ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾಲ್ಡೀವ್ಸ್​ ಸಂಸತ್ತಿನಲ್ಲಿ ಸಂಸದರ ನಡುವೆ ಹೊಡೆದಾಟ ; ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
ಮಾಲ್ಡೀವ್ಸ್​ ಸಂಸತ್ತಿನಲ್ಲಿ ಸಂಸದರ ನಡುವೆ ಹೊಡೆದಾಟ ; ಇಲ್ಲಿದೆ ವಿಡಿಯೋ

ಸಂಸತ್ತು ಎಂದ ಮೇಲೆ ವಾದ-ವಿವಾದಗಳು ಸಾಮಾನ್ಯ, ಆದರೆ ಮಾಲ್ಡೀವ್ಸ್​ ಸಂಸತ್ತಿನಲ್ಲಿ ನಡೆದ ಘಟನೆ ಅಚ್ಚರಿ ಮೂಡಿಸಿದೆ. ಈ ಸಂಸತ್ತಿನಲ್ಲಿ ನಡೆದಿದ್ದು ಮಾತಿನ ವಿವಾದವಲ್ಲ ಬದಲಾಗಿ ಗುದ್ದಾಟ, ಸಂಸದರು ಪರಸ್ಪರ ಎಳೆದಾಡಿಕೊಂಡರು, ಹೊಡೆದಾಡಿಕೊಂಡಿದ್ದಾರೆ. ಭಾನುವಾರ ಮಾಲ್ಡೀವ್ಸ್ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಿಪಿಎಂ ಮತ್ತು ಪಿಎನ್‌ಸಿ ಪಕ್ಷದ ಸಮ್ಮಿಶ್ರ ಸರ್ಕಾರದ ಸಂಸದರು ಮತ್ತು ವಿರೋಧ ಪಕ್ಷದ ಸಂಸದರ ನಡುವೆ ತೀವ್ರ ವಾಗ್ವಾದ ನಡೆಯಿತು.

ಮಾಲ್ಡೀವ್ಸ್​ ಸಂಸತ್ತಿನಲ್ಲಿ ಹಲವು ಸಂಸದರ ನಡುವೆ ಘರ್ಷಣೆ ಸಂಭವಿಸಿದೆ. ಆಡಳಿತ ಒಕ್ಕೂಟದ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಮತ್ತು ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ (ಪಿಪಿಎಂ) ಮತ್ತು ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (ಎಂಡಿಪಿ) ಯ ಸಂಸದರ ನಡುವೆ ಘರ್ಷಣೆ ನಡೆದಿದೆ.

ಆಡಳಿತ ಸಮ್ಮಿಶ್ರ ಸಂಸದರು ವಿರೋಧ ಪಕ್ಷದ ಸಂಸದರನ್ನು ಸಂಸತ್ತಿಗೆ ಪ್ರವೇಶಿಸದಂತೆ ತಡೆದಿದ್ದರು ಎನ್ನಲಾಗುತ್ತಿದೆ. ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಎಂಡಿಪಿಯು ಆಡಳಿತ ಪಕ್ಷದ ನಾಲ್ವರು ಸದಸ್ಯರಿಗೆ ಮುಯಿಝು ಅವರ ಸಂಪುಟಕ್ಕೆ ಸೇರಲು ಅನುಮೋದನೆ ನೀಡಲು ನಿರಾಕರಿಸಿದ ನಂತರ ಈ ಘಟನೆ ನಡೆದಿದೆ.

ಸಂಸತ್ತಿನಲ್ಲಿ ಮತದಾನ ನಡೆಯಬೇಕಿತ್ತು, ಪ್ರತಿಪಕ್ಷಗಳು ಇದನ್ನು ನಿಲ್ಲಿಸುವಂತೆ ಕೇಳಿದಾಗ ಆಡಳಿತಾರೂಢ ಸಂಸದರು ಕಲಾಪವನ್ನು ನಿಲ್ಲಿಸಿದರು. ಮಾಲ್ಡೀವ್ಸ್​ನ ಹೊಸ ಅಧ್ಯಕ್ಷರನ್ನು ಕಳೆದ ವರ್ಷವಷ್ಟೇ ಆಯ್ಕೆ ಮಾಡಲಾಗಿತ್ತು, ಕೆಲವು ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪವಿದೆ. ಆದ್ದರಿಂದ ಪ್ರತಿಪಕ್ಷಗಳು ಅವರನ್ನು ಸಂಪುಟಕ್ಕೆ ಸೇರಿಸಬಾರದು ಎನ್ನುವುದು ಅವರ ವಾದವಾಗಿದೆ.

ಅಟಾರ್ನಿ ಜನರಲ್ ಅಹ್ಮದ್ ಉಷಮ್, ಸಚಿವ ಡಾ. ಅಲಿ ಹೈದರ್, ಡಾ. ಮೊಹಮ್ಮದ್ ಸಯೋದ್ ವಿರುದ್ಧ ವಿರೋಧ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಯಿಝು ಅವರ ಮುಖ್ಯ ಸಲಹೆಗಾರ ಮತ್ತು ಪಿಎನ್‌ಸಿ ಅಧ್ಯಕ್ಷ ಅಬ್ದುಲ್ ರಹೀಮ್ ಅಬ್ದುಲ್ಲಾ ಅವರು ಮಂತ್ರಿಗಳಿಗೆ ಅಧಿಕಾರ ನೀಡದಿದ್ದರೂ ಸಹ, ಅವರಿಗೆ ಮರುನೇಮಕ ಮಾಡುವ ಹಕ್ಕಿದೆ ಎಂದು ಹೇಳಿದರು. ಸಚಿವರ ಅನುಮೋದನೆ ನಿರಾಕರಣೆ ಬೇಜವಾಬ್ದಾರಿ ಎಂದು ಟೀಕಿಸಿದರು.

ಇತ್ತೀಚೆಗಷ್ಟೇ ಮಾಲ್ಡೀವ್ಸ್​ ಸಚಿವರು ಭಾರತದ ಬಗ್ಗೆ ಗೇಲಿ ಮಾಡಿದ್ದರೂ, ಲಕ್ಷದ್ವೀಪವನ್ನು ಮಾಲ್ಡೀವ್ಸ್​ ರೀತಿ ಮಾಡುವ ನಿಮ್ಮದು ಕನಸಷ್ಟೇ ಎಂದು ಹೇಳಿದ್ದರು. ಇದಾದ ಬಳಿಕ ಮಾಲ್ಡೀವ್ಸ್​ ಹಾಗೂ ಭಾರತದ ಸಂಬಂಧ ಹಳಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist