ಮಂಗಳವಾರ, ಮೇ 14, 2024
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿರಾಡಿ ಘಾಟ್ ನಲ್ಲಿ ಲಾರಿಗಳ ನಡುವೆ ಅಪಘಾತ ; ಇಬ್ಬರು ಸ್ಥಳದಲ್ಲೇ ಸಾವು!

Twitter
Facebook
LinkedIn
WhatsApp
ಶಿರಾಡಿ ಘಾಟ್ ನಲ್ಲಿ ಲಾರಿಗಳ ನಡುವೆ ಅಪಘಾತ ; ಇಬ್ಬರು ಸ್ಥಳದಲ್ಲೇ ಸಾವು!

ನೆಲ್ಯಾಡಿ: ಮಿನಿ ಲಾರಿಯೊಂದಕ್ಕೆ ಘನ ವಾಹನವೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು ಈ ಅಪಘಾತದಲ್ಲಿ ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ ಕೆಂಪು ಹೊಳೆ ಸಮೀಪ ನಡೆದಿದೆ. 

ಮೃತಪಟ್ಟವರು ಹಾಸನ ನಿವಾಸಿಗಳು ಎಂದು ತಿಳಿದುಬಂದಿದೆ. ಮಿನಿ ಲಾರಿ ಹಾಸನದಿಂದ ಮಂಗಳೂರಿಗೆ ಬರುತ್ತಿತ್ತು. ಶಿರಾಡಿ ಘಾಟ್ ನ ಕೆಂಪು ಹೊಳೆ ಸಮೀಪ ಮಿನಿ ಲಾರಿಗೆ ಯಾವುದೋ ಘನ ವಾಹನ ಡಿಕ್ಕಿ ಯಾಗಿ ಪರಾರಿಯಾಗಿದೆ.

ಘಟನೆಯಲ್ಲಿ ಮಿನಿ ಲಾರಿ ಸಂಪೂರ್ಣ ಜಖಂ ಗೊಂಡಿದೆ. ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಸಕಲೇಶಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ವಿದೇಶದಿಂದ ಹೆಂಡತಿಗೆ ವಾಟ್ಸಾಪ್‌ನಲ್ಲಿ ತ್ರಿವಳಿ ತಲಾಖ್ ನೀಡಿದ ಪತಿ – FIR ದಾಖಲು..!

ಸುಳ್ಯ : ವಿದೇಶದಲ್ಲಿರುವ ಪತಿ ಡೆಲಿವರಿಗೆಂದು ಭಾರತಕ್ಕೆ ಬಂದಿರುವ ತನ್ನ ಹೆಂಡತಿಗೆ ತಲಾಖ್ ನೀಡಿ ಅಘಾತ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ತಲಾಖ್ ಗಂಡನ ವಿರುದ್ಧ ಪತ್ನಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಿಸ್ರೀಯಾ ಎರಡನೇ ಮಗುವಿನ ಹೆರಿಗೆಗೆ ಭಾರತಕ್ಕೆ ಬಂದಿದ್ದು, 6 ತಿಂಗಳಿಂದ ಇಲ್ಲೇ ನೆಲೆಸಿದ್ದಾರೆ.

ಅಬ್ದುಲ್ ರಷೀದ್ ಮೂಲತಃ ಕೇರಳದ ತ್ರಿಶೂರ್​ ನಿವಾಸಿಯಾದಗಿದ್ದು ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಈ ಮಧ್ಯೆ ಆಕೆಯ ವಿರುದ್ಧ ವೈಮನಸ್ಯ ಬೆಳೆಸಿಕೊಂಡ ಗಂಡ ಅಬ್ದುಲ್ ರಷೀದ್ ದಿಢೀರನೆ ವಾಟ್ಸಾಪ್ ಮೂಲಕ ತಲಾಕ್ ಸಂದೇಶ ರವಾನಿಸಿದ್ದಾನೆ.

ತ್ರಿವಳಿ ತಲಾಖ್​ಗೆ ದೇಶಾದ್ಯಂತ ನಿಷೇಧವಿದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆಯ ಕಾಯ್ದೆ ಈಗಾಗಲೇ ಜಾರಿ ಮಾಡಲಾಗಿದೆ.

ಹಾಗಿದ್ದರೂ, ಅಬ್ದುಲ್ ರಷೀದ್ ಎಂಬಾತ ಇಸ್ಲಾಂ ನಿಯಮವನ್ನು ಪತ್ನಿಯ ಮೇಲೆ ಹೇರಲು ಯತ್ನಿಸಿದ್ದಾನೆ.

ಮೊದಲ ಮಗುವಾದ ಬಳಿಕ ಮಿಸ್ರೀಯಾ ವಿದೇಶದಲ್ಲಿ ಪತಿ ಜೊತೆ ನೆಲೆಸಿದ್ದರು.

ಎರಡನೇ ಮಗುವಿನ ಹೆರಿಗೆಗೆ ಬಂದಾಗ ಮನಸ್ತಾಪ ತಲೆದೋರಿದೆ ಎಂದು ತಿಳಿದುಬಂದಿದ್ದು ಸುಳ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ