ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಸೆಮಣೆ ಏರಲು ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಮಗನನ್ನೇ ಭೀಕರವಾಗಿ ಕೊಂದ ತಂದೆ..!

Twitter
Facebook
LinkedIn
WhatsApp
ಹಸೆಮಣೆ ಏರಲು ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಮಗನನ್ನೇ ಭೀಕರವಾಗಿ ಕೊಂದ ತಂದೆ..!

ಮಗನ ಮದುವೆಗೆ ಕೆಲವೇ ಗಂಟೆ ಬಾಕಿ ಇವೆ ಎಂದಾಗ ತಂದೆಯಾದವನು ಹೇಗಿರುತ್ತಾನೆ? ಮನದ ತುಂಬ ಖುಷಿ ಇರುತ್ತದೆ. ಎಲ್ಲ ಸಿದ್ಧತೆ ಬಗ್ಗೆ ಮೇಲ್ವಿಚಾರಣೆ, ಮನೆಗೆ ಬಂದ ನೆಂಟರನ್ನು ಸಂಭಾಳಿಸುವುದು, ಊಟೋಪಚಾರ ಸೇರಿ ಬಿಡುವಿಲ್ಲದ ಓಡಾಟ ಇರುತ್ತದೆ. ಆದರೆ, ದೆಹಲಿಯಲ್ಲಿ (Delhi) ವ್ಯಕ್ತಿಯೊಬ್ಬರು ತಮ್ಮ ಮಗನ ಮದುವೆಗೆ (Marriage) ಕೆಲವೇ ಗಂಟೆಗಳು ಬಾಕಿ ಇರುವಾಗಲೇ, ಆತನನ್ನು ಭೀಕರವಾಗಿ ಕೊಲೆ (Father Kills Son) ಮಾಡಿದ್ದಾರೆ. ಹಾಗಾಗಿ, ಇಡೀ ಮದುವೆ ಮನೆಯು ಮಸಣದಂತಾಗಿದೆ.

ಹೌದು, ಗುರುವಾರ ಬೆಳಗ್ಗೆ (ಮಾರ್ಚ್‌ 7) ಗೌರವ್‌ ಸಿಂಘಾಲ್‌ (29) ಅವರು ಹಸೆಮಣೆ ಏರುವವರಿದ್ದರು. ಮದುವೆಗೆ ಕೆಲವೇ ಗಂಟೆಗಳು ಇರುವಾಗಲೇ ಹೊಸದಾಗಿ ತಂದ ಸೂಟು, ಬೂಟು ಸೇರಿ ಎಲ್ಲ ವ್ಯವಸ್ಥೆ ಆಗಿದೆಯೇ ಎಂಬುದನ್ನು ನೋಡಿಕೊಳ್ಳುತ್ತಿದ್ದರು. ಆದರೆ, ಬುಧವಾರ ರಾತ್ರಿ (ಮಾರ್ಚ್‌ 6) ಗೌರವ್‌ ಸಿಂಘಾಲ್‌ ಅವರ ತಂದೆ ರಂಗಲಾಲ್‌ ಅವರು ಮಗನ ಮೇಲೆಯೇ ದಾಳಿ ನಡೆಸಿದ್ದಾರೆ. ಮಗನಿಗೆ ಸುಮಾರು 15 ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿದ್ದಾರೆ. ಪ್ರಕರಣದ ಬಳಿಕ ಪೊಲೀಸರು ರಂಗಲಾಲ್‌ ಅವರನ್ನು ಬಂಧಿಸಿದ್ದಾರೆ.

ಮಗನನ್ನೇ ಕೊಲ್ಲಲು ಕಾರಣವೇನು?

ಜಿಮ್‌ ಮಾಲೀಕನಾಗಿರುವ ಗೌರವ್‌ ಸಿಂಘಾಲ್ ಅವರಿಗೆ ಮದುವೆ ಇಷ್ಟವಿರಲಿಲ್ಲ. ಆದರೆ, ರಂಗಲಾಲ್‌ ಅವರು ಪದೇಪದೆ ಒತ್ತಾಯಿಸಿದ ಕಾರಣ ಅವರು ಮದುವೆಗೆ ಒಪ್ಪಿದ್ದರು. ಇನ್ನು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಂಗಲಾಲ್‌ ಅವರನ್ನು ಗೌರವ್‌ ಸಿಂಘಾಲ್‌ ಅವರು ಅವಮಾನಿಸುತ್ತಿದ್ದರು. ಎಲ್ಲರ ಎದುರು ಮಗನಿಂದಲೇ ಅವಮಾನಕ್ಕೀಡಾದ ರಂಗಲಾಲ್‌ ಅವರು ಕುದ್ದುಹೋಗಿದ್ದರು. ಬುಧವಾರ ರಾತ್ರಿಯೂ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಕುಪಿತಗೊಂಡ ರಂಗಲಾಲ್‌ ಅವರು ಮಗನನ್ನೇ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

“ಬುಧವಾರ ರಾತ್ರಿ ದೆಹಲಿ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಕರೆ ಬಂತು. ಕೊಲೆಯಾಗಿರುವ ವಿಷಯ ತಿಳಿದು ಪೊಲೀಸರು ರಂಗಲಾಲ್‌ ಅವರ ಮನೆಗೆ ಹೋದರು. ಗೌರವ್‌ ಸಿಂಘಾಲ್‌ ಶವವನ್ನು ಮನೆಯಲ್ಲೇ ಬಚ್ಚಿಡಲಾಗಿತ್ತು. ಪೊಲೀಸರು ವಿಚಾರಣೆ ನಡೆಸಿದ ಬಳಿಕ ರಂಗಲಾಲ್‌ ಅವರೇ ಮಗನನ್ನು ಕೊಲೆ ಮಾಡಿದ್ದಾರೆ ಎಂಬುದು ಗೊತ್ತಾಯಿತು. ಬಳಿಕ ಪೊಲೀಸರು ರಂಗಲಾಲ್‌ ಅವರನ್ನು ಬಂಧಿಸಿದರು” ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ತಂದೆ-ಮಗನ ಸಂಬಂಧವು ಕೆಲ ತಿಂಗಳಿಂದ ಹಳಸಿತ್ತು ಎಂದು ಕೂಡ ಅವರು ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist