ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಕಳ :ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಮರಕ್ಕೆ ಡಿಕ್ಕಿ ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

Twitter
Facebook
LinkedIn
WhatsApp
ಕಾರ್ಕಳ :ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಮರಕ್ಕೆ ಡಿಕ್ಕಿ ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

ಕಾರ್ಕಳ : ಶೈಕ್ಷಣಿಕ ಪ್ರವಾಸ ತೆರಳಿದ್ದ ಸರಕಾರಿ ಬಸ್‌ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮಾಳದಲ್ಲಿ ಮರಕ್ಕೆ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಹಾರ್ವಾಡ ಸರಕಾರಿ ಪ್ರೌಢಶಾಲೆಯ ಮಕ್ಕಳು ಮಂಗಳವಾರ ಕುದುರೆಮುಖ ಹಾಗೂ ಶೃಂಗೇರಿಗೆ ಪ್ರವಾಸ ಹೊರಟಿದ್ದರು.  ಬುಧವಾರ ಮಧ್ಯಾಹ್ನ ವಾಪಸಾಗುತ್ತಿದ್ದ ವೇಳೆ ಮಾಳದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ.

ಬಸ್‌ನಲ್ಲಿ 43 ಮಂದಿ ವಿದ್ಯಾರ್ಥಿಗಳು, ಐವರು ಶಿಕ್ಷಕರಿದ್ದು ಅವರ ಪೈಕಿ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಗಳಿಗೆ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!

ಬಳ್ಳಾರಿ: ಕಳೆದ 2 ದಿನಗಳ ಹಿಂದೆ ಗಣಿನಾಡು ಬಳ್ಳಾರಿಯಲ್ಲಿ (Ballary) ಎನ್‌ಐಎ (NIA) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಬಂಧನಕ್ಕೊಳಗಾದ ವಿದ್ಯಾರ್ಥಿಯ ಕತೆ ಕೇಳಿದರೆ ಒಂದು ಕ್ಷಣ ಬೆಚ್ಚಿಬೀಳೋದು ಗ್ಯಾರಂಟಿ. ಬಂಧನಕ್ಕೆ ಒಳಗಾದ ಸಮೀರ್ ಕಾಲೇಜು ವಿದ್ಯಾರ್ಥಿಯಾಗಿದ್ದು, ವ್ಯಾಸಂಗ ಮಾಡೋವಾಗಲೇ ಆತನಿಗೆ ಐಎಸ್‌ಐಎಸ್ (ISIS) ಸಂಪರ್ಕ ಇತ್ತು ಎನ್ನುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.

ಎನ್‌ಐಎ ದಾಳಿಯಲ್ಲಿ ಬಳ್ಳಾರಿ ಮೂಲದ ಇಬ್ಬರನ್ನು ಬಂಧಿಸಿದ್ದು ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕಾಲೇಜಿನಲ್ಲಿ ವ್ಯಾಸಂಗ ಮಾಡೋವಾಗಲೇ ಆ ಯುವಕನಿಗಿರೋ ಸಂಪರ್ಕ ಮಾತ್ರ ಬೆಚ್ಚಿ ಬೀಳುವಂತಿದೆ. ಕೌಲ್ ಬಜಾರ್ ಪ್ರದೇಶ, ಜಾಗೃತಿ ನಗರ ಬ್ರೂಸ್ ಪೇಟೆ ಏರಿಯಾ ಸೇರಿ ಒಟ್ಟು 8 ಕಡೆ ದಾಳಿ ಮಾಡಲಾಗಿತ್ತು.

ದಾಳಿಯಲ್ಲಿ ಸೈಯದ್ ಸಮೀರ್ ಮತ್ತು ಮೊಹಮ್ಮದ್ ಸುಲೇಮಾನ್ ಬಂಧಿಸಲಾಗಿತ್ತು. ಮೊಹಮ್ಮದ್ ಸುಲೇಮಾನ್ ಉಗ್ರ ಸಂಘಟನೆ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ. ಇದರಲ್ಲಿ ಸೈಯದ್ ಸಮೀರ್ 20ರ ಹರೆಯದ ಬಿಸಿಎ ವಿದ್ಯಾರ್ಥಿ. ಬಳ್ಳಾರಿಯ ಕಾಲೇಜೊಂದರಲ್ಲಿ ಬಿಸಿಎ 3ನೇ ಸೆಮಿಸ್ಟರ್ ಓದುತ್ತಿದ್ದಾನೆ. ಮುಸ್ಲಿಂ ಬಹುಪತ್ನಿತ್ವ ಬಗ್ಗೆ ಮತ್ತು ಮೊಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿದ ಉಪನ್ಯಾಸಕರ ವಿರುದ್ಧ ಸಮೀರ್ ತಿರುಗಿ ಬಿದ್ದಿದ್ದ. 

ಪ್ರಾಧ್ಯಾಪಕರ ವಿರುದ್ಧ ಕಳೆದ ತಿಂಗಳು ಈತ ದೊಡ್ಡ ಪ್ರತಿಭಟನೆ ಮಾಡಿದ್ದ. ಕಾಲೇಜು ಮುಂದೆ ಅಷ್ಟೇ ಅಲ್ಲದೇ ಎಸ್‌ಪಿ ಕಚೇರಿ ಮುಂದೆ ಹೈಡ್ರಾಮಾ ಮಾಡಿದ್ದ. ನೂರಾರು ಜನರನ್ನು ಸೇರಿಸಿ ಅಂದು ರಾತ್ರಿ ಕೌಲ್ ಬಜಾರ್ ಠಾಣೆ ಮುಂದೆ ಪ್ರತಿಭಟನೆ ಮಾಡಿದ್ದ. ಇವನ ವರ್ತನೆಯಿಂದ ಅಂದು ಪೊಲೀಸರೇ ಒಂದು ಕ್ಷಣ ಹೌಹಾರಿದ್ದರು. ಆದರೆ ಇದೀಗ ಎನ್‌ಐಎ ಅಧಿಕಾರಿಗಳು ಬಂಧಿಸಿರೋದು ಪೊಲೀಸರಿಗೂ ಅಚ್ಚರಿ ಮೂಡಿಸಿದೆ.

ಬಳ್ಳಾರಿಯ ಜಾಗೃತಿ ನಗರ ನಿವಾಸಿಯಾಗಿರುವ ಸಮೀರ್ ತಂದೆ-ತಾಯಿಯವರು ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಮತ್ತೊಬ್ಬ ಆರೋಪಿ ಮೊಹಮ್ಮದ್ ಸುಲೇಮಾನ್ ನಿಷೇಧಿತ ಸಂಘಟನೆ ಪಿಎಫ್‌ಐನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ. ಈತ ಕೌಲ್ ಬಜಾರ್ ಮುಖ್ಯ ರಸ್ತೆಯಲ್ಲಿ ಬಟ್ಟೆ ಅಂಗಡಿ ವ್ಯಾಪಾರ ಮಾಡುತ್ತಿದ್ದ. ಸುಲೇಮಾನ್ ಸಹಚರನಾಗಿ ಕೆಲಸ ಮಾಡುತ್ತಿದ್ದ ಸಮೀರ್ ವಿಚಾರಣೆಗೆ ಎನ್‌ಐಎ ಅಧಿಕಾರಿಗಳು ಮುಂದಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist