ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Yaduveer Wadiyar: ಮೈಸೂರ್ ಟಿಕೆಟ್ ಘೋಷಣೆಯಾಗಿದ್ದ ಯದುವೀರ್ ಒಡೆಯರ್ ಹಿನ್ನೆಲೆ ಏನು? ಈ ಮಾಹಿತಿ ಒಮ್ಮೆ ನೋಡಿ

Twitter
Facebook
LinkedIn
WhatsApp
Yaduveer Wadiyar: ಮೈಸೂರ್ ಟಿಕೆಟ್ ಘೋಷಣೆಯಾಗಿದ್ದ ಯದುವೀರ್ ಒಡೆಯರ್ ಹಿನ್ನೆಲೆ ಏನು? ಈ ಮಾಹಿತಿ ಒಮ್ಮೆ ನೋಡಿ
 ದೇಶಕ್ಕೆ ಮೊಟ್ಟಮೊದಲ ಬಾರಿಗೆ ಪ್ರಜಾಪ್ರತಿನಿಧಿ ವ್ಯವಸ್ಥೆಯನ್ನ ಜಾರಿಗೆ ತಂದ ಮೈಸೂರು ರಾಜಮನೆತನದ ಎರಡನೇ ಕುಡಿ, ಎರಡು ದಶಕಗಳ ಬಳಿಕ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್​(Yaduveer Krishnadatta Chamaraja Wadiyar)ಗೆ ಈ ಬಾರಿ ಬಿಜೆಪಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದ್ದು, ಸಕ್ರಿಯ ರಾಜಕಾರಣಕ್ಕೆ ಪ್ರವೇಶ ಮಾಡುವುದಿಲ್ಲ ಎಂದು ಹೇಳುತ್ತಲೇ ಯದುವೀರ್ ಒಡೆಯರ್ ರಾಜಕಾರಣಕ್ಕೆ ಇಳಿದಿದ್ದಾರೆ. ಹಾಗಾದರೆ 32 ವರ್ಷದ ಯದುವೀರ್ ಒಡೆಯರ್ ಅವರ ಹಿನ್ನೆಲೆ ಏನು?. ವಿದ್ಯಾಭ್ಯಾಸ ಎಲ್ಲಾ ವಿವರಗಳ ಪೂರ್ಣ ಮಾಹಿತಿ ಇಲ್ಲಿದೆ.

ಮೈಸೂರು ರಾಜಮನೆತನದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಿಗೆ ಮಕ್ಕಳಿಲ್ಲದ ಕಾರಣ ಅವರು ನಿಧನರಾದ ನಂತರ ರಾಜಮಾತೆ ಪ್ರಮೋದಾದೇವಿ ಒಡೆಯರ್ ಫೆಬ್ರವರಿ – 23-2015 ರಂದು ಇವರನ್ನ ದತ್ತು ಪಡೆದುಕೊಂಡರು. ನಂತರ ಇವರು ಅಧಿಕೃತವಾಗಿ ಮೈಸೂರು ರಾಜಮನೆತನದ ಒಡೆಯರಾದರು ಹಾಗೂ ಮೈಸೂರು ಮಹಾ ಸಂಸ್ಥಾನದ 27ನೇ ರಾಜರಾಗಿ ಸಿಂಹಾಸನ ಏರಿದರು. ಅಂದಿನಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂಬ ಹೆಸರಿನಿಂದ ಸಿಂಹಾಸನ ಏರಿ ಮೈಸೂರು ಮಹಾಸಂಸ್ಥಾನದ ರಾಜರಾದರು.

ಯದುವೀರ್ ಗೋಪಾಲರಾಜ ಅರಸ್ ಎಂಬ ಜನ್ಮನಾಮ ಇವರದ್ದು. ದತ್ತು ನಂತರ ಸಿಂಹಾಸನ ಏರಿದ ನಂತರ ಇವರ ಹೆಸರು ಬದಲಾವಣೆ ಆಗಿದೆ. ಈಗ ರಾಜಸ್ಥಾನದ ದುಂಗರ ಪುರದ ರಾಜವಂಶದ ರಾಜಕುಮಾರಿ ತ್ರಿಶಿಕಾ ಕುಮಾರಿ ಅವರನ್ನ ಮದುವೆ ಆಗಿದ್ದು, ಇವರಿಗೆ ಆದ್ಯವೀರ ನರಸಿಂಹರಾಜ ಒಡೆಯರ್ ಎಂಬ ಮಗನಿದ್ದಾನೆ.

ಯದುವೀರ್ ಒಡೆಯರ್ ಶಿಕ್ಷಣ : ಯದುವೀರ್ ಅವರು ಬೆಂಗಳೂರಿನ ವಿದ್ಯಾನಿಕೇತನ್ ಶಿಕ್ಷಣ ಸಂಸ್ಥೆಯಲ್ಲಿ ಎಸ್​ಎಸ್​ಎಲ್​ಸಿ ಮುಗಿಸಿ, ಕೆನೆಡಿಯನ್ ಅಂತಾರಾಷ್ಟೀಯ ಶಾಲೆಯಲ್ಲಿ ಪಿಯುಸಿ ಪಾಸ್ ಆಗಿ, ನಂತರ ಅಮೆರಿಕದ ಬಾಸ್ಟನ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ಆಂಗ್ಲ ಭಾಷೆ ವಿಷಯದಲ್ಲಿ ಬಿಎ ಪದವಿ ಪಡೆದಿದ್ದಾರೆ. ಯದುವೀರ್ ಒಡೆಯರ್​​​ಗೆ ಇತಿಹಾಸ ವಿಷಯದಲ್ಲಿ ಆಸಕ್ತಿ ಇದೆ. ಮೈಸೂರು ಸಂಸ್ಥಾನದ ಮಹಾರಾಜ ಆದ ನಂತರ ಕಳೆದ 9 ವರ್ಷಗಳಿಂದಲೂ ವಿವಿಧ ಸಾಮಾಜಿಕ ಹಾಗೂ ಶಾಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮಕ್ಕಳಿಗೆ ಉತ್ತೇಜನ ನೀಡುವ ಸಲಹೆಗಳನ್ನು ನೀಡುತ್ತಿದ್ದರು.

ಈಗ ಇವರಿಗೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಆ ಮೂಲಕ ಎರಡು ದಶಕಗಳ ಬಳಿಕ ರಾಜಮನೆತನದ ಎರಡನೇ ಮಹಾರಾಜ ಸಕ್ರಿಯ ರಾಜಕಾರಣಕ್ಕೆ ಪ್ರವೇಶ ಮಾಡಿದಂತಾಗಿದೆ.

ರಾಜಮನೆತನದ ಶ್ರೀಕಂಠದತ್ತ ಒಡೆಯರ್ ಅವರ ರಾಜಕೀಯ ಇತಿಹಾಸ: ಮೈಸೂರು ರಾಜಮನೆತನದ ದಿವಂಗತ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ 6 ಬಾರಿ ಚುನಾವಣೆಯಲ್ಲಿ ಭಾಗವಹಿಸಿ, 4 ಚುನಾವಣೆಯಲ್ಲಿ ಜಯಗಳಿಸಿದ್ದು ಇತಿಹಾಸ. ಅದರಲ್ಲಿ 1984 ಹಾಗೂ 1989 ರಲ್ಲಿ ಕಾಂಗ್ರೆಸ್​ನಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಬಳಿಕ 1996 ಮತ್ತು 1999ರಲ್ಲಿ ಮತ್ತೆ ಕಾಂಗ್ರೆಸ್​ನಿಂದ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀಕಂಠದತ್ತ ಒಡೆಯರ್ 1991ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿ ಕಾಂಗ್ರೆಸ್​ನ ಚಂದ್ರಪ್ರಭಾ ಅರಸ್ ವಿರುದ್ಧ ಸೋಲು ಕಂಡಿದ್ದರು.

ಬಳಿಕ 2004ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿ ಬಿಜೆಪಿಯ ಸಿ. ಹೆಚ್ ವಿಜಯ್ ಶಂಕರ್ ವಿರುದ್ಧ ಸೋಲು ಕಂಡ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಸರಿದಿದ್ದರು. ಆದಾದ ಬಳಿಕ ಅನಾರೋಗ್ಯದ ಹಿನ್ನೆಲೆ ನಿಧನರಾದರು. ಬಳಿಕ ಪ್ರಮೋದಾದೇವಿ ಒಡೆಯರ್ ಸಕ್ರಿಯ ರಾಜಕಾರಣದಿಂದ ದೂರ ಉಳಿದು, ತಮ್ಮ ಕುಟುಂಬದ ಆಸ್ತಿಗಳ ರಕ್ಷಣೆ ಕಡೆ ಗಮನ ಹರಿಸಿದ್ದರು.

ಸಕ್ರಿಯ ರಾಜಕಾರಣಕ್ಕೆ ಯದುವೀರ್ : 23ನೇ ವರ್ಷಕ್ಕೆ ಮೈಸೂರು ಮಹಾಸಂಸ್ಥಾನಕ್ಕೆ ದತ್ತುಪುತ್ರನಾಗಿ ಬಂದ ಯದುವೀರ್ ಬಳಿಕ ಮದುವೆ ಆಗಿ ಕಳೆದ 9 ವರ್ಷಗಳಿಂದ ಸಕ್ರಿಯ ಸಮಾಜ ಸೇವೆಗಳ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರನ್ನ 2019ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಬಿಜೆಪಿ ಹೈಕಮಾಂಡ್ ಮನವೊಲಿಸಲು ಪ್ರಯತ್ನಿಸಿತು. ಆದರೆ ಆಗ ಯದುವೀರ್ ಒಡೆಯರ್ ಆಸಕ್ತಿ ತೋರಲಿಲ್ಲ.

ಇದಾದ ಬಳಿಕ ವಿಶ್ವಯೋಗ ದಿನಕ್ಕೆ ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿದ ಅಮಿತ್ ಶಾ ಅವರು ಅರಮನೆಗೆ ಭೇಟಿ ನೀಡಿದಾಗ, ಯದುವೀರ್ ಹಾಗೂ ಪ್ರಮೋದಾದೇವಿ ಒಡೆಯರ್ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿರುವ ಸುದ್ದಿಗಳು ಹೊರ ಬಿದ್ದಿದ್ದವು. ಯದುವೀರ್ ಒಡೆಯರ್ ಅವರ ಮಾವನ ಮೂಲಕವೂ ಒತ್ತಡ ಇದ್ದುದರಿಂದ ಕೊನೆಗೂ ಸಕ್ರಿಯ ರಾಜಕಾರಣಕ್ಕೆ ಬರಲು ಒಪ್ಪಿದ್ದು, ಆ ಬಳಿಕವೇ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ಪಡೆಯದೇ ಲೋಕಸಭೆ ಕ್ಷೇತ್ರದ ಟಿಕೆಟ್ ಪಡೆದಿದ್ದು, ಈಗ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಬಳಿಕ ಪಕ್ಷದ ಹಿರಿಯರನ್ನು ಭೇಟಿಯಾಗಿ ಚುನಾವಣೆ ಪ್ರಚಾರವನ್ನ ಯದುವೀರ್ ಒಡೆಯರ್ ಆರಂಭಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist