ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

2 ವರ್ಷದ ಹಿಂದೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ವಶಕ್ಕೆ...!

Twitter
Facebook
LinkedIn
WhatsApp
2 ವರ್ಷದ ಹಿಂದೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ವಶಕ್ಕೆ...!

ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದೆಡೆ 2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದ ಬಿಜೆಪಿ (BJP) ಕಾರ್ಯಕರ್ತ ರವಿಯನ್ನು ಮಂಡ್ಯದ (Mandya) ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯಸಭೆ ಚುನಾವಣೆ ವೇಳೆ ವಿಧಾನಸೌಧದಲ್ಲೇ ಪಾಕ್​ ಪರ ಘೋಷಣೆ ಮೊಳಗಿಸಿದ್ದ ಪ್ರಕರಣ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು. ಅದು ಪಾಕ್​ ಪರ ಘೋಷಣೆ ಅಲ್ಲ, ಬದಲಿಗೆ ಚುಣಾವಣೆಯಲ್ಲಿ ಗೆದ್ದ ನಾಸಿರ್ ಹುಸೇನ್ ಪರ ಘೋಷಣೆ ಅಂತಾ ಕಾಂಗ್ರೆಸ್ ನಾಯಕರು ಹೇಳಿದ್ರು. ಇದೀಗ, ಇದೇ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಪಾಕ್​ ಪರ ಘೋಷಣೆ ಕೂಗಿದ್ದು ದೃಢವಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮೂವರು ಅರೆಸ್ಟ್ ಆಗುತ್ತಿದ್ದಂತೆ ಮಂಡ್ಯದಲ್ಲೂ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.

2022ರಲ್ಲಿ ಮಂಡ್ಯದ ಸಂಜಯ್ ಸರ್ಕಲ್​ನಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಅಂದು ಪಾಕ್ ವಿದೇಶಾಂಗ ಸಚಿವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಈ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಕನ್ಫೂಜ್ ಆಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಇದನ್ನು ಕೇಳಿಸಿಕೊಂಡ ಅರವಿಂದ ಎಂಬ ಕಾರ್ಯಕರ್ತ ರವಿ ಬಾಯಿ ಮುಚ್ಚಿದ್ದ.

ಇದೀಗ ಎರಡು ವರ್ಷದ ಬಳಿಕ ಈ ಸಂಬಂಧ ಬಿಜೆಪಿ ಕಾರ್ಯಕರ್ತ ರವಿ ಮೇಲೆ ಕಾಂಗ್ರೆಸ್ ದೂರು ಸಲ್ಲಿಸಿದೆ. ಕಾಂಗ್ರೆಸ್ ಕಾರ್ಯಕರ್ತ ಹನಿಂಬಾಡಿ ಕುಮಾರ್ ಎಂಬಾತ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಅನ್ವಯ ಪೊಲೀಸರು ಎ1 ಆರಾಧ್ಯ, ಎ2 ರವಿ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದೀಗ ಬಿಜೆಪಿ ಕಾರ್ಯಕರ್ತ ಡಣಾಯಕನಪುರ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist