ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಂಟು ದಿನದ ಬಳಿಕ ಮತ್ತೆ ತೆರೆದ ರಾಮೇಶ್ವರಂ ಕೆಫೇ ; ಗ್ರಾಹಕರಿಂದ ಭರ್ಜರಿ ಸ್ಪಂದನ.!

Twitter
Facebook
LinkedIn
WhatsApp
Rameswaram Cafe reopened after eight days; Great response from customers

ರಾಜಧಾನಿಯ ವೈಟ್‌ಫೀಲ್ಡ್‌ ಬಳಿಯ ಕುಂದಹಳ್ಳಿಯ ʼರಾಮೇಶ್ವರಂ ಕೆಫೆʼ (Rameshwaram Cafe Blast) ಇಂದು ಮತ್ತೆ ತೆರೆದಿದೆ. ಬಾಂಬ್‌ ಬ್ಲಾಸ್ಟ್‌ ಬಳಿಕ ಬಂದ್‌ ಆಗಿದ್ದ ಕೆಫೆ ಎಂಟು ದಿನಗಳ ಬಳಿಕ ಇಂದಿನಿಂದ ಮತ್ತೆ ಶುರುವಾಗುತ್ತಿದೆ. ಗ್ರಾಹಕರ ಭರ್ಜರಿ ಸ್ಪಂದನ ವ್ಯಕ್ತವಾಗಿದೆ

ಕಳೆದ ಶುಕ್ರವಾರ ಮಾರ್ಚ್‌ ಒಂದರಂದು ಮಧ್ಯಾಹ್ನ 12.55ಕ್ಕೆ ಬಾಂಬ್‌ ಬ್ಲಾಸ್ಟ್ ಆಗಿತ್ತು. ಇದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಆರೋಪಿಯ ಜಾಡು ಹಿಡಿದಿರುವ ಪೊಲೀಸರು ತಂಡಗಳನ್ನು ರಚಿಸಿಕೊಂಡು ಪಾತಕಿಯ ಹುಡುಕಾಟದಲ್ಲಿದ್ದಾರೆ. ಈ ನಡುವೆ ಒಂದು ವಾರದಿಂದ ತನಿಖೆ ಮತ್ತಿತರ ಪ್ರಕ್ರಿಯೆಗಳಿಗಾಗಿ ರಾಮೇಶ್ವರಂ ಕೆಫೆ ಬಂದ್ ಆಗಿತ್ತು.

ನಗರ ಪೊಲೀಸರು, ಎನ್ಐಎ ತಂಡ ಕೂಡ ಇಲ್ಲಿ ಬಂದು ಪರಿಶೀಲನೆ ನಡೆಸಿದ್ದರು. ಬಾಂಬ್ ಸ್ಫೋಟದಿಂದಾಗಿ ಪೀಠೋಪಕರಣಕ್ಕೆ ಹಾನಿಯಾಗಿತ್ತು. ಇದೀಗ ಎಲ್ಲವನ್ನು ಸರಿ ಪಡಿಸಿರುವ ಮಾಲೀಕರು ಇಂದಿನಿಂದ ಮತ್ತೆ ರಾಮೇಶ್ವರಂ ಕೆಫೆ ಶುರು ಮಾಡುತ್ತಿದ್ದಾರೆ.

ಕೆಫೆಯನ್ನು ಮೊದಲಿಗಿಂತ ಹೆಚ್ಚಿನ ಭದ್ರತೆಯಲ್ಲಿ ಆರಂಭಿಸುತ್ತಿದ್ದು, ಪ್ರವೇಶಿಸುವಲ್ಲಿ ಹೊಸದಾಗಿ ಮೆಟಲ್‌‌ ಡಿಟೆಕ್ಟರ್ ಅಳವಡಿಕೆ ಮಾಡಿದ್ದಾರೆ. ಸಂಶಯಾಸ್ಪದ ಜನರ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದೆ. ಹೂವುಗಳು ಹಾಗೂ ತಳಿರು ತೋರಣಗಳಿಂದ ಕೆಫೆಯನ್ನು ಅಲಂಕರಿಸಲಾಗಿದೆ.

ಬೆಳಗ್ಗೆ 6.30ಕ್ಕೆ ಕೆಫೆ ಆರಂಭವಾಗಿದೆ. ವಿಶೇಷ ಪೂಜೆ, ಹೋಮ ಹವನದ ಬಳಿಕ ಆರಂಭವಾಗುತ್ತಿದೆ. ನಿನ್ನೆಯಿಂದ ಕೆಫೆಯಲ್ಲಿ ವಿಶೇಷ ಪೂಜೆ ಕೂಡ ನೆರವೇರಿತ್ತು. ರಾಷ್ಟ್ರಗೀತೆಯೊಂದಿಗೆ ಕೆಫೆಯನ್ನು ಹೋಟೆಲ್ ಮಾಲೀಕ ರಾಘವೇಂದ್ರ ರಾವ್ ಆರಂಭ ಮಾಡಿದರು.

ಕೆಫೆ ಮರು ಓಪನ್‌ಗೆ ಗ್ರಾಹಕರಿಂದ ಭರ್ಜರಿಯಾಗಿ ರೆಸ್ಪಾನ್ಸ್ ದೊರೆತಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಹೋಟೆಲ್‌ಗೆ ಗ್ರಾಹಕರು ಆಗಮಿಸುತ್ತಿದ್ದಾರೆ. ಕೆಫೆ ಮಾಲೀಕರ ಮೊಗದಲ್ಲಿ ಇದರಿಂದ ಮಂದಹಾಸ ಮೂಡಿದೆ. ಹೋಟೆಲ್‌ಗೆ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಹೋಟೆಲ್ ಪ್ರವೇಶದ್ವಾರದಲ್ಲಿ ಮೆಟಲ್ ಡಿಟೆಕ್ಟರ್‌ ಅಳವಡಿಸಲಾಗಿದ್ದು, ಸೆಕ್ಯೂರಿಟಿಗೆ ಅಂತ ನಿವೃತ್ತಿ ಸೈನಿಕರ ನೇಮಕ ಮಾಡಿಕೊಳ್ಳಲಾಗಿದೆ. ಕೆಫೆ ಸುತ್ತಮುತ್ತ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಗ್ರಾಹಕರ ಬ್ಯಾಗ್ ತಪಾಸಣೆ ಮಾಡಲಾಗುತ್ತಿದೆ. ಹೋಟೆಲ್‌ಗೆ ಆಗಮಿಸಿದ ಗ್ರಾಹಕರ ನಡುವೆ ಬಾಂಬ್ ಸ್ಫೋಟದ ಬಗ್ಗೆ ಚರ್ಚೆ ಕೂಡ ನಡೆಯುತ್ತಿದೆ.

ಕೆಫೆ ಮಾಲೀಕ ರಾಘವೇಂದ್ರ ರಾವ್ ಖುದ್ದು ಗ್ರಾಹಕರ ಬಳಿ ಬಂದು ಮಾತನಾಡಿಸುತ್ತಿದ್ದು, ಗ್ರಾಹಕರಿಗೆ ಧೈರ್ಯ ತುಂಬುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವ ಭರವಸೆ ನೀಡುತ್ತಿದ್ದು, ಗ್ರಾಹಕರಿಂದ ಕೂಡ ಕೆಫೆ ಮಾಲೀಕರಿಗೆ ಧೈರ್ಯ ತುಂಬುವ ಕೆಲಸವಾಗುತ್ತಿದೆ. ʼಧೈರ್ಯವಾಗಿರಿ. ನಾವು ನಿಮ್ಮ ಜೊತೆ ಇದ್ದೇವೆʼ ಎಂದು ಗ್ರಾಹಕರು ಆತ್ಮವಿಶ್ವಾಸ ತುಂಬುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist