ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

IND vs AUS: ಆಸ್ಟ್ರೇಲಿಯ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಕೈತಪ್ಪಿದ ಟ್ರೋಫಿ..!

Twitter
Facebook
LinkedIn
WhatsApp
IND vs AUS: ಆಸ್ಟ್ರೇಲಿಯ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಕೈತಪ್ಪಿದ ಟ್ರೋಫಿ..!

ದಕ್ಷಿಣ ಆಫ್ರಿಕಾದ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (Australia vs India) ನಡುವಿನ 19 ವರ್ಷದೊಳಗಿನವರ ವಿಶ್ವಕಪ್ (Under-19 World Cup 2024) ಫೈನಲ್ ಪಂದ್ಯದಲ್ಲಿ ಉದಯ್ ಸಹಾರನ್ (Uday Saharan) ನಾಯಕತ್ವದ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ಯುವ ಪಡೆ ನಾಲ್ಕನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 254 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಭಾರತ ತಂಡ ಮತ್ತೊಮ್ಮೆ ಫೈನಲ್ ಭಯಕ್ಕೆ ತುತ್ತಾಗಿ 174 ರನ್​ಗಳಿಗೆ ಆಲೌಟ್ ಆಗುವ ಮೂಲಕ 79 ರನ್​ಗಳ ಹೀನಾಯ ಸೋಲು ಅನುಭವಿಸಿತು. ಈ ಮೂಲಕ ದಾಖಲೆಯ 6ನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶದಿಂದ ವಂಚಿತವಾಯಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಆರಂಭಿಕ ಸ್ಯಾಮ್ ಕಾನ್ಸ್ಟಾಸ್ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಕೇವಲ 16 ರನ್​ಗಳಿಗೆ ತಂಡದ ಮೊದಲ ವಿಕೆಟ್ ಪತನವಾಯಿತು. ಆದರೆ ಆ ಬಳಿಕ ಜೊತೆಯಾದ ಹ್ಯಾರಿ ಡಿಕ್ಸನ್ 42 ಹಾಗೂ ಹಗ್ ವೈಬ್ಜೆನ್ 48 ರನ್ ಕಲೆಹಾಕುವ ಮೂಲಕ ಅರ್ಧಶತಕದ ಜೊತೆಯಾಟವನ್ನು ನೀಡಿದರು. ಆದರೆ ಇಬ್ಬರೂ ಅರ್ಧಶತಕ ಪೂರ್ಣಗೊಳಿಸುವಲ್ಲಿ ಎಡವಿದರು.

ನಂತರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಹರ್ಜಸ್ ಸಿಂಗ್ 3 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 55 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಕೆಳಕ್ರಮಾಂಕದಲ್ಲಿ ತಂಡದ ಸ್ಕೋರ್ ಬೋರ್ಡ್​ ಹೆಚ್ಚಿಸುವ ಕೆಲಸ ಮಾಡಿದ ಆಲಿ ಪೀಕ್ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 46 ರನ್ ಕಲೆಹಾಕಿದರು. ಭಾರತದ ಪರ ರಾಜ್ ಲಿಂಬಾನಿ 3 ವಿಕೆಟ್ ಪಡೆದರೆ, ನಮನ್ ತಿವಾರಿ 2 ವಿಕೆಟ್, ಉಳಿದಂತೆ ಸೌಮ್ಯ ಕುಮಾರ್ ಪಾಂಡೆ ಹಾಗೂ ಮುಶೀರ್ ಖಾನ್ ತಲಾ 1 ವಿಕೆಟ್ ಪಡೆದರು.

 

ಆಸ್ಟ್ರೇಲಿಯಾ ನೀಡಿದ 254 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಇಡೀ ಸರಣಿಯಲ್ಲಾದಂತೆ ಫೈನಲ್ ಪಂದ್ಯದಲ್ಲೂ ಆರಂಭಿಕ ಜೋಡಿ ಕಳಪೆ ಆರಂಭ ನೀಡಿತು. ತಂಡ 3 ರನ್ ಗಳಿಸುವಷ್ಟರಲ್ಲಿ ಆರ್ಶಿನ್ ಕುಲಕರ್ಣಿ ರೂಪದಲ್ಲಿ ಮೊದಲ ವಿಕೆಟ್ ಪತನವಾಯಿತು. ಇದರ ನಂತರ ತಾಳ್ಮೆಯ ಆಟಕ್ಕೆ ಮುಂದಾದ ಆದರ್ಶ್ ಸಿಂಗ್ ಮತ್ತು ಮುಶೀರ್ ಖಾನ್ ಮೊದಲ 10 ಓವರ್‌ಗಳಲ್ಲಿ ಕೇವಲ 28 ರನ್‌ ಕಲೆಹಾಕಿದರು. ಆದರೆ ರನ್ ಕಲೆಹಾಕಬೇಕಾದ ಒತ್ತಡದಲ್ಲಿದ್ದ ಮುಶೀರ್ ಖಾನ್ 22 ರನ್ ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ಹೀಗಾಗಿ ತಂಡ 40 ರನ್​ಗಳಿಗೆ ತನ್ನ ಎರಡನೇ ವಿಕೆಟ್ ಕಳೆದುಕೊಂಡಿತು.

ಇಲ್ಲಿಂದ, ಟೀಂ ಇಂಡಿಯಾದ ಪೆವಿಲಿಯನ್ ಪರೇಡ್ ಶುರುವಾಯಿತು. ಇದರಲ್ಲಿ ನಾಯಕ ಉದಯ್ ಸಹರಾನ್ 8 ಮತ್ತು ಸಚಿನ್ ದಾಸ್ ಕೇವಲ 9 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದ್ದು, ಭಾರತಕ್ಕೆ ಮರ್ಮಾಘಾತ ನೀಡಿತು. ಏಕೆಂದರೆ ಇಡೀ ಸರಣಿಯಲ್ಲಿ ತಂಡದ ಪರ ಗಮರ್ನಾಹ ಪ್ರದರ್ಶನ ನೀಡಿದ್ದವರಲ್ಲಿ ಈ ಇಬ್ಬರೇ ಪ್ರಮುಖರು. ಈ ಇಬ್ಬರ ವಿಕೆಟ್ ಪತನದ ಬಳಿಕ ಬಂದ ಪ್ರಿಯಾಂಶು ಮೊಲಿಯಾ, ಅರವೆಲ್ಲಿ ಅವನೀಶ್ ಕೂಡ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. 122 ರನ್ ಗಳಿಸುವಷ್ಟರಲ್ಲಿ ತಂಡ ಪ್ರಮುಖ 8 ವಿಕೆಟ್ ಕಳೆದುಕೊಂಡಿತ್ತು. ಇಲ್ಲಿಂದ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಮುರುಗನ್ ಅಭಿಷೇಕ್ 42 ರನ್‌ಗಳ ಇನ್ನಿಂಗ್ಸ್ ಆಡಿದರೂ ಸಹ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಟೀಂ ಇಂಡಿಯಾ 43.5 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 174 ರನ್‌ ಕಲೆಹಾಕಿ ಸೋಲೊಪ್ಪಿಕೊಂಡಿತು. ಆಸ್ಟ್ರೇಲಿಯಾಪರ ಬೌಲಿಂಗ್‌ನಲ್ಲಿ ಮಿಂಚಿದ ಮಹಿಲ್ ಬಿಯರ್ಡ್‌ಮನ್ ಮತ್ತು ರಾಫೆ ಮೆಕ್‌ಮಿಲನ್ ತಲಾ 3 ವಿಕೆಟ್ ಪಡೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist