ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತನ್ನ ಸಾಲ ತೀರಿಸಲು ವೃದ್ಧೆಯ ಕೈ, ಕಾಲು ಕತ್ತರಿಸಿ ಕೊಲೆ..!

Twitter
Facebook
LinkedIn
WhatsApp
ತನ್ನ ಸಾಲ ತೀರಿಸಲು ವೃದ್ಧೆಯ ಕೈ, ಕಾಲು ಕತ್ತರಿಸಿ ಕೊಲೆ..!

ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಕೈ, ಕಾಲು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಡ್ರಮ್​ನಲ್ಲಿ ತುಂಬಿ ಪರಾರಿಯಾಗಿದ್ದ ಸ್ಥಳೀಯ ನಿವಾಸಿ ದಿನೇಶ್ ಎಂಬಾತನನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವಿಚಾರಣೆ ‌ನಡೆಸಿದಾಗ ಆತ, ತಾನು ಸಾಲ ತೀರಿಸಲು ಹತ್ಯೆ‌ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಹೆಚ್ಚಿನ ವಿಚಾರಣೆ‌‌ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹತ್ಯೆಗೊಳಗಾದ 70 ವರ್ಷದ ಸುಶೀಲಮ್ಮ ಚಿಕ್ಕಬಳ್ಳಾಪುರ ಮೂಲದವರಾಗಿದ್ದು ಬಸವನಪುರ ವಾರ್ಡ್‌ನ ನಿಸರ್ಗ ಬಡಾವಣೆಯ ಲೀಸ್ ಮನೆಯೊಂದರಲ್ಲಿ ಕಳೆದ 10 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆರೋಪಿ ದಿನೇಶ್ ಅದೇ ಪ್ರದೇಶದಲ್ಲಿ ಹೆಂಡತಿ, ಮಕ್ಕಳೊಂದಿಗೆ ಸ್ವಂತ ಮನೆಯಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದ. ಖಾಸಗಿ ಶಿಪ್ಪಿಂಗ್ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಅನ್ಯ ಕಾರಣಕ್ಕಾಗಿ ಕೆಲವು ವರ್ಷಗಳ ಹಿಂದೆ ಕೆಲಸ ತೊರೆದಿದ್ದರಿಂದ ಆತನಿಗೆ ಆರ್ಥಿಕ ಮುಗ್ಗಟ್ಟು ಎದುರಾಗಿತ್ತು.

ಅಲ್ಲದೆ, 30 ಲಕ್ಷ ರೂ.ವರೆಗೂ ಸಾಲ ಮಾಡಿಕೊಂಡಿದ್ದ. ಸಾಲಗಾರರು ಹಣಕ್ಕಾಗಿ ಮನೆ ಬಳಿ ಬರುತ್ತಿದ್ದರು. ಈ ಮಧ್ಯೆ ಪರಿಚಯಸ್ಥವಾಗಿದ್ದ ವೃದ್ಧೆ, ಆಸ್ತಿ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಹಣ ಬಂದಿರುವ ಬಗ್ಗೆ ತಿಳಿದುಕೊಂಡು ಸಾಲ ನೀಡುವಂತೆ ಕೇಳಿದ್ದ. ಇದಕ್ಕೆ ವೃದ್ಧೆ ನಿರಾಕರಿಸಿದ್ದರು. ಈ ಮಧ್ಯೆ ಆಕೆ ಧರಿಸಿದ್ದ ಆಭರಣಗಳ ಮೇಲೆ ಕಣ್ಣು ಹಾಕಿದ್ದಾನೆ. ಸೂಕ್ತ ಸಮಯ ನೋಡಿ ದೇವಸ್ಥಾನಕ್ಕೆ ಕರೆದೊಯ್ಯುವುದಾಗಿ ವೃದ್ಧೆಯನ್ನು ಮನೆಗೆ ಕರೆಯಿಸಿಕೊಂಡು ಕುತ್ತಿಗೆ ಹಿಸುಕಿ ಕೈ-ಕಾಲುಗಳನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆ ಬಳಿಕ ವೃದ್ಧೆಯ ಮೇಲಿದ್ದ ಚಿನ್ನಾಭರಣ ತೆಗೆದುಕೊಂಡು ಅಡವಿಡಲು ಹೋದಾಗ ಕಿವಿಯೋಲೆ ಹೊರತುಪಡಿಸಿ ಉಳಿದೆಲ್ಲ ಆಭರಣಗಳು ರೋಲ್ಡ್ ಗೋಲ್ಡ್ ಎಂದು ಗೊತ್ತಾಗಿದೆ‌. ಕಿವಿಯೋಲೆಯನ್ನು ಅಡವಿಟ್ಟು ಅದರಲ್ಲಿ ಡ್ರಮ್‌ ಖರೀದಿಸಿದ್ದಾನೆ. ಮನೆಯ ಬಳಿ ಓಣಿಯಲ್ಲಿ ಡ್ರಮ್ ಇಟ್ಟು ದೇಹದ ತುಂಡುಗಳನ್ನು ತುಂಬಿ ಪರಾರಿಯಾಗಿದ್ದ. ಶುಕ್ರವಾರ ಈ ಕೃತ್ಯವೆಸಗಿದ್ದು ಎರಡು ದಿನಗಳ ಬಳಿಕ ಅಂದರೆ ನಿನ್ನೆ ಸಂಜೆ ಸ್ಥಳೀಯರಿಗೆ ಅನುಮಾನ ಬಂದು ನೋಡಿದಾಗ ಶವ ಪತ್ತೆಯಾಗಿರುವುದು ಕಂಡುಬಂದಿತ್ತು.

ಎಫ್ಎಸ್​ಎಲ್, ಬೆರಳಚ್ಚು ತಂಡಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದವು. ಪೊಲೀಸರು ಸುತ್ತಮುತ್ತ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ದಿನೇಶ್, ಅನುಮಾನಸ್ಪಾದವಾಗಿ ಓಡಾಡಿರುವುದು ಸೆರೆಯಾಗಿತ್ತು. ಇದೇ ಆಧಾರದ ಮೇರೆಗೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬರ್ಬರ ಹತ್ಯೆವೆಸಗಿರುವ ಕೃತ್ಯ ಬಾಯ್ಬಿಟ್ಟಿದ್ದಾನೆ‌. ಪಕ್ಷವೊಂದರ ಕಾರ್ಯಕರ್ತನಾಗಿಯೂ ಆರೋಪಿ ಗುರುತಿಸಿಕೊಂಡಿದ್ದ. ಹೆಚ್ಚಿನ ವಿಚಾರಣೆಗೊಳಪಡಿಸಲು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist