ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂದಿನ ವಾರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟ ಸಾಧ್ಯತೆ.?

Twitter
Facebook
LinkedIn
WhatsApp
ಮುಂದಿನ ವಾರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟ ಸಾಧ್ಯತೆ.?

ಬಹು ನಿರೀಕ್ಷಿತ ಲೋಕಸಭೆ 2024 ರ ಚುನಾವಣೆಯ ದಿನಾಂಕಗಳನ್ನು ಮಾರ್ಚ್ 14 ಅಥವಾ 15 ರಂದು ಪ್ರಕಟಿಸುವ ಸಾಧ್ಯತೆಯಿದೆ. ಚುನಾವಣೆಗಳು 2019 ರಂತೆ ಏಳು ಹಂತಗಳಲ್ಲಿ ನಡೆಯಬಹುದು ಮತ್ತು ಮೊದಲ ಹಂತದ ಮತದಾನ ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.

ಈ ಮೊದಲು ಮಾರ್ಚ್ 9ಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ವರದಿಯಾಗಿತ್ತು. ಇನ್ನು, ಇದೇ ತಿಂಗಳ ಮಾರ್ಚ್ 14ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಹತ್ತು ದಿನಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 195 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿಗೆ ಗೆಲುವು ದಾಖಲಿಸಲು ಪಕ್ಷವು ಸಜ್ಜಾಗುತ್ತಿದೆ. ಬಿಜೆಪಿ ಮೊದಲ ಪಟ್ಟಿಯಲ್ಲಿ, ಪಕ್ಷವು ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಬಿಪ್ಲಬ್ ಕುಮಾರ್ ದೇಬ್ ಅವರನ್ನು ಕಣಕ್ಕಿಳಿಸಿದೆ.

ಇತ್ತ, ಐಎನ್‌ಡಿಐಎ ಮೈತ್ರಿಕೂಟದ ಸದಸ್ಯರೊಂದಿಗೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಬಗ್ಗೆ ಇನ್ನೂ ಚರ್ಚಿಸುತ್ತಿದೆ ಎಂದು ಹೇಳಿದೆ. ಹೆಸರುಗಳನ್ನು ನಿರ್ಧರಿಸಲು ಸಮಯ ತೆಗೆದುಕೊಳ್ಳುತ್ತದೆ ಮತ್ತು ಬಿಜೆಪಿಯಂತೆ ಆತುರಪಡಬೇಡಿ ಎಂದು ನಾಯಕರು ಹೇಳಿದ್ದಾರೆ ಎಂದು ವರದಿಯಾಗಿದೆ.

ಚುನಾವಣಾ ದಿನಾಂಕ ಘೋಷಣೆಗೂ ಮುನ್ನ, ಚುನಾವಣಾ ಆಯೋಗವು ಪಕ್ಷಗಳು ಮತ್ತು ಅವರ ನಾಯಕರನ್ನು ಜಾತಿ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ಮತ ಕೇಳುವುದನ್ನು ತಡೆಬೇಕು. ಭಕ್ತರು ಮತ್ತು ಅವರ ದೇವರ ಸಂಬಂಧವನ್ನು ಅವಮಾನಿಸದಂತೆ ಅಥವಾ ದೈವಿಕ ಖಂಡನೆಯನ್ನು ಮಾಡದಂತೆ ಕೇಳಿಕೊಂಡಿದೆ.

ನೈತಿಕ ಖಂಡನೆ ಮಾಡುವ ಪಕ್ಷಗಳು, ಅಭ್ಯರ್ಥಿಗಳು ಮತ್ತು ಸ್ಟಾರ್ ಪ್ರಚಾರಕರಿಗೆ ಕಠಿಣ ಕ್ರಮದ ಎಚ್ಚರಿಕೆಯಲ್ಲಿ ನೀಡಿದೆ. ಚುನಾವಣಾ ಸಮಿತಿಯು ದೇವಸ್ಥಾನಗಳು, ಮಸೀದಿಗಳು, ಚರ್ಚ್‌ಗಳು, ಗುರುದ್ವಾರಗಳು ಅಥವಾ ಯಾವುದೇ ಇತರ ಪೂಜಾ ಸ್ಥಳಗಳನ್ನು ಚುನಾವಣಾ ಪ್ರಚಾರ ಅಥವಾ ಚುನಾವಣಾ ಭಾಷಣಕ್ಕಾಗಿ ಬಳಸಬಾರದು ಎಂದು ಸೂಚಿಸಿದೆ. ಈ ಹಿಂದೆ ನೋಟೀಸ್ ಪಡೆದಿರುವ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಮಾದರಿ ಸಂಹಿತೆ ಪುನರಾವರ್ತಿತ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದೆ.

ಈ ತಿಂಗಳಾಂತ್ಯದಲ್ಲಿ ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಘೋಷಣೆಯೊಂದಿಗೆ ಮಾದರಿ ಸಂಹಿತೆ ಜಾರಿಗೆ ಬರುವ ಸಂಭವವಿದೆ. ಇದಕ್ಕೂ ಮೊದಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇತ್ತೀಚೆಗೆ ರಾಜಕೀಯ ಪಕ್ಷಗಳು ವೈಯಕ್ತಿಕ ದಾಳಿಯ ಬದಲು ನೈತಿಕ ಮತ್ತು ಗೌರವಾನ್ವಿತ ರಾಜಕೀಯ ಭಾಷಣವನ್ನು ಉತ್ತೇಜಿಸಬೇಕು ಎಂದು ಒತ್ತಿ ಹೇಳಿದ್ದಾರೆ.

ಚುನಾವಣಾ ಆಯೋಗದ ಸಲಹೆಯು ಈಗ ಔಪಚಾರಿಕವಾಗಿ ನೈತಿಕ ರಾಜಕೀಯ ಭಾಷಣಕ್ಕೆ ವೇದಿಕೆಯನ್ನು ಸಿದ್ಧಪಡಿಸಿದೆ. 2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಗೊಂದಲವನ್ನು ಕಡಿಮೆ ಮಾಡಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಸಾರ್ವಜನಿಕ ಪ್ರಚಾರದಲ್ಲಿ ಸೌಜನ್ಯವನ್ನು ಕಾಪಾಡಿಕೊಳ್ಳಲು ಮತ್ತು ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳ ಮೇಲೆ ಹೆಚ್ಚುವರಿ ಜವಾಬ್ದಾರಿಯನ್ನು ಹೊರುವಂತೆ ಪಕ್ಷಗಳಿಗೆ ಆಯೋಗ ಎಚ್ಚರಿಕೆ ನೀಡಿದೆ.

ನಾಯಕರು ವಾಸ್ತವಿಕ ಆಧಾರವಿಲ್ಲದೆ ಹೇಳಿಕೆಗಳನ್ನು ನೀಡಬಾರದು ಅಥವಾ ಮತದಾರರನ್ನು ದಾರಿ ತಪ್ಪಿಸಬಾರದು. ಪ್ರತಿಸ್ಪರ್ಧಿಗಳನ್ನು ನಿಂದಿಸುವ ಅಥವಾ ಅವಮಾನಿಸುವ ಪೋಸ್ಟ್‌ಗಳು ಮತ್ತು ಕೆಟ್ಟ ಅಭಿರುಚಿಯ ಅಥವಾ ಅವಮಾನ ಮಾಡುವಂತೆ ಇರುವ ಪೋಸ್ಟ್‌ಗಳನ್ನು ಹಂಚಿಕೊಳ್ಳಬಾರದು ಎಂದು ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist