ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸದಾನಂದ ಗೌಡಗೆ ಚಿಕ್ಕಬಳ್ಳಾಪುರ ಟಿಕೆಟ್ ಆಫರ್? ಪಟ್ಟುಹಿಡಿದ ಗೌಡ್ರು ಆಫರ್ ಗೆ ಒಪ್ಪಿದ್ರಾ.!

Twitter
Facebook
LinkedIn
WhatsApp
ಸದಾನಂದ ಗೌಡಗೆ ಚಿಕ್ಕಬಳ್ಳಾಪುರ ಟಿಕೆಟ್ ಆಫರ್? ಪಟ್ಟುಹಿಡಿದ ಗೌಡ್ರು ಆಫರ್ ಗೆ ಒಪ್ಪಿದ್ರಾ.!

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ (DV Sadananda Gowda) ಅವರು ನಾಳೆ ಬಿಜೆಪಿ ಮಾಸ್ಟರ್ ಸ್ಟ್ರೋಕ್ ಕೊಡುವ ಸಾಧ್ಯತೆ ಇದೆ. ಈ ನಡುವೆ ಸದಾನಂದಗೌಡರನ್ನು ದೂರವಾಣಿ ಕರೆ ಮೂಲಕ ಸಂಪರ್ಕಿಸಿದ ಬಿಜೆಪಿ ಹೈಕಮಾಂಡ್, ಚಿಕ್ಕಬಳ್ಳಾಪುರ (Chikkaballapur). ಲೋಕಸಭಾ ಕ್ಷೇತ್ರದ ಟಿಕೆಟ್ ಆಫರ್ ಕೊಟ್ಟು ಮುನಿಸು ಶಮನಗೊಳಿಸುವ ಪ್ರಯತ್ನ ಮಾಡಿದೆ ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಬಗ್ಗೆ ಹೈಕಮಾಂಡ್ ಆಫರ್ ನೀಡಿದ್ದರೂ ಸದಾನಂದಗೌಡ ಅವರು ಸಹಮತ ಸೂಚಿಸಿಲ್ಲ. ಇನ್ನೊಂದೆಡೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಗೆ ತೆರಳುವ ಮುನ್ನ ಸದಾನಂದಗೌಡರ ಜೊತೆ ದೂರವಾಣಿ ಮೂಲಕ ಮಾತನಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳು ಪ್ರಯತ್ನ ನಡೆಸಿದರು.

ವರಿಷ್ಠರ ಜೊತೆ ಚರ್ಚೆ ನಡೆಸುವ ಬಗ್ಗೆ ಸದಾನಂದಗೌಡರಿಗೆ ವಿಜಯೇಂದ್ರ ಅವರು ಭರವಸೆ ನೀಡಿದ್ದಾರೆ. ಈ ಹಿಂದೆ ಆಪ್ತರನ್ನು ಕಳುಹಿಸಿ ಮನವೊಲಿಕೆ ಮಾಡುವ ಯತ್ನ ವಿಜಯೇಂದ್ರ ನಡೆಸಿದ್ದರು. ಒಂದು ಕಡೆ, ಬೆಳಗ್ಗೆ ವರಿಷ್ಠರ ಕರೆ ಹಿನ್ನೆಲೆ ಸದಾನಂದಗೌಡ ಅವರು ಸುದ್ದಿಗೋಷ್ಠಿ ಮುಂದೂಡಿದರೆ, ಇನ್ನೊಂದೆಡೆ, ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷವು ಸದಾನಂದಗೌಡರನ್ನು ಸಂಪರ್ಕಿಸುತ್ತಿದೆ. ಪಕ್ಷಕ್ಕೆ ಸೇಳೆಯುವ ಪ್ರಯತ್ನ ನಡೆಸುತ್ತಿದೆ.

ಮಂಗಳೂರು ಕಡೆಯಿಂದ ಎರಡನೇ ಸಂಸದರಾಗುತ್ತಾರಾ ಡಿವಿಎಸ್? ಕರಾವಳಿ ಭಾಗದಿಂದ ಚಿಕ್ಕಬಳ್ಳಾಪುರದ ಟಿಕೆಟ್ ಆಫರ್ ಪಡೆಯುತ್ತಿರುವ ಎರಡನೇ ರಾಜಕಾರಣಿ ಸದಾನಂದಗೌಡ ಅವರಾಗಿದ್ದಾರೆ. ವೀರಪ್ಪ ಮೊಯ್ಲಿ ಅವರು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಎರಡನೇ ಬಾರಿ ಸೋಲು ಅನುಭವಿಸಿದ್ದರು. ಇದೀಗ ಮಂಗಳೂರು ಭಾಗದ ಸದಾನಂದ ಗೌಡ ಅವರಿಗೆ ಚಿಕ್ಕಬಳ್ಳಾಪುರದ ಟಿಕೆಟ್ ಆಫರ್ ಪಡೆದಿದ್ದಾರೆ. ಆದರೆ, ಇದಕ್ಕೆ ಗೌಡರು ಒಪ್ಪಿಗೆ ಸೂಚಿಸಿಲ್ಲ ಎಂದು ತಿಳಿದುಬಂದಿದೆ.

ಇಬ್ಬರ ಜಗಳ ಸದಾನಂದಗೌಡರಿಗೆ ಲಾಭ? ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಮತ್ತು ವಿಶ್ವನಾಥ್ (ಪುತ್ರನಿಗೆ) ನಡುವೆ ಟಿಕೆಟ್ ಫೈಟ್ ನಡೆಯುತ್ತಿದೆ. ಈ ನಡುವೆ ಕ್ಷೇತ್ರದಲ್ಲಿ ಸದಾನಂದಗೌಡರಿಗೆ ಮಣೆ ಹಾಕಲು ಹೈಕಮಾಂಡ್ ಮುಂದಾಗಿದೆ. ಉಡುಪಿ-ಚಿಕ್ಕಮಗಳುರು ಕ್ಷೇತ್ರದಲ್ಲಿ ಸಿಟಿ ರವಿ-ಶೋಭ ಕರಂದ್ಲಾಜೆ ನಡುವಿನ ಟಿಕೆಟ್ ಜಟಾಪಟಿ ಹಿನ್ನೆಲೆ ಟಿಕೆಟ್ ಕೋಟ ಶ್ರೀನಿವಾಸ್ ಪೂಜಾರಿ ಪಾಲಾಯಿತು. ಇದೇ ರೀತಿ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್-ವಿಶ್ವನಾಥ್ ಹಗ್ಗಜಗ್ಗಾಟದಲ್ಲಿ ಸದಾನಂದಗೌಡರಿಗೆ ಟಿಕೆಟ್ ಸಿಗುತ್ತಾ ಎನ್ನುವುದು ಕುತೂಹಲ ಮೂಡಿಸಿದೆ.

ಚಿಕ್ಕಬಳ್ಳಾಪುರದಲ್ಲಿ ಇಬ್ಬರ ನಡುವೆ ಟಿಕೆಟ್ ಫೈಟ್: ಸದಾನಂದಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಫರ್ ನೀಡಿದೆಯಾದರೂ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಸುತ್ತಿದ್ದಾರೆ. ಹೌದು, ಮಾಜಿ ಸಚಿವ ಡಾ.ಕೆ.ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್​ಆರ್ ವಿಶ್ವನಾಥ್ ನಡುವೆ ಪೈಪೋಟಿ ನಡೆಯುತ್ತಿದೆ. ಟಿಕೆಟ್ ಸಿಗುವ ವಿಶ್ವಾಸದಲ್ಲಿರುವ ಸುಧಾಕರ್, ಟಿಕೆಟ್ ಘೋಷಣೆಗೂ ಮುನ್ನ ಚುನಾವಣೆಯಲ್ಲಿ ತನ್ನನ್ನು ಗೆಲ್ಲಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಇತ್ತ, ವಿಶ್ವನಾಥ್ ಅವರು ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಿದ್ದು, ಕ್ಷೇತ್ರದಲ್ಲಿ ರ್ಯಾಲಿಗಳ ಮೂಲಕ ಹವಾ ಸೃಷ್ಟಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist