ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಟದ ವಸ್ತು ಎಂದು ಮೈದಾನದಲ್ಲಿ ಬಿದ್ದಿದ್ದ ಬಾಂಬ್ ಎತ್ಕೊಂಡ 2ನೇ ತರಗತಿ ವಿದ್ಯಾರ್ಥಿ ಸಾವು..!

Twitter
Facebook
LinkedIn
WhatsApp
ಆಟದ ವಸ್ತು ಎಂದು ಮೈದಾನದಲ್ಲಿ ಬಿದ್ದಿದ್ದ ಬಾಂಬ್ ಎತ್ಕೊಂಡ 2ನೇ ತರಗತಿ ವಿದ್ಯಾರ್ಥಿ ಸಾವು..!

ಕೋಲ್ಕತ : ಶಾಲಾ ಆವರಣದಲ್ಲಿ ಬಾಂಬ್​ ಸ್ಫೋಟಗೊಂಡು ಎರಡನೇ ತರಗತಿ ವಿದ್ಯಾರ್ಥಿ ಮೃತಪಟ್ಟಿದ್ದು ಹಲವು ವಿಧ್ಯಾರ್ಥಿಗಳು ಗಾಯಗೊಂಡಿರುವ ದುರಂತ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವರದಿಯಾಗಿದೆ.

ಮೃತ ವಿದ್ಯಾರ್ಥಿಯನ್ನು ಮುಕ್ಲೇಸೂರ್​ ರೆಹಮಾನ್ (7)​ ಎಂದು ಗುರುತಿಸಲಾಗಿದೆ. ಈ ಘಟನೆ ಮುರ್ಷಿದಾಬಾದ್​ ಜಿಲ್ಲೆಯ ದೌಲತಾಬಾದ್ ಪೊಲೀಸ್​ ಠಾಣೆ ವ್ಯಾಪ್ತಿಯ ಚೋಯಾದಂಗದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಎಂದಿನಂತೆ ದೌಲತಾಬಾದ್​ನ ಚೋಯಾದಂಗ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಾಂಗಕ್ಕೆ ತೆರಳಿದ್ದ, ಮಧ್ಯಾಹ್ನ ಊಟ ಮುಗಿಸಿ ಮಕ್ಕಳೊಂದಿಗೆ ಶಾಲೆಯ ಮೈದಾನದಲ್ಲಿ ಆಟ ಆಡಲು ತೆರಳಿದ್ದ. ಮೈದಾನದಲ್ಲಿ ಬಾಲ್​ ಕಣ್ಣಿಗೆ ಬಿದ್ದಿದೆ ಅದನ್ನು ತೆಗೆದುಕೊಂಡು ಗೋಡೆಗೆ ಎಸೆದಿದ್ದೇ ತಡ ಬಾಂಬ್​ ಸ್ಫೋಟವಾಗಿದೆ. ಇದರಿಂದ ಮುಕ್ಲೇಸೂರ್​ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆತನ ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್​ ಸ್ಫೋಟದ ಶಬ್ಧಕ್ಕೆ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಆಗಮಿಸಿದ್ದಾರೆ. ಸ್ಥಳದಲ್ಲೇ ಅಸುನೂಗಿದ್ದ ಮುಕ್ಲೇಸೂರು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ದೌಲತಾಬಾದ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುಗ್ಧ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಬಾಂಬ್​ ಸ್ಫೋಟ​ ಆಗಿರುವುದಕ್ಕೆ ತೀವ್ರ ನೋವು ವ್ಯಕ್ತಪಡಿಸಿದ ಸ್ಥಳೀಯರು, ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಮೃತ ಶವವನ್ನು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ವರಿದಿಯಾಗಿದೆ.

15 ಭಾರತೀಯರಿದ್ದ ಸರಕು ಸಾಗಣೆ ಹಡಗು ಅಪಹರಣ

ನವದೆಹಲಿ: 15 ಮಂದಿ ಭಾರತೀಯರಿದ್ದ ಸರಕು ಹಡಗನ್ನು (Cargo Ship) ಸೊಮಾಲಿಯಾ ಬಳಿ ಅಪಹರಣ ಮಾಡಲಾಗಿದ್ದು, ಭಾರತೀಯ ನೌಕಾಪಡೆ (Indian Navy) ತೀವ್ರ ನಿಗಾ ಇರಿಸಿದೆ.

ಸೋಮಾಲಿಯಾ ಕರಾವಳಿಯ ಬಳಿ ಗುರುವಾರ ಸಂಜೆ ‘MV LILA NORFOLK’ ಎಂಬ ಸರಕು ಸಾಗಣೆ ಹಡಗನ್ನು ಅಪಹರಿಸಲಾಗಿದ್ದು, ಭಾರತೀಯ ನೌಕಾಪಡೆಯು ಅದರತ್ತ ಯುದ್ಧನೌಕೆಯನ್ನು ಕಳುಹಿಸಿ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಅಪಹರಿಸಿದ ಹಡಗಿನಲ್ಲಿ 15 ಭಾರತೀಯರಿದ್ದಾರೆ. ಸಿಬ್ಬಂದಿಯೊಂದಿಗೆ ಸಂವಹನವನ್ನು ಸ್ಥಾಪಿಸಲಾಗಿದೆ. ಸೇನಾ ಅಧಿಕಾರಿಗಳ ಪ್ರಕಾರ, ಸೊಮಾಲಿಯಾ ಕರಾವಳಿಯಲ್ಲಿ ಹಡಗನ್ನು ಅಪಹರಿಸಿರುವ ಬಗ್ಗೆ ಗುರುವಾರ ಸಂಜೆ ಮಾಹಿತಿ ಲಭಿಸಿದೆ. ಅಲ್ಲದೇ ಭಾರತೀಯ ನೌಕಾಪಡೆಯ ವಿಮಾನವು ಹಡಗಿನ ಮೇಲೆ ನಿಗಾ ಇರಿಸಿದೆ.

ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈ ಪರಿಸ್ಥಿತಿಯನ್ನು ನಿಭಾಯಿಸಲು ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist