ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು–ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ; ಶೋಭಾ ಕರಂದ್ಲಾಜೆ
ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಸ್ಪಷ್ಟಪಡಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ’ ಎಂದು ಹೇಳಿದರು.
‘ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.
ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಬಗೆದಿದ್ದಾರೆ: ಡಿ.ಕೆ ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಗೆ ಯಾವುದೇ ದ್ರೋಹವಾಗಿಲ್ಲ, ಹಿರಿಯರು ಎಂದು ಅವರನ್ನು ಬಹಳ ಗೌರವದಿಂದ ನೋಡಿಕೊಂಡಿದ್ದೆವು. ಆದರೆ ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಶೆಟ್ಟರ್ ಗೆ ಯಾವುದೇ ಅನ್ಯಾಯವಾಗಿಲ್ಲ. ಆದರೆ ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ. ಪಕ್ಷ ಸೇರ್ಪಡೆ ಸಂದರ್ಭ ನಾನು ಕಾಂಗ್ರೆಸ್ ಗೆ ದ್ರೋಹ ಮಾಡಲ್ಲ ಎಂದು ಹೇಳಿದ್ದರು. ಆದರೆ ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.