ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಂಸತ್ತಿನಲ್ಲಿ ಕಲಾಪದೊಳಗೆ ಒಳನುಗ್ಗಿದವರಿಗೆ ಪ್ರತಾಪ್​​​ ಸಿಂಹ ಪಿಎ ಕಡೆಯಿಂದ ಪಾಸ್..!

Twitter
Facebook
LinkedIn
WhatsApp
ಸಂಸತ್ತಿನಲ್ಲಿ ಕಲಾಪದೊಳಗೆ ಒಳನುಗ್ಗಿದವರಿಗೆ ಪ್ರತಾಪ್​​​ ಸಿಂಹ ಪಿಎ ಕಡೆಯಿಂದ ಪಾಸ್..!

ದೆಹಲಿ. ಡಿ.13: ದೆಹಲಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ವೇಳೆ ಇಬ್ಬರು ವ್ಯಕ್ತಿಗಳು ಸಂಸತ್​​​ ಒಳಗೆ ಅಶ್ರುವಾಯು ಸಿಡಿಸಿದ್ದಾರೆ. ಈ ವೇಳೆ ಸಂಸತ್​​​ನಲ್ಲಿ (Parliament) ಕೆಲಕಾಲ ಗೊಂದಲ ಸೃಷ್ಟಿಯಾಗಿದೆ. ಇನ್ನು ಈ ವ್ಯಕ್ತಿಗಳು ಕಲಾಪ ನಡೆಯುತ್ತಿರುವಲ್ಲಿಗೆ ಹೇಗೆ ಬಂದಿದ್ದಾರೆ ಎಂದು ಪತ್ತೆ ಮಾಡಲಾಗುತ್ತಿದೆ. ಕೆಲವೊಂದು ವರದಿಗಳ ಪ್ರಕಾರ ಮೈಸೂರು ಸಂಸದ ಪ್ರತಾಪ್​​​ ಸಿಂಹ ಪಿಎ ಈ ಇಬ್ಬರಿಗೆ ಎಂಟ್ರಿ ಪಾಸ್​​ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಸದರ ಪಿಎ ನೀಡಿರುವ ಪಾಸ್​​​ ಫೋಟೋ ಎಲ್ಲ ಕಡೆ ವೈರಲ್​​​ ಆಗಿದೆ.

ಸಂದರ್ಶಕರ ಗ್ಯಾಲರಿಯಿಂದ ಭಾರತೀಯ ಸಂಸತ್ತಿನ ಒಳಗೆ ಜಿಗಿದು ಹೊಗೆ ಡಬ್ಬಿ ಎಸೆದ ವ್ಯಕ್ತಿಯನ್ನು ಸಾಗರ್ ಶರ್ಮಾ ಮತ್ತು ಮೈಸೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಮನೋರಂಜನ್ ಎಂದು ಗುರುತಿಸಲಾಗಿದೆ. ವೈರಲ್​​ ಆಗಿರುವ ಪಾರ್ಲಿಮೆಂಟ್ ಪಾಸ್ ಪ್ರಕಾರ, ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರ ಪಿಎ ಸಂಸತ್ ಪ್ರವೇಶಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಹೇಳಲಾಗಿದೆ.ಇದುವರೆಗೆ 4 ಮಂದಿಯನ್ನು ಬಂಧಿಸಲಾಗಿದೆ ಎಂದು ಪಾಸ್​​​​ ಫೋಟೋವನ್ನು ಆದಿತ್ಯ ರಾಜ್ ಕೌಲ್ ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ.

ಸಂಸತ್ ಮೇಲೆ ನಡೆದ ಭಯೋತ್ಪಾದನಾ ದಾಳಿಯನ್ನು ನೆನಪಿಸುವಂತಹ ಘಟನೆ

ಎರಡು ದಶಕದ ಹಿಂದೆ ಸಂಸತ್ ಮೇಲೆ ನಡೆದ ಭಯೋತ್ಪಾದನಾ ದಾಳಿಯನ್ನು ನೆನಪಿಸುವಂತಹ ಘಟನೆಯೊಂದು ಇಂದು ನಡೆದಿದೆ. ಮತ್ತೆ ಸಂಸತ್​ನಲ್ಲಿ ಭದ್ರತಾ ಲೋಪ ಉಂಟಾಗಿದೆ. ಇಂದು ಲೋಕಸಭೆಯ ಕಲಾಪದಲ್ಲಿ ಇದ್ದಕ್ಕಿದ್ದಂತೆ ಇಬ್ಬರು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಅಶ್ರುವಾಯು ಸಿಡಿಸಿದ್ದಾರೆ. ಸ್ಮೋಕ್​ಗನ್​ನಿಂದ ಹಳದಿ ಹೊಗೆ ಬರುತ್ತಿದ್ದು, ಗನ್ ಪೌಡರ್ ವಾಸನೆ ಕೂಡ ಬರುತ್ತಿತ್ತು.ಈ ಘಟನೆಯಿಂದಾಗಿ ಸಂಸತ್ತಿನಲ್ಲಿ ಗದ್ದಲ ಉಂಟಾಯಿತು. ಈ ಘಟನೆಯು ಡಿಸೆಂಬರ್ 13, 2001 ರಂದು ಸಂಸತ್ತಿನ ಮೇಲಿನ ದಾಳಿಯ ನೆನಪುಗಳನ್ನು ಪುನರುಜ್ಜೀವನಗೊಳಿಸಿದೆ. 2001ರಲ್ಲಿ ಸಂಸತ್ತಿನ ಮೇಲಿನ ದಾಳಿಯಲ್ಲಿ 9 ಮಂದಿ ಹುತಾತ್ಮರಾಗಿದ್ದರು.

ಈ ಘಟನೆಯ ತನಿಖೆ ನಡೆಯುತ್ತಿದೆ. ಪ್ರಾಥಮಿಕ ವಿಚಾರಣೆ ನಡೆಸಲಾಗುತ್ತಿದೆ. ಒಳಗೆ ಜಿಗಿದ ಇಬ್ಬರಿಗೆ ಯಾರೊಂದಿಗಾದರೂ ವೈಯಕ್ತಿಕ ದ್ವೇಷವಿತ್ತೇ? ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಶಿವಸೇನೆ ಸಂಸದ ಅರವಿಂದ್ ಸಾವಂತ್ ಹೇಳಿದ್ದಾರೆ. ಅವರು ಕೆಳಗೆ ಹಾರಿದಾಗ, ಲೋಕಸಭೆಯಲ್ಲಿ ಹಿಂದಿನ ಬೆಂಚುಗಳು ಖಾಲಿಯಾಗಿದ್ದವು, ಆದ್ದರಿಂದ ಅವರು ಸಿಕ್ಕಿಬಿದಿದ್ದಾರೆ. ಈ ಘಟನೆ ನಡೆದಾಗ ಇಬ್ಬರು ಸಚಿವರು ಕೂಡ ಸದನದಲ್ಲಿ ಹಾಜರಿದ್ದರು. ಓರ್ವ ಪುರುಷ ಮತ್ತು ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ಲೋಪ ಬಗ್ಗೆ ಪ್ರಾಥಮಿಕ ವರದಿ ಬಂದಿದೆ. ವಿವರವಾದ ತನಿಖಾ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು. ಒಳಗೆ ಬಂದ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ, ಕಟ್ಟಡದ ಹೊರಗಿದ್ದ ಇಬ್ಬರನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಪ್ರತ್ಯಕ್ಷದರ್ಶಿ ಮೋಹನ್ ದಾನಪ್ಪ ಹೇಳಿದ್ದೇನು?

ದೆಹಲಿಯಲ್ಲಿ ಮಾಧ್ಯಮಕ್ಕೆ ಪ್ರತ್ಯಕ್ಷದರ್ಶಿ ಮೋಹನ್ ದಾನಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಸಂಸತ್​ ಕಲಾಪದ ನೋಡಲು ನಾವೆಲ್ಲರೂ ಬಂದಿದ್ದೆವು. ನಾವು ಮೊದಲ ಗ್ಯಾಲರಿಯಲ್ಲಿದ್ದೆವು, ಅವನು ಗ್ಯಾಲರಿ 2ರಲ್ಲಿ ಇದ್ದ, ಗ್ಯಾಲರಿಯಿಂದ ಏಕಾಏಕಿ ಸದನಕ್ಕೆ ಜಿಗಿದು ಕಲರ್​​​ ಸ್ಪ್ರೇ ಹರಡಿದ್ದಾನೆ. ಬಲಗಾಲಿನ ಶೂನಿಂದ ತೆಗೆದು ಹಳದಿ ಕಲರ್​​​​​ ಸ್ಪ್ರೇ ಹರಡಿದ್ದಾನೆ. ಈ ವೇಳೆ ಕೆಲ ಸಂಸದರು ಆ ವ್ಯಕ್ತಿಯನ್ನು ಹಿಡಿದಿದ್ದರೆ. ನಂತರ ಆರೋಪಿಯನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist