ಕ್ರಿಕೆಟ್ ಆಡಿದ ಬಳಿಕ ತಂಪಾದ ನೀರು ಕುಡಿದ ಬಳಿಕ ತಕ್ಷಣ ಸಾವಿಗೀಡಾದ ಬಾಲಕ...!

ಲಕ್ನೋ: ಕ್ರಿಕೆಟ್ ಆಡಿದ ಬಳಿಕ ತಂಪಾದ ನೀರು ಕುಡಿದ ಬಳಿಕ ಬಾಲಕ ತಕ್ಷಣ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲ್ಮೋರಾ ಜಿಲ್ಲೆಯಲ್ಲಿ ನಡೆದಿದೆ. ಹಸನ್ಪುರದ ಕಾಯಸ್ತಾನ್ನ 10ನೇ ತರಗತಿ ವಿದ್ಯಾರ್ಥಿ ಪ್ರಿನ್ಸ್ ಸೈನಿ ಮೃತ ಬಾಲಕ. ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.
ನೀರು ಕುಡಿದ ತಕ್ಷಣವೇ ಆತ ಪ್ರಜ್ಞೆ ತಪ್ಪಿದ್ದಾನೆ. ಸ್ನೇಹಿತರು ವಿಚಾರವನ್ನು ಮನೆಯವರಿಗೆ ತಿಳಿಸಿದ್ದು, ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪರೀಕ್ಷೆ ಮಾಡಿದ ವೈದ್ಯರು ಬಾಲಕ ಈಗಾಗಲೇ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಬಾಲಕನ ಸಾವಿಗೆ ಹೃದಯಾಘಾತವೇ ಕಾರಣವಿರಬಹದೆಂದು ಶಂಕಿಸಲಾಗಿದೆ.
ಗುಜರಾತ್: ಚಲಿಸುತ್ತಿದ್ದ ರೈಲಿನೆದುರು ಹಾರಿ ತಂದೆ ಹಾಗೂ ಮೂವರು ಮಕ್ಕಳು ಆತ್ಮಹತ್ಯೆ
ಚಲಿಸುತ್ತಿದ್ದ ರೈಲಿನೆದುರು ಹಾರಿ ತಂದೆ ಹಾಗೂ ಮೂವರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ನ ಬೊಟಾಡ್ ಜಿಲ್ಲೆಯಲ್ಲಿ ನಡೆದಿದೆ. 42 ವರ್ಷದ ವ್ಯಕ್ತಿ ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಪ್ರಾಣಬಿಟ್ಟಿದ್ದಾರೆ. ಕೊಲೆಯ ಯತ್ನ ಪ್ರಕರಣದಲ್ಲಿ ಜಾಮೀನಿನ ಮೇಲೆ ಅವರು ಹೊರಬಂದಿದ್ದರು.
ಮೃತರನ್ನು ಮಂಗಾಭಾಯಿ ವಿಜುದಾ ಎಂದು ಗುರುತಿಸಲಾಗಿದ್ದು, ಅವರ ಪುತ್ರಿಯರಾದ ಸೋನಂ (17), ರೇಖಾ (21) ಮತ್ತು ಮಗ ಜಿಗ್ನೇಶ್ (19) ಬೋಟಾಡ್ನ ಗಧಾಡಾ ತಾಲೂಕಿನ ನಾನಾ ಸಖ್ಪರ್ ಗ್ರಾಮದವರಾಗಿದ್ದಾರೆ.
ಈ ಘಟನೆಯು ಭಾನುವಾರ ಸಂಜೆ 6.30ರ ಸುಮಾರಿಗೆ ನಡೆದಿದೆ. ನಿಂಗಲಾ ಹಾಗೂ ಆಲಂಪುರ ನಿಲ್ದಾಣಗಳ ನಡುವೆ ನಡೆದಿದೆ ಎಂದು ರೈಲ್ವೆ ರಕ್ಷಣಾ ಪಡೆ ಸಬ್ ಇನ್ಸ್ಪೆಕ್ಟರ್ ವಿಎಸ್ ಗೋಲೆ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸಂಬಂಧಿಕರೊಂದಿಗೆ ಜಗಳವಾಡಿ ಕೊಲೆ ಯತ್ನ ನಡೆಸಿದ್ದರು, ಬಳಿಕ ಕೊಲೆ ಯತ್ನದ ಆರೋಪದ ಮೇಲೆ ವಿಜುದಾ ಬಂಧನಕ್ಕೊಳಗಾಗಿದ್ದರು, ಆಮೇಲೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.
ನಾಲ್ವರು ಭಾವನಗರದಿಂದ ಗಾಂಧಿಧಾಮ್ಗೆ ಹೋಗುತ್ತಿದ್ದ ರೈಲಿನ ಮುಂದೆ ಹಾರಿದ್ದಾರೆ. ಹಳಿಗಳ ಉದ್ದಕ್ಕೂ ನಾಲ್ವರ ಶವಗಳು ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.