ಅರ್ಜುನ ಸಾವನ್ನಪ್ಪಿದ. ಈ ಬಗ್ಗೆ ನಮ್ಮ‌ ಮೇಲಾಧಿಕಾರಿಗಳ‌ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ಅರ್ಜುನ ಸಾವಿನ‌ ವಿಷಯದಿಂದ ಕಂಗಾಲಾದ ಮಾವುತ ವಿನೋದ್ ಅಸ್ವಸ್ಥರಾಗಿ ಪ್ರಜ್ಞೆತಪ್ಪಿ ಬಿದ್ದ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಯಿತು. ಅರ್ಜುನನ್ನು ಕಳೆದುಕೊಂಡಿದ್ದರಿಂದ ಅರಣ್ಯದೊಳಗೆ ಮಾವುತರ ರೋದನ ಮುಗಿಲು ಮುಟ್ಟಿದ್ದು, ಬಿಕ್ಕಿಬಿಕ್ಕಿ ಅಳುತ್ತಿದ್ದದ್ದು ಕಂಡುಬಂತು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist