ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಲ್ಮೆಟ್‌ ಹಾಕದ್ದನ್ನು ಪ್ರಶ್ನಿಸಿದಕ್ಕೆ ಪೊಲೀಸರ ಕೈಯನ್ನೇ ಕಚ್ಚಿದ ಯುವಕ..!

Twitter
Facebook
LinkedIn
WhatsApp
ಹೆಲ್ಮೆಟ್‌ ಹಾಕದ್ದನ್ನು ಪ್ರಶ್ನಿಸಿದಕ್ಕೆ ಪೊಲೀಸರ ಕೈಯನ್ನೇ ಕಚ್ಚಿದ ಯುವಕ..!

ದ್ವಿ‌ಚಕ್ರ ವಾಹನ ಸವಾರರು ಹೆಲ್ಮೆಟ್‌ ಹಾಕದಿದ್ದರೆ ಪೊಲೀಸರು ತಡೆಯುವುದು, ಬೆನ್ನಟ್ಟುವುದು ಮೊದಲಾದ ಘಟನೆಗಳು ಈಗಲೂ ನಡೆಯುತ್ತಿವೆ. ಆದರೆ, ಹೀಗೆ ತಡೆದು ನಿಲ್ಲಿಸಿದಾಗ ದಂಡ ಕಟ್ಟಿಸಿಕೊಳ್ಳುವುದು ಮಾತ್ರವಲ್ಲ, ಇರೋ ಬರೋ ದಾಖಲೆಗಳನ್ನೆಲ್ಲ ಕೇಳುತ್ತಾರೆ. ಹೀಗಾಗಿ ಕೆಲವರು ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಬೆಂಗಳೂರಿನಲ್ಲಿ ಹೀಗೆ ಸ್ಕೂಟರ್‌ ಸವಾರರೊಬ್ಬರನ್ನು ಪೊಲೀಸರು ತಡೆದು ನಿಲ್ಲಿಸಿದಾಗ ಆತ ಪೊಲೀಸರ ಕೈಗೇ ಕಚ್ಚಿದ್ದಾನೆ

ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ನ ಹತ್ತನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ ಇದ್ದಿದ್ದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೊಲೀಸರ ಕೈ ಕಚ್ಚಿದ್ದಾನೆ ಒಬ್ಬ ಬೈಕ್‌ ಸವಾರ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ

ಸ್ಕೂಟರ್‌ನಲ್ಲಿ ಹೆಲ್ಮೆಟ್‌ ಹಾಕದೆ ಹೋಗುತ್ತಿದ್ದ ಯುವಕನನ್ನು ವಿಲ್ಸನ್‌ ಗಾರ್ಡನ್‌ ಸಂಚಾರಿ ಪೊಲೀಸರು ತಡೆ ಹಿಡಿದರು. ತಡೆ ಹಿಡಿದು ಸ್ಕೂಟರ್‌ ಕೀ ಕಿತ್ತುಕೊಂಡರು. ಇದರಿಂದ ಯುವಕ ಸಿಟ್ಟಿಗೆದ್ದಿದ್ದಾನೆ. ಆಸ್ಪತ್ರೆಗೆ ಹೋಗುತ್ತಿದ್ದೇನೆ, ಅರ್ಜಂಟ್‌ ಇದೆ ಎಂದು ಹೇಳಿದ್ದಾನೆ. ಕೀ ಕೊಡಿ ಎಂದಿದ್ದಾನೆ.

ಪೊಲೀಸನನ್ನೇ ತಳ್ಳಿದ ಆತನನ್ನು ಪೊಲೀಸರು ಕೈಯಲ್ಲಿ ಹಿಡಿದುಕೊಂಡಿದ್ದಾರೆ. ಆಗ ಆತ ಕೈ ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸಪ್ಪನ ಕೈಯನ್ನೇ ಕಚ್ಚಿದ್ದಾನೆ. ಬಳಿಕ ಬಂದು ಸ್ಕೂಟರ್‌ನಲ್ಲಿ ಕುಳಿತಿದ್ದಾನೆ. ಈ ಎಲ್ಲ ವಿದ್ಯಮಾನಗಳನ್ನು ಮೊಬೈಲ್‌ನಲ್ಲಿ ಯಾರೋ ಒಬ್ಬರು ಸೆರೆ ಹಿಡಿದಿದ್ದಾರೆ.

ಮೊಬೈಲ್‌ನಲ್ಲಿ ರೆಕಾರ್ಡ್‌ ಆಗಿದೆ ಎಂದಾಗ ವೈರಲ್‌ ಆಗಲಿ ಬಿಡಿ, ನಾನು ಆಸ್ಪತ್ರೆಗೆ ಅರ್ಜಂಟಾಗಿ ಹೋಗಬೇಕಿತ್ತು. ಹೋಗಲು ಬಿಡದೆ ಪೊಲೀಸರು ತಡೆ ಹಿಡಿದಿದ್ದಾರೆ, ಅದಕ್ಕೆ ಕಚ್ಚಿದ್ದೇನೆ ಎಂದು ಹೇಳಿದ್ದಾನೆ. ಸಂಚಾರಿ ಪೊಲೀಸರು ಕೂಡಲೇ ಹೊಯ್ಸಳ ಸಿಬ್ಬಂದಿ ಕರೆಸಿ ಬೈಕ್ ಸವಾರನನ್ನು ವಶಕ್ಕೆ ಪಡೆದಿದ್ದಾರೆ. ಸಂಚಾರಿ ಪೊಲೀಸರಿಂದ ಆರೋಪಿ ವಿರುದ್ಧ ದೂರು ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist