ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಾಲಕನಿಲ್ಲದೇ ಗಂಟೆಗೆ 100 ಕಿ.ಮೀ ವೇಗದಲ್ಲಿ ಚಲಿಸಿದ ರೈಲು!

Twitter
Facebook
LinkedIn
WhatsApp
ಚಾಲಕನಿಲ್ಲದೇ ಗಂಟೆಗೆ 100 ಕಿ.ಮೀ ವೇಗದಲ್ಲಿ ಚಲಿಸಿದ ರೈಲು!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಿದ್ದ ರೈಲು ಏಕಾಏಕಿ ಚಲಿಸಿದ ಘಟನೆ ನಡೆದಿದ್ದು, ಚಾಲಕನಿಲ್ಲದಿದ್ದರೂ ರೈಲು ಚಲಿಸುತ್ತಿದ್ದ ವೇಗನೋಡಿ ಜನ ಬೆಚ್ಚಿಬಿದ್ದಿದ್ದಾರೆ.

ಹೌದು.. ಲೋಕೊ ಪೈಲಟ್ ಇಲ್ಲದೆಯೇ ಈ ರೈಲು ಗಂಟೆಗೆ 100 ಕಿ.ಮೀ ವೇಗದಲ್ಲಿ ರೈಲು ಸಂಚರಿಸಿತ್ತು. ರೈಲಿನ ವೇಗ ನೋಡಿ ಜನ ಬೆಚ್ಚಿಬಿದ್ದಿದ್ದು, ರೈಲು ಈ ಪರಿ ವೇಗವಾಗಿ ಚಲಿಸಲು ಇಳಿಜಾರು ಇದ್ದುದೇ ಕಾರಣ ಎಂದು ಹೇಳಲಾಗಿದೆ. ಅದೃಷ್ಟಕ್ಕೆ ಅದು ಸರಕು ಸಾಗಣೆ ರೈಲಾಗಿದ್ದ ಹಿನ್ನೆಲೆಯಲ್ಲಿ ಅಷ್ಟೊಂದು ಜನರು ರೈಲಿನಲ್ಲಿರಲಿಲ್ಲ, ರೈಲ್ವೆ ಅಧಿಕಾರಿಗಳ ಪ್ರಯತ್ನದಿಂದಾಗಿ ಪಂಜಾಬ್​ನ ಮುಕೇರಿಯನ್ ರೈಲು ನಿಲ್ದಾಣ(Railway Station)ದಲ್ಲಿ ರೈಲನ್ನು ನಿಲ್ಲಿಸಲಾಯಿತು.

 

ರೈಲಿನ ಪ್ರಯಾಣಿಕರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ರೈಲ್ವೆ ಇನ್ನೂ ಬಿಡುಗಡೆ ಮಾಡಿಲ್ಲ. ಕಥುವಾ ನಿಲ್ದಾಣದಲ್ಲಿ ನಿಲುಗಡೆಯಲ್ಲಿದ್ದ ಸರಕು ರೈಲು ಹಠಾತ್ತನೆ ಪಠಾಣ್‌ಕೋಟ್ ಕಡೆಗೆ ಇಳಿಜಾರಾದ ಕಾರಣ ಚಾಲಕ ಇಲ್ಲದೆ ಓಡಲು ಪ್ರಾರಂಭಿಸಿತು. ಮುಕೇರಿಯನ್ ಪಂಜಾಬ್‌ನ ಉಚ್ಚಿ ಬಸ್ಸಿ ಬಳಿ ರೈಲನ್ನು ನಿಲ್ಲಿಸಲಾಗಿದೆ. ಈ ವಿಷಯದ ಬಗ್ಗೆ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ 7.10ರ ಸುಮಾರಿಗೆ ಈ ಘಟನೆ ನಡೆದಿದ್ದು, ಲೋಕೊ ಪೈಲಟ್​ ಜಮ್ಮುವಿನ ಕಥುವಾದಲ್ಲಿ ಗೂಡ್ಸ್​ ರೈಲು ಸಂಖ್ಯೆ 14806 ಆರ್ ಅನ್ನು ನಿಲ್ಲಿಸಿದ್ದರು. ಬಳಿಕ ಚಾಲಕ ಹ್ಯಾಂಡ್‌ಬ್ರೇಕ್‌ ಹಾಕದೆ ರೈಲಿನಿಂದ ಇಳಿದು ಟೀ ಕುಡಿಯಲು ತೆರಳಿದ್ದರು. ಏತನ್ಮಧ್ಯೆ, ರೈಲು ಇದ್ದಕ್ಕಿದ್ದಂತೆ ಚಲಿಸಲು ಪ್ರಾರಂಭಿಸಿತು. ಇಳಿಜಾರಾದ್ದರಿಂದ ಕ್ರಮೇಣ ರೈಲು ವೇಗ ಪಡೆದುಕೊಂಡಿದ್ದು, ಅಂತಿಮವಾಗಿ ವೇಗವನ್ನು ಪಡೆದ ನಂತರ ಓಡಲು ಪ್ರಾರಂಭಿಸಿತು. ಆದರೆ, ರೈಲು ಜಾಲದಲ್ಲಿ ಇಳಿಜಾರಿನ ಕಾರಣ ರೈಲು ಚಲಿಸಲು ಪ್ರಾರಂಭಿಸಿತ್ತು ಎಂದು ಹೇಳಿದ್ದಾರೆ.

ಲೊಕೊ ಪೈಲಟ್ ಅಥವಾ ಇತರ ಯಾವುದೇ ರೈಲ್ವೇ ಅಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ವರದಿಯಾಗಿಲ್ಲ. ಆದಾಗ್ಯೂ, ಘಟನೆಗೆ ನಿಖರವಾದ ಕಾರಣವನ್ನು ನಿರ್ಧರಿಸಲು ಈ ವಿಷಯದಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist