ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ;ಇಬ್ಬರು ಬಾಲ ಕಾರ್ಮಿಕರು ಪತ್ತೆ- ಎಫ್ಐಆರ್ ದಾಖಲು!

Twitter
Facebook
LinkedIn
WhatsApp
ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ;ಇಬ್ಬರು ಬಾಲ ಕಾರ್ಮಿಕರು ಪತ್ತೆ- ಎಫ್ಐಆರ್ ದಾಖಲು!

ಬೆಂಗಳೂರು: ತೆರಿಗೆ ವಂಚನೆಗೆ ಸಂಬಂಧಿಸಿ ಆಭೂಷಣ್‌ ಜ್ಯುವೆಲರ್ಸ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ನಲ್ಕು ದಿನಗಳಿಂದ ತಪಾಸಣೆ ನಡೆಯುತ್ತಿದೆ. ಈ ನಡುವೆ ಇಬ್ಬರು ಬಾಲ ಕಾರ್ಮಿಕರನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದ್ದು, ಮತ್ತೊಂದು ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಆಭೂಷಣ್‌ ಜ್ಯುವೆಲರ್ಸ್‌ ಮೇಲೆ ದಾಳಿ ವೇಳೆ ಐಟಿ ಅಧಿಕಾರಿಗಳಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಮಳಿಗೆಗಳ ಹಾಗೂ ಲೆಕ್ಕಪತ್ರಗಳ ಪರಿಶೀಲನೆ ನಡೆದಿದೆ. ಜ್ಯುವೆಲರ್ಸ್‌ನ ಮಾಲಿಕರ ಜಯನಗರದ ಮನೆಯಲ್ಲೂ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಇಬ್ಬರು ಅಪ್ರಾಪ್ತ ಬಾಲಕಿಯರು ಪತ್ತೆಯಾಗಿದ್ದರು.

10 ಹಾಗೂ 8 ವರ್ಷದ ಇಬ್ಬರು ಬಾಲ ಕಾರ್ಮಿಕರು ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರಿಗೆ ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಲಿಕರಾದ ಅಶೋಕ್ ಕುಮಾರ್, ಶ್ರೇಯಸ್ ಚೌಡರೆ ಮತ್ತು ಗೌರವ್ ಚೌಡರೆ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಮನೆಯ ಮಾಲಕಿ ಪಿಂಕಿ ಜೈನ್ ಆರೈಕೆಗೆ ಇವರನ್ನು ಕರೆತರಲಾಗಿದೆ. ಇವರು ಬಿಹಾರದ ಗಾಯಾ ಜಿಲ್ಲೆಯ ಮಕ್ಕಳು. ತಾಕತೂರಿನ ಕಾಜೋಲ್ ಮತ್ತು ಸುಹಾನಿಯ ಎಂದು ಗುರುತಿಸಲಾಗಿದ್ದು, ಈವರನ್ನು ರಕ್ಷಿಸಿ ಹಾಸ್ಟೆಲ್‌ಗೆ ಶಿಫ್ಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜೆಜೆ ಆ್ಯಕ್ಟ್ ಸೆಕ್ಷನ್‌ 79, ಚೈಲ್ಡ್ ಲೇಬರ್ ಆ್ಯಕ್ಟ್ ಸೆಕ್ಷನ್‌ 3 ಮತ್ತು 14 ಅಡಿ ಕೇಸ್ ದಾಖಲಿಸಲಾಗಿದೆ.

ಆಭೂಷಣ್ ಜ್ಯುವೇಲರ್ಸ್ ಮೇಲೆ ಐಟಿ ದಾಳಿಯಲ್ಲಿ, ನಾಲ್ಕು ದಿನವಾದರೂ ಐಟಿ ಅಧಿಕಾರಿಗಳ ಪರಿಶೀಲನೆ ಮುಗಿದಿಲ್ಲ. ಇಂದು ಸಹ ಪರಿಶೀಲನೆ ಮುಕ್ತಾಯ ಆಗುವುದು ಅನುಮಾನ. ಸಾವಿರಾರು ಕಿಲೋ ಚಿನ್ನಾಭರಣ ಮಾರಾಟದಲ್ಲಿ ಅಕ್ರಮ ಎಸಗಲಾಗಿದ್ದು, ಹಲವು ವರ್ಷಗಳ ಅಕ್ರಮವನ್ನು ಬಯಲು ಮಾಡಲಾಗುತ್ತಿದೆ. ಅಗೆದಷ್ಟೂ ದಾಖಲೆಗಳು ಸಿಗುತ್ತಿದ್ದು, ಸೂಕ್ತ ದಾಖಲೆಗಳನ್ನು ಐಟಿ ಟೀಂ ರಿಕವರಿ ಮಾಡುತ್ತಿದೆ.

ಬಿಲ್ಲಿಂಗ್ ಮಾಡಲು ಪೆನ್ ಡ್ರೈವ್ ಬೇಸ್ ಟೆಕ್ನಾಲಜಿ ಬಳಕೆ ಮಾಡಲಾಗಿದ್ದು, ಒಂದೇ ಸಿಸ್ಟಮ್‌ನಲ್ಲಿ ಎರಡು ರೀತಿಯ ಅಕೌಂಟ್ ಮೆಂಟೇನ್ ಮಾಡಿದ್ದುದು ಪತ್ತೆಯಾಗಿದೆ. ಸಿಸ್ಟಮ್ ಡ್ರೈವ್ ಮತ್ತು ಪೆನ್ ಡ್ರೈವ್ ಅಕೌಂಟ್ ಮೆಂಟೇನ್ ಮಾಡಲಾಗಿದೆ. ಇದಕ್ಕೆ ಮಾಲೀಕರಾದ ಮಹಾವೀರ್ ಬೋರಾ & ವಿಶಾಲ್ ಬೋರಾ ಪಾಸ್‌ವರ್ಡ್ ಹಾಕಿದರೆ ಮಾತ್ರ ಓಪನ್ ಆಗುವಂತಿದೆ. ಇವರಿಗೆ ಬರುತ್ತಿದ್ದ ಚಿನ್ನದ ದಾಖಲೆಗಳನ್ನು ಐಟಿ ಹಿಂಬಾಲಿಸಿದ್ದು, ಹಲವಾರು ತಿಂಗಳ ಅಕ್ರಮ ಪತ್ತೆ ಮಾಡಿ ದಾಳಿ ನಡೆಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist