ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rameshwaram cafe: ಇಡ್ಲಿ ತಿಂದು ಕೆಫೆಯಲ್ಲಿ ಬಾಂಬ್‌ ಇಟ್ಟ ಬಾಂಬರ್‌ - ಡಿಕೆ ಶಿವಕುಮಾರ್

Twitter
Facebook
LinkedIn
WhatsApp
dk shivakumar, rameshwaram cafe

Rameshwaram cafe Bangalore: ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, (Rameshwaram Cafe Blast) ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar), ಗೃಹಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಸಿಸಿಬಿ ಪೊಲೀಸರು (CCB Police) ಬಾಂಬ್ ಇಟ್ಟ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕೋದಕ್ಕೆ ಶುರು ಮಾಡಿದ್ದಾರೆ. ಆರೋಪಿ ಯಾರು ಏನು ಎಂಬುದು ಬಹುತೇಕ ಗೊತ್ತಾಗಿದೆ. ಆರೋಪಿ ಬಸ್‌ನಲ್ಲಿ ಬಂದು, ಹೋಟೆಲ್‌ನಲ್ಲಿ ರವೆ ಇಡ್ಲಿ ತಿಂದು ಆಮೇಲೆ ಬಾಂಬ್ ಇಟ್ಟು ಹೋಗಿದ್ದಾನೆ. ಬರುವಾಗ ಮಾಸ್ಕ್‌ ಧರಿಸಿ ಬಂದಿದ್ದಾನೆ ಎಂದು ತಿಳಿಸಿದ್ದಾರೆ. ಅಲ್ಲದೇ ಆರೋಪಿಗೆ ಸುಮಾರು 35 ವರ್ಷ ವಯಸ್ಸಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.

ಬಾಂಬ್ ಬ್ಲಾಸ್ಟ್ ಟೈಮಿಂಗ್
11:35 – ಹೋಟೆಲ್‌ಗೆ ಬಾಂಬರ್‌ ಆಗಮನ
11:35 – ಕ್ಯಾಶ್ ಕೌಂಟರ್ ಅಲ್ಲಿ ರವೆ ಇಡ್ಲಿ ಟೋಕನ್‌ ಖರೀದಿ
11:42 – ಇಡ್ಲಿ ತಿಂದು ಕೈ ತೊಳೆಯುವ ಜಾಗಕ್ಕೆ ಬಂದ ವ್ಯಕ್ತಿ
11:44 – ಕೈತೊಳೆಯುವ ಜಾಗದಲ್ಲೇ ಬ್ಯಾಗ್ ಇರಿಸಿ ಪರಾರಿ
12:55 – ಬಾಂಬ್‌ ಸ್ಫೋಟ

ಹೋಟೆಲ್‌ನಲ್ಲಿ ಬ್ಯಾಗ್ ಇಟ್ಟು ಹೋದ 1 ಗಂಟೆ ಬಳಿಕ ಬಾಂಬ್ ಬ್ಲಾಸ್ಟ್ ಆಗಿದೆ. ಘಟನಾ ಸ್ಥಳದಲ್ಲಿ ಟೈಮರ್ ಸಹ ಪತ್ತೆಯಾಗಿದೆ. ವ್ಯಕ್ತಿಯ ಎಲ್ಲಾ ಚಟುವಟಿಕೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶೀಘ್ರದಲ್ಲೇ ಸಿಕ್ಕಿಬಿಳುತ್ತಾನೆ ಎಂದು ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜೀನಾಮೆ ಕೊಡೋಣ… ಕೊಡೋಣ.. ಎಂದು ವ್ಯಂಗ್ಯವಾಡಿದ್ದಾರೆ. ಅವರು ರಾಜಕಾರಣ ಮಾಡಲಿ ನಾವು ಜನರ ಸೇವೆ ಮಾಡ್ತೀವಿ ಎಂದು ಹೇಳಿದ್ದಾರೆ.

ಇನ್ನು ಡಿಸಿಎಂ, ಗೃಹ ಸಚಿವರು ಸ್ಪೋಟ ಘಟನಾ ಸ್ಥಳ ಪರಿಶೀಲನೆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿ. ಯಾರು ಆತಂಕಪಡುವ ಅಗತ್ಯವಿಲ್ಲ. ಮೂವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮೂವರಿಗೂ ಕಿವಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ. ಯಾರಿಗೂ ತೊಂದರೆ ಇಲ್ಲ, ಜೀವಕ್ಕೆ ಅಪಾಯವಿಲ್ಲ ಎಂದು ತಿಳಿಸಿದರು.

ಕಮಾಂಡ್ ಸೆಂಟರ್ ನಲ್ಲಿ ಆರೋಪಿ ಚಲನವಲನ ವಾಚ್

ಬಾಂಬ್ ಬ್ಲಾಸ್ಟ್ ಎನ್ನುವುದು ತಿಳಿಯುತ್ತಿದ್ದಂತೆಯೇ ಈ ಪ್ರಕರಣವನ್ನು ಪೊಲಿಸರು ಗಂಭೀರವಾಗಿ ಪರಿಗಣಿಸಿದ್ದು, ಬಾಂಬ್ ಇಟ್ಟು ಹೋಗಿರವ ಆರೋಪಿ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ. ಕಮಾಂಡ್ ಸೆಂಟರ್ ನಲ್ಲಿ ಆರೋಪಿ ಚಲನವಲನ ಪರಿಶೀನೆ ನಡೆದಿದೆ. ರಾಮೇಶ್ವರಂ ಕೆಫೆ ಮಾರ್ಗದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಗಳನ್ನು ಪೊಲಿಸರು ಪರಿಶೀಲನೆ ನಡೆಸಿದ್ದು, ಆತನ ಬಟ್ಟೆ ಹಾಗೂ ಚಲನವಲನ ಮೇಲೆ ಕಣ್ಣಿಟ್ಟಿದ್ದಾರೆ. ಬೆಳಗ್ಗೆ 12 ಗಂಟೆಯಿಂದ ಆರೋಪಿ ಎಲ್ಲೆಲ್ಲಿ ಓಡಾಡಿದ್ದ ಎಂದು ರಸ್ತೆಯುದ್ದಕ್ಕೂ ಮೂವ್ಮೆಂಟ್ ಆಗಿರುವುದನ್ನು ಕೂಲಂಕುಷ ಪರಿಶೀಲನೆ ಮಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ