ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮತ್ತೆ ವಿಪಕ್ಷದ ಇಬ್ಬರು ಸಂಸದರು ಅಮಾನತು..!

Twitter
Facebook
LinkedIn
WhatsApp
ಮತ್ತೆ ವಿಪಕ್ಷದ ಇಬ್ಬರು ಸಂಸದರು ಅಮಾನತು..!

ದೆಹಲಿ ಡಿಸೆಂಬರ್ 20: ಲೋಕಸಭೆಯಲ್ಲಿ (Lok sabha) ಡಿಸೆಂಬರ್ 13 ರಂದು ನಡೆದ ಭದ್ರತಾ ಲೋಪದ (Security breach)ಕುರಿತು ಚರ್ಚೆ ನಡೆಸಬೇಕೆಂದು ಒತ್ತಾಯಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಇನ್ನೂ ಇಬ್ಬರು ವಿರೋಧ ಪಕ್ಷದ ಸಂಸದರನ್ನು ಬುಧವಾರ ಸಂಸತ್ತಿನ ಚಳಿಗಾಲದ ಅಧಿವೇಶನದ (Winter Session of Parliament) ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಇದೇ ಕಾರಣಕ್ಕಾಗಿ 49 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಿದ ಒಂದು ದಿನದ ನಂತರ ಇದೀಗ ಇಬ್ಬರನ್ನು ಅಮಾನತು ಮಾಡಲಾಗಿದೆ. ಇದು ಡಿಸೆಂಬರ್ 14 ರಿಂದ ಉಭಯ ಸದನಗಳಿಂದ ಅಮಾನತುಗೊಂಡಿರುವ ಒಟ್ಟು ಸಂಸದರ ಸಂಖ್ಯೆ 143ಕ್ಕೇರಿದೆ. ಲೋಕಸಭೆಯಲ್ಲಿ 97 ಮತ್ತು ರಾಜ್ಯಸಭೆಯಲ್ಲಿ 46 ಕ್ಕೆ ಸದಸ್ಯರನ್ನು ಅಮಾನತು ಮಾಡಲಾಗಿದೆ.

ಬುಧವಾರ, ಲೋಕಸಭೆಯ ಸಂಸದರಾದ ಥಾಮಸ್ ಚಾಝಿಕ್ಕಾಡನ್ ಮತ್ತು ಎಎಂ ಆರಿಫ್ ಅವರನ್ನು “ಫಲಕ ಪ್ರದರ್ಶಿಸಿದ ಮತ್ತು ಸದನದ ಬಾವಿಗೆ ಪ್ರವೇಶಿಸಿದ” ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.  ಚಾಝಿಕ್ಕಾಡನ್ ಕೇರಳ ಕಾಂಗ್ರೆಸ್ (ಮಾಣಿ) ಮತ್ತು ಆರಿಫ್ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪಕ್ಷದವರು.

ಭದ್ರತಾ ಉಲ್ಲಂಘನೆ ಬಗ್ಗೆ.ಗೃಹ ಸಚಿವರು ಸದನಕ್ಕೆ ಬಂದು ಏನಾಯಿತು ಮತ್ತು ಅದರ ಹಿಂದಿನ ಕಾರಣದ ಬಗ್ಗೆ ವಿವರಣೆ ನೀಡಬೇಕು ಎಂಬುದು ಪ್ರತಿಪಕ್ಷಗಳ ಬೇಡಿಕೆಯಾಗಿದೆ ಎಂದಿದ್ದಾರೆ ಥಾಮಸ್ ಚಾಝಿಕ್ಕಾಡನ್.

ಡಿಸೆಂಬರ್ 13 ರಂದು ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸಭಾಂಗಣಕ್ಕೆ ಜಿಗಿದು ಗ್ಯಾಸ್ ಡಬ್ಬಿಗಳನ್ನು ತೆರೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ ಬಗ್ಗೆ ಚರ್ಚೆಗೆ ವಿರೋಧ ಪಕ್ಷದ ಶಾಸಕರು ಒತ್ತಾಯಿಸುತ್ತಿದ್ದಾರೆ. ಸಂಸತ್ತಿನ ಹೊರಗೆ ಒಬ್ಬ ಪುರುಷ ಮತ್ತು ಮಹಿಳೆ ಹೊಗೆ ಬಾಂಬ್ ಸಿಡಿಸಿದ್ದರು.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಆಡಳಿತಾರೂಢ ಬಿಜೆಪಿ ದೇಶದಲ್ಲಿ “ಒಂದೇ ಪಕ್ಷದ ಆಡಳಿತ” ಸ್ಥಾಪಿಸಲು ಬಯಸಿದೆ ಮತ್ತು ಆ ಕಾರಣಕ್ಕಾಗಿ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುತ್ತಿದೆ ಎಂದಿದ್ದಾರೆ.

“ಅವರು (ಮೋದಿ ಮತ್ತು ಬಿಜೆಪಿ) ಏಕ್ ಅಖೇಲಾ(ಒಬ್ಬರೇ ಸಾಕು) ಬಗ್ಗೆ ಮಾತನಾಡುತ್ತಾರೆ ಅದು ಪ್ರಜಾಪ್ರಭುತ್ವವನ್ನು ಕೆಡವುವಂತಿದೆ” ಎಂದು ಖರ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. “ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸುವ ಮೂಲಕ ಅವರು ನಿಖರವಾಗಿ ಇದನ್ನೇ ಮಾಡಿದ್ದಾರೆ ಎಂದಿದ್ದಾರೆ ಖರ್ಗೆ.

ಸಂಸತ್ತಿನಲ್ಲಿ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವರಿಂದ ಹೇಳಿಕೆ ಪಡೆಯಲು 140 ಕ್ಕೂ ಹೆಚ್ಚು ಪ್ರತಿಪಕ್ಷಗಳ ಶಾಸಕರನ್ನು ಅಮಾನತುಗೊಳಿಸಲಾಗಿದ್ದು, ಡಿಸೆಂಬರ್ 13 ರಂದು ಒಳನುಗ್ಗುವವರ ಪ್ರವೇಶಕ್ಕೆ ಅನುಕೂಲ ಮಾಡಿಕೊಟ್ಟ ಬಿಜೆಪಿ ಸಂಸದರನ್ನು ಯಾವುದೇ ವಿಚಾರಣೆಗೆ ಒಳಪಡಿಸಲಾಗಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಮಂಗಳವಾರ, ಲೋಕಸಭೆಯಿಂದ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಳಮನೆಗೆ ಬಂದು ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಇಂಡಿಯನ್ ಎವಿಡೆನ್ಸ್ ಕಾಯ್ದೆಯನ್ನು ಬದಲಿಸುವ ಮೂರು ನಿರ್ಣಾಯಕ ಮಸೂದೆಗಳನ್ನು ಚರ್ಚಿಸಲು ಪ್ರಸ್ತಾವನೆಯನ್ನು ಮಂಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist