ಭಾನುವಾರ, ಮೇ 19, 2024
ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರ ಮಿಥುನ್.

Twitter
Facebook
LinkedIn
WhatsApp
ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರ ಮಿಥುನ್.

ಚೆನ್ನೈ: ಸಿನಿಮಾ ಉದ್ಯಮದಲ್ಲಿನ ಎಲ್ಲಾ ತಪ್ಪು ಚಟುವಟಿಕೆಗಳಿಗೆ ಪರಿಶಿಷ್ಟ ಜಾತಿಯವರೇ ಕಾರಣ, ಅವರನ್ನು ಸಿನಿಮಾ ಇಂಡಸ್ಟ್ರಿಯಿಂದ ಹೊರಹಾಕಬೇಕು ಎಂದು ತಮಿಳು ನಟಿ, ತಮಿಳು ಬಿಗ್ ಬಾಸ್ ಸೀಸನ್ 3 ರಲ್ಲಿ ಭಾಗವಹಿಸಿದ್ದ ಮೀರಾ ಮಿಥುನ್ ಹೇಳಿದ್ದು, ಅವರ ವಿರುದ್ದ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಟಿ ಮೀರಾ ಮಿಥುನ್‌ ಅವರು ಪರಿಶಿಷ್ಟ ಜಾತಿಯವರನ್ನು ನಿಂದಿಸಿ, ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಕ್ಕಾಗಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಾಮಾಜಿಕವಾಗಿ ಜನಾಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಮೀರಾ ಮಿಥುನ್, “ಎಲ್ಲಾ ಪರಿಶಿಷ್ಟ ಸಮುದಾಯದ ಸದಸ್ಯರು ಕಾನೂನುಬಾಹಿರ ಚಟುವಟಿಕೆಗಳು ಮತ್ತು ಅಪರಾಧಗಳಲ್ಲಿ ತೊಡಗಿರುವ ಕಾರಣ ತೊಂದರೆ ಎದುರಿಸುತ್ತಾರೆ. ಯಾವುದೇ ಕಾರಣವಿಲ್ಲದೆ ಯಾರೂ ಅನಗತ್ಯವಾಗಿ ಕೆಟ್ಟದಾಗಿ ಮಾತನಾಡುವುದಿಲ್ಲ” ಎಂದಿದ್ದರು.

ಸಿನಿಮಾ ಉದ್ಯಮದಲ್ಲಿನ ಎಲ್ಲಾ ತಪ್ಪು ಚಟುವಟಿಕೆಗಳಿಗೆ ಪರಿಶಿಷ್ಟ ಜಾತಿಯ ನಿರ್ದೇಶಕರು ಮತ್ತು ಎಸ್ಸಿ ಸಮುದಾಯದ ಸದಸ್ಯರ ಕಾರಣ ಎಂದು ಮೀರಾ ಆರೋಪಿಸಿದ್ದಾರೆ.

“ಸಿನಿಮಾ ಉದ್ಯಮದಲ್ಲಿನ ಎಲ್ಲಾ ಪರಿಶಿಷ್ಟ ಜಾತಿಯ ಜನರನ್ನು, ನಿರ್ದೇಶಕರನ್ನು ಹೊರಹಾಕುವ ಸಮಯ ಇದು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಜೊತೆಗೆ ಎಸ್‌ಸಿ ಸಮುದಾಯದ ನಿರ್ದೇಶಕರು ತಮ್ಮ ಫೋಟೋವನ್ನು ಅವರ ಚಲನಚಿತ್ರದ ಫಸ್ಟ್ ಲುಕ್‌ಗಾಗಿ ಬಳಸಿದ್ದಾರೆ ಎಂದು ಮೀರಾ ಹೇಳಿಕೊಂಡಿದ್ದಾರೆ.

ಆಕೆಯ ಸಂದರ್ಶನದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕೆಯ ಹೇಳಿಕೆಯನ್ನು ಅನೇಕರು ಖಂಡಿಸಿದರು. ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸರಿಗೆ ಒತ್ತಾಯಿಸಿದ್ದರು.

ವಿಡುದಲೈ ಸಿರುತೈಗಲ್ ಕಚ್ಚಿಯ ಉಪ ಪ್ರಧಾನ ಕಾರ್ಯದರ್ಶಿ ವನ್ನಿ ಅರಸು ಅವರ ದೂರಿನ ಆಧಾರದ ಮೇಲೆ, ಚೆನ್ನೈ ಪೊಲೀಸರು ಐಪಿಸಿಯ 153, 153 ಎ (1) (ಎ), 505 (1) (ಬಿ) ಸೇರಿದಂತೆ SC ಮತ್ತು ST (ದೌರ್ಜನ್ಯ ತಡೆ) ಕಾಯಿದೆಯ 7 ಸೆಕ್ಷನ್‌ಗಳ ಅಡಿಯಲ್ಲಿ ಮೀರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸೈಬರ್ ಕ್ರೈಂ ವಿಭಾಗದ ಪೋಲಿಸರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪದರ್ಶಿ ಮತ್ತು ನಟಿ ಮೀರಾ ಮಿಥುನ್ ಅವರಿಗೆ ವಿಚಾರಣೆಗೆ ಬರುವಂತೆ ಬುಧವಾರ ನೋಟಿಸ್ ನೀಡಿದ್ದಾರೆ.
ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು