ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಂಗೀತ ಮಾಂತ್ರಿಕ ಇಳಯರಾಜ ಪುತ್ರಿ ನಿಧನ..!

Twitter
Facebook
LinkedIn
WhatsApp
ಸಂಗೀತ ಮಾಂತ್ರಿಕ ಇಳಯರಾಜ ಪುತ್ರಿ ನಿಧನ..!

ಭಾರತ ಸಿನಿಮಾ ರಂಗದಲ್ಲಿ ಸಂಗೀತ ಮಾಂತ್ರಿಕ ಎಂದೇ ಖ್ಯಾತವಾಗಿರುವ ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ (Ilayaraja) ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನ ಹೊಂದಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿನಿಂದ ಭವತಾರಿಣಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಭಾವತಾರಿಣಿ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ತಮಿಳು ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಭವತಾರಿಣಿ, ಕಳೆದ ಕೆಲವು ದಿನಗಳಿಂದ ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ಅವರು ಜನವರಿ 25ರಂದು ರಾತ್ರಿ ನಿಧನ ಹೊಂದಿದ್ದಾರೆ. ಅವರ ಮೃತದೇಹವನ್ನು ಚೆನ್ನೈನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದೆಂದು ಹೇಳಲಾಗುತ್ತಿದೆ.

ಭಾವತಾರಿಣಿ ಸ್ವತಃ ಅದ್ಭುತ ಗಾಯಕಿ ಆಗಿದ್ದರು. ಹಲವು ತಮಿಳು ಹಾಡುಗಳನ್ನು ಹಾಡಿರುವ ಭಾವತಾರಿಣಿ ‘ಭಾರತಿ’ ಸಿನಿಮಾದ ಹಾಡಿಗಾಗಿ ರಾಷ್ಟ್ರಪ್ರಶಸ್ತಿಯನ್ನು ಸಹ ಗಳಿಸಿದ್ದರು. ಈ ಸಿನಿಮಾ ಸುಬ್ರಹ್ಮಣ್ಯ ಭಾರತಿ ಅವರ ಜೀವನದ ಮೇಲೆ ಆಧಾರಿತವಾಗಿತ್ತು. ಇದು ಮಾತ್ರವೇ ಅಲ್ಲದೆ ತಮ್ಮ ಸುಮಧುರ ಗಾಯನಕ್ಕಾಗಿ ರಾಜ್ಯ ಪ್ರಶಸ್ತಿಗಳನ್ನು ಸಹ ಭಾವತಾರಿಣಿ ಗಳಿಸಿದ್ದರು.

ಭಾವತಾರಿಣಿ ನಿಧನಕ್ಕೆ ತಮಿಳು ಚಿತ್ರರಂಗ ಹಾಗೂ ರಾಜಕೀಯ ರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ತಮಿಳುನಾಡು ಸಿಎಂ ಸ್ಟಾಲಿನ್, ‘ಭಾವತಾರಿಣಿ ನಿಧನದಿಂದಾಗಿ ಉಂಟಾಗಿರುವ ನಿರ್ವಾತವನ್ನು ಯಾರೂ ತುಂಬಲಾರರು ಅದು ಹಾಗೆಯೇ ಉಳಿಯಲಿದೆ’ ಎಂದಿದ್ದಾರೆ.

ನಟಿ ಸಿಮ್ರನ್ ಟ್ವೀಟ್ ಮಾಡಿ, ‘ಭಾವತಾರಿಣಿಯ ಹಠಾತ್ ನಿಧನದಿಂದ ತೀವ್ರ ಆಘಾತಕ್ಕೆ ಈಡಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ಇಳಯರಾಜಾ ಸರ್ ಮತ್ತು ಯುವನ್ ಅವರ ಕುಟುಂಬಕ್ಕೆ ಹೃತ್ಪೂರ್ವಕ ಸಂತಾಪ ಮತ್ತು ಪ್ರಾರ್ಥನೆಗಳನ್ನು ತಿಳಿಸುತ್ತಿದ್ದೇನೆ. ಓಂ ಶಾಂತಿ’ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist