ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ: 3 ಆರೋಪಿಗಳಿಗೆ ಜಾಮೀನು ಮಂಜೂರು

Twitter
Facebook
LinkedIn
WhatsApp
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ: 3 ಆರೋಪಿಗಳಿಗೆ ಜಾಮೀನು ಮಂಜೂರು

2022 ಜುಲೈ 28ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಝಿಲ್ ಹತ್ಯೆ ನಡೆಸಿದ ಪ್ರಮುಖ 3 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.

ಸುರತ್ಕಲ್ ಮಂಗಳಪೇಟೆಯ ಮೊಹಮ್ಮದ್ ಫಾಝಿಲ್ ಹತ್ಯೆಯ A1 ಆರೋಪಿ ಸುಹಾಸ್ ಶೆಟ್ಟಿ, A2 ಆರೋಪಿ ಅಭಿಷೇಕ್, A3 ಆರೋಪಿ ನೇಪಾಳಿ ಗಣೇಶ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.

ಫಾಝಿಲ್ ಹತ್ಯೆಯಲ್ಲಿ ಒಟ್ಟು 8 ಪ್ರಮುಖ ಆರೋಪಿಗಳ ಬಂಧನವಾಗಿತ್ತು. ಐವರು ಆರೋಪಿಗಳು ಈಗಾಗಲೇ ಜಾಮೀನಿನಲ್ಲಿ ಹೊರ ಬಂದಿದ್ದಾರೆ. ಇದೀಗ ಮೂವರು ಪ್ರಮುಖ ಆರೋಪಿಗಳಿಗೆ ಜಾಮೀನು ಆಗಿದೆ. ಈ ಮೂಲಕ‌ ಫಾಝಿಲ್ ಹತ್ಯೆಯ ಎಲ್ಲ ಆರೋಪಿಗಳೂ ಬಂಧಮುಕ್ತರಾದಂತಾಗಿದೆ.

2022 ಜುಲೈ 28ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮೊಹಮ್ಮದ್ ಫಾಜಿಲ್ (23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ದಾಳಿ ಮಾಡಿ ಪರಾರಿಯಾಗಿದ್ದರು. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಝಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಫಾಝಿಲ್ ಕೊನೆಯುಸಿರೆಳೆದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ