ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನವದೆಹಲಿ: ಭಾರತದ ಕೋವಿಡ್ -19 ಲಸಿಕೆ ಕಾರ್ಯಕ್ರಮದಲ್ಲಿ ಬಳಸಲಾಗುತ್ತಿರುವ ಎರಡು ಪ್ರಮುಖ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಅನ್ನು ಮಿಶ್ರಣ ಮಾಡುವುದಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿದೆ.
ಈ ಅಧ್ಯಯನ ಮತ್ತು ಅದರ ಕ್ಲಿನಿಕಲ್ ಪ್ರಯೋಗಗಳನ್ನು ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜು ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
“ತಮಿಳುನಾಡಿನ ಸಿಎಮ್ಸಿ ವೆಲ್ಲೂರ್ ವೈದ್ಯಕೀಯ ಕಾಲೇಜಿಗೆ ಲಸಿಕೆ ಡೋಸೇಜ್ಗಳ ಮಿಶ್ರಣದ ಕುರಿತು ಸಂಶೋಧನಾ ಅಧ್ಯಯನ ನಡೆಸಲು ಅನುಮತಿ ನೀಡಲಾಗಿದೆ” ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪಾಲ್ ಹೇಳಿದ್ದಾರೆ.
ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ನ ತಜ್ಞರ ಸಮಿತಿಯು ಜುಲೈ 29 ರಂದು ಅಧ್ಯಯನವನ್ನು ನಡೆಸಲು ಶಿಫಾರಸು ಮಾಡಿತ್ತು.
ಈ ಅಧ್ಯಯನವು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನ ಅಧ್ಯಯನಕ್ಕಿಂತ ಭಿನ್ನವಾಗಿರಲಿದೆ. ಐಸಿಎಂಆರ್ ಅಧ್ಯಯನವು ಎರಡು ಕೋವಿಡ್ ಲಸಿಕೆಗಳನ್ನು ಮಿಶ್ರಣ ಮಾಡುವುದರಿಂದ ಉತ್ತಮ ಸುರಕ್ಷತೆ ಮತ್ತು ಇಮ್ಯುನೊಜೆನಿಸಿಟಿ ಫಲಿತಾಂಶಗಳನ್ನು ಪಡೆಯಲು ಸಾಧ್ಯ ಎಂದು ಹೇಳಿದೆ. ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲಾಗಲಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?