ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಮ ಮಾಂಸಾಹಾರಿ ಎಂದ ಜಿತೇಂದ್ರನನ್ನು ನಾನು ಕೊಂದು ಹಾಕುತ್ತೇನೆ ; ಅಯೊಧ್ಯೆ ಸಂತನ ಎಚ್ಚರಿಕೆ..!

Twitter
Facebook
LinkedIn
WhatsApp
ರಾಮ ಮಾಂಸಾಹಾರಿ ಎಂದ ಜಿತೇಂದ್ರನನ್ನು ನಾನು ಕೊಂದು ಹಾಕುತ್ತೇನೆ ; ಅಯೊಧ್ಯೆ ಸಂತನ ಎಚ್ಚರಿಕೆ..!

ಅಯೋಧ್ಯೆ: ರಾಮಮಂದಿರ ಲೋಕಾರ್ಪಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ “ರಾಮ ಮಾಂಸಾಹಾರಿಯಾಗಿದ್ದ” ಎಂದು ಎನ್‌ಸಿಪಿ ನಾಯಕ (ಶರದ್‌ ಪವಾರ್‌ ಬಣ) ಜಿತೇಂದ್ರ ಅವ್ಹಾದ್‌ (Jitendra Awhad) ನೀಡಿದ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಜಿತೇಂದ್ರ ಅವ್ಹಾದ್‌ ವಿರುದ್ಧ ಬಿಜೆಪಿ ದೂರು ದಾಖಲಿಸಲು ಮುಂದಾಗಿದೆ. ಇದರ ಬೆನ್ನಲ್ಲೇ, “ಜಿತೇಂದ್ರ ಅವ್ಹಾದ್‌ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಾನೇ ಅವನನ್ನು ಕೊಂದುಹಾಕುತ್ತೇನೆ” ಎಂದು ಅಯೋಧ್ಯೆ ಸಂತ ಪರಮಹಂಸ ಆಚಾರ್ಯ (Paramhans Acharya) ಖಡಕ್‌ ಎಚ್ಚರಿಕೆ ನೀಡಿದ್ದಾರೆ.

“ಭಗವಾನ್‌ ಶ್ರೀರಾಮನ ಕುರಿತು ಜಿತೇಂದ್ರ ಅವ್ಹಾದ್‌ ನೀಡಿರುವ ಹೇಳಿಕೆಯು ರಾಮನ ಭಕ್ತರಿಗೆ ನೋವುಂಟು ಮಾಡುವಂತಿದೆ. ರಾಮನ ಬಗ್ಗೆ ತುಚ್ಚವಾಗಿ ಹೇಳಿಕೆ ನೀಡಿದ ಜಿತೇಂದ್ರ ಅವ್ಹಾದ್‌ ವಿರುದ್ಧ ಮಹಾರಾಷ್ಟ್ರ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಹಾಗೊಂದು ವೇಳೆ ಜಿತೇಂದ್ರ ಅವ್ಹಾದ್‌ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಆತನನ್ನು ನಾನೇ ಕೊಲ್ಲುತ್ತೇನೆ. ಇದು ನಾನು ನೀಡುತ್ತಿರುವ ಎಚ್ಚರಿಕೆಯಾಗಿದೆ” ಎಂದು ಪರಮಹಂಸ ಆಚಾರ್ಯ ಹೇಳಿದ್ದಾರೆ.

ಜಿತೇಂದ್ರ ಅವ್ಹಾದ್‌ ಹೇಳಿದ್ದೇನು?

ರಾಮ ಕಾಡಿನಲ್ಲಿದ್ದಾಗ ಬೇಟೆಯಾಡಿ ಮಾಂಸ ತಿನ್ನುತ್ತಿದ್ದ. ಎಲ್ಲರನ್ನೂ ಸಸ್ಯಾಹಾರಿಗಳನ್ನಾಗಿ ಬದಲಾಯಿಸುತ್ತಿರುವ ಹೊತ್ತಿನಲ್ಲಿ ನಾವು ಮಟನ್‌ ತಿಂದು ರಾಮನ ಆದರ್ಶಗಳನ್ನು ಪಾಲಿಸೋಣ. ಅಷ್ಟಕ್ಕೂ ರಾಮ ಮಾಂಸಾಹಾರಿಯಾಗಿದ್ದ. ಸುಮಾರು 14 ವರ್ಷ ಕಾಡಿನಲ್ಲಿ ಕಳೆದ ರಾಮನಿಗೆ ಸಸ್ಯಾಹಾರ ಸಿಗುವುದಾದರೂ ಹೇಗೆ? ನಾನು ನಿಜ ಹೇಳುತ್ತಿದ್ದೇನೋ ಇಲ್ಲವೋ ನೀವೇ ಹೇಳಿ ಎಂದು ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜಿತೇಂದ್ರ ಅವ್ಹಾದ್‌ ಹೇಳಿದ್ದರು.

ಜಿತೇಂದ್ರ ಅವ್ಹಾದ್‌ ನೀಡಿದ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. “ರಾಮ ಮಾಂಸಾಹಾರಿ ಎಂದು ಜಿತೇಂದ್ರ ಅವ್ಹಾದ್‌ ಹೇಳಿರುವುದು ಖಂಡನೀಯ. ಜಿತೇಂದ್ರ ಅವ್ಹಾದ್‌ ಅವರ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇವೆ” ಎಂದು ಬಿಜೆಪಿ ನಾಯಕ ರಾಮ್‌ ಕದಮ್‌ ಹೇಳಿದ್ದಾರೆ. ಇದೇ ವಿವಾದವನ್ನು ಇಟ್ಟುಕೊಂಡು ಶಿವಸೇನೆ ನಾಯಕ ಉದ್ಧವ್‌ ಠಾಕ್ರೆ ಅವರನ್ನು ರಾಮ್‌ ಕದಮ್‌ ಟೀಕಿಸಿದ್ದಾರೆ. “ಉದ್ಧವ್‌ ಠಾಕ್ರೆ ಅವರಿಗೆ ಹಿಂದುಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ. ವೋಟಿಗಾಗಿ ರಾಜಕೀಯ ಮಾಡುವುದನ್ನೇ ಉದ್ಧವ್‌ ಠಾಕ್ರೆ ರೂಢಿಸಿಕೊಂಡಿದ್ದಾರೆಯೇ ಹೊರತು ಹಿಂದುಗಳ ಭಾವನೆಗಳಿಗೆ ಅವರು ಗೌರವ ನೀಡುವುದಿಲ್ಲ” ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist