ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಧ್ವಜಾರೋಹಣ ಮಾಡುವಾಗ ವಿದ್ಯುತ್ ತಂತಿ ತಗುಲಿ ಇಬ್ಬರು ಯುವಕರು ಸಾವು

Twitter
Facebook
LinkedIn
WhatsApp
ಧ್ವಜಾರೋಹಣ ಮಾಡುವಾಗ ವಿದ್ಯುತ್ ತಂತಿ ತಗುಲಿ ಇಬ್ಬರು ಯುವಕರು ಸಾವು

ಮುಲುಗು (ತೆಲಂಗಾಣ), ಜನವರಿ 26: ಗಣರಾಜ್ಯೋತ್ಸವದ ವೇಳೆ ಭಾರೀ ದುರಂತ ಸಂಭವಿಸಿದೆ. ಧ್ವಜಾರೋಹಣ ಮಾಡುವಾಗ ವಿದ್ಯುತ್ ತಂತಿಗಳು ಧ್ವಜದ ಪೈಪ್‌ಗೆ ತಗುಲಿ ಇಬ್ಬರು ಯುವಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಯುವಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಕೂಡಲೇ ಸಚಿವೆ ಸೀತಕ್ಕ ಪರಿಹಾರ ಕಾರ್ಯದಲ್ಲಿ ತೊಡಗಿದರು. ಮುಲುಗು ಜಿಲ್ಲಾ ಕೇಂದ್ರದ ದಲಿತವಾಡದಲ್ಲಿ ಈ ದಾರುಣ ಘಟನೆ ನಡೆದಿದೆ.

ಧ್ವಜ ಅನಾವರಣಕ್ಕಾಗಿ ಸ್ಥಳೀಯ ಯುವಕರು ಕಬ್ಬಿಣದ ಕಂಬದಿಂದ ಧ್ವಜವನ್ನು ಹಾರಿಸಲು ತಯಾರಿ ನಡೆಸುತ್ತಿದ್ದರು. ಆ ವೇಳೇ ಆಕಸ್ಮಿಕವಾಗಿ ವಿದ್ಯುತ್ ತಂತಿ ಕಬ್ಬಿಣದ ಪೈಪ್‌ಗೆ ತಾಗಿದೆ. ವಿದ್ಯುತ್ ತಂತಿಗಳು ಧ್ವಜಕ್ಕೆ ತಗುಲಿದ ಪರಿಣಾಮ ವಿಜಯ್, ಚಕ್ರಿ ಮತ್ತು ಅಜಿತ್ ಸಾವನ್ನಪ್ಪಿದ್ದಾರೆ. ತಕ್ಷಣ ಅವರನ್ನು ಮುಲುಗು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಯಾವುದೇ ಫಲ ಸಿಗಲಿಲ್ಲ.

ಚಿಕಿತ್ಸೆ ಫಲಕಾರಿಯಾಗದೆ ಅಜಿತ್ ಮತ್ತು ವಿಜಯ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ವಿಷಯ ತಿಳಿದ ತಕ್ಷಣ ಸಚಿವೆ ಸೀತಕ್ಕ ಆತಂಕ ವ್ಯಕ್ತಪಡಿಸಿದ್ದಾರೆ. ಅಗತ್ಯವಿದ್ದರೆ, ಉತ್ತಮ ಚಿಕಿತ್ಸೆಗಾಗಿ ಗಾಯಳುವನ್ನು ಹೈದರಾಬಾದ್‌ಗೆ ಕರೆದೊಯ್ಯಲು ಸೂಚಿಸಲಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಚೇರಿಯಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

ಹುಬ್ಬಳ್ಳಿ, ಜನವರಿ 26: ದೇಶದಲ್ಲಿ 75ನೇ ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತಿದೆ. ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ (Pralhad Joshi) ಅವರು 75ನೇ ಗಣರಾಜ್ಯೋತ್ಸವದಂದು ಸ್ವಕ್ಷೇತ್ರ ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಿ ಮಾದರಿಯಾಗಿದ್ದಾರೆ. ಇಂದು (ಜ.26) ಹುಬ್ಬಳ್ಳಿಯ (Hubballi) ತಮ್ಮ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸ್ವಚ್ಛತಾ ಸಿಬ್ಬಂದಿ ಮಾರೆವ್ವ ಸುರಪುರ ಅವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲಾಗಿದೆ.

ಸಮಾರಂಭದಲ್ಲಿ ಶಾಸಕ ಮಹೇಶ ತೆಂಗಿನಕಾಯಿ ಸೇರಿದಂತೆ ಪ್ರಮುಖರಿದ್ದರು. ಓರ್ವ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ನೆರವೇರಿಸಿ ಆದರ್ಶ ಮೆರೆದಿದ್ದಾರೆ. ಧ್ವಜಾರೋಹಣದ ನಂತರ ಮಾರೆವ್ವ ಸುರಪುರ ಸೇರಿದಂತೆ ಪಾಲಿಕೆಯ ಪೌರ ಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಗಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಪೌರ ಕಾರ್ಮಿಕರು ಸದಾ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಜೀವಿಗಳಾಗಿದ್ದಾರೆ. ಅಂಥವರನ್ನು ಗುರುತಿಸಿ, ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟ್ವೀಟ್​ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist