ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಡಿನ ಪ್ರಮುಖ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಬ್ರಿಜೇಶ್ ಚೌಟ ಪ್ರಾರ್ಥನೆ. ಮೋದಿಯ ಜೊತೆ ದೇಶ ಸೇವೆಗಾಗಿ ತಾಯಿ ದೇಯಿ ಬೈದೇತಿ, ಕೋಟಿ ಚೆನ್ನಯ್ಯರ ಆಶೀರ್ವಾದ ಬೇಡಿದ ಯುವನಾಯಕ.

Twitter
Facebook
LinkedIn
WhatsApp
ನಾಡಿನ ಪ್ರಮುಖ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಬ್ರಿಜೇಶ್ ಚೌಟ ಪ್ರಾರ್ಥನೆ. ಮೋದಿಯ ಜೊತೆ ದೇಶ ಸೇವೆಗಾಗಿ ತಾಯಿ ದೇಯಿ ಬೈದೇತಿ, ಕೋಟಿ ಚೆನ್ನಯ್ಯರ ಆಶೀರ್ವಾದ ಬೇಡಿದ ಯುವನಾಯಕ.

ಪುತ್ತೂರು: ತುಳುನಾಡಿನ ವೀರ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಬಾಳಿಬೆಳಗಿದ ಪುಣ್ಯ ಭೂಮಿ ಗೆಜ್ಜೆಗಿರಿಗೆ ಈ ರಾಷ್ಟ್ರದ ಸೇನೆಯ ನಿವೃತ್ತ ಸೇನಾಧಿಕಾರಿ, ದೇಶದ ಸೇವೆಗಾಗಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಸಂಜೆ ಭೇಟಿ ನೀಡಿ ಸರ್ವಶಕ್ತಿವರ್ಯರಿಗೆ ಪ್ರಾರ್ಥನೆ ಸಲ್ಲಿಸಿದರು.

ದೇಶದ ಸೇವೆಗಾಗಿ ಮೋದಿಯ ಜೊತೆ ನನಗೆ ಸೇವೆ ಸಲ್ಲಿಸಲು ಪ್ರಾರ್ಥನೆ ಸಲ್ಲಿಸಿದ್ದಾಗಿ ಈ ಸಂದರ್ಭದಲ್ಲಿ ಅವರು ಹೇಳಿಕೊಂಡಿದ್ದಾರೆ.

ಧರ್ಮಚಾವಡಿಯಲ್ಲಿ ತಾಯಿದೇಯಿಗೆ ಫಲಪುಷ್ಪ ಸಮರ್ಪಿಸಿ ಸಂಸತ್ತಿಗೆ ಜನಪ್ರತಿನಿಧಿಯಾಗಿ ಪ್ರವೇಶಿಸಿಸಲು ಜನ ಆಶಿರ್ವಾದ ಪಡೆಯುವ ಭಾಗ್ಯ ಕರುಣಿಸುವ ಶಕ್ತಿನೀಡಿ ಹರಸೆಂದು ಬೇಡಿಕೊಂಡರು.

ಈ ಸಂದರ್ಭದಲ್ಲಿ ನಿಕಟಪೂರ್ವ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಭಾರತೀಯ ಜನತಾ ಪಕ್ಷದ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಂಡಲ ಕಾರ್ಯದರ್ಶಿ ನಿತೀಶ್ ಶಾಂತಿವನ, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆರ್ ಸಿ ನಾರಾಯಣ್, ಸುನೀಲ್ ದುಡ್ಡು,ಚನಿಲ ತಿಮ್ಮಪ್ಪ ಶೆಟ್ಟಿ,ಸಜಾ ರಾಧಾಕೃಷ್ಣ ಆಳ್ವ, ಗೋಪಾಲಕೃಷ್ಣ ಹೇರಳೆ,ಪುರುಷೋತ್ತಮ ಮಂಗ್ಲಿಮನೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್, ಮತ್ತು ಪುತ್ತೂರು ಬಿಜೆಪಿ ಮಂಡಲ ಪ್ರಮುಖರು ಉಪಸ್ಥಿತರಿದ್ದರು ಕ್ಷೇತ್ರದ ವತಿಯಿಂದ ಶ್ರೀಧರ ಪೂಜಾರಿ, ಪ್ರಜ್ವಲ್ ಶಾಂತಿ ಪ್ರಾರ್ಥನೆಗೈದು. ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಹಾಗೂ ಸಿಬ್ಬಂದಿಗಳು ಗೌರವಾರ್ಪಣೆ ಸಲ್ಲಿಸಿದರು.

‘ಹಣದ ಆಸೆಗಾಗಿ ರೈತರ ಆತ್ಮಹತ್ಯೆ ಎಂದು ಕಾಂಗ್ರೆಸ್ ಸರಕಾರದ ಸಚಿವರ ಹೇಳಿಕೆ ದುರಂತಮಯ’: ಡಾ.ಭರತ್ ಶೆಟ್ಟಿ ವೈ

ಮಂಗಳೂರು: ರಾಜ್ಯ ಸರ್ಕಾರ ಕೊಡುವ ಪರಿಹಾರದ ಹಣದ ಆಸೆಗಾಗಿ ರೈತರ ಆತ್ಮಹತ್ಯೆಗಳು ಆಗುತ್ತಿವೆ ಎಂದು ರಾಜ್ಯದ ಸಚಿವ ಶಿವಾನಂದ ಪಾಟೀಲ್ ಹೇಳಿರುವುದು ದುರಂತ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಹೇಳಿದ್ದಾರೆ.

ಮಂಗಳೂರಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಬರಗಾಲದ ಸ್ಥಿತಿ ಇದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಜನರು ಗುಳೆ ಹೋಗುತ್ತಿದ್ದಾರೆ ರೈತರ ಬಗ್ಗೆ ಕಾಳಜಿ ತೋರದ ಸರಕಾರ ಬರ ಪರಿಹಾರ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಸರ್ಕಾರದಲ್ಲಿ ಪರಿಶಿಷ್ಟರಿಗೆ ಹಾಗೂ ತೀರಾ ಹಿಂದುಳಿದ ವರ್ಗಕ್ಕೆ ಮೀಸಲು ಇರಿಸಿದ 11,000 ಕೋಟಿ ಅನುದಾನವನ್ನು ಗ್ಯಾರಂಟಿ ನೀಡಲು ಬಳಸಿಕೊಂಡಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ವರ್ಗದ, ದಲಿತ ವರ್ಗದ ಬಗ್ಗೆ ಮೊಸಳೆ ಕಣ್ಣೀರು ಮಾತ್ರ ಸುರಿಸಿರುತ್ತಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಖಜಾನೆ ಖಾಲಿಯಾಗಿ ಅಭಿವೃದ್ಧಿ ಮಾಡಲು ಅನುದಾನ ಕೇಳಿದರೆ ಮಾತನಾಡಬೇಡಿ ಎನ್ನುತ್ತಾರೆ. ಈ ಸರ್ಕಾರ ಅಭಿವೃದ್ಧಿ ಶೂನ್ಯ ಸರಕಾರ ಎಂದು ಲೇವಾಡಿ ಮಾಡಿದರು.

ಬಿಜೆಪಿ ಸರ್ಕಾರ ಆರಂಭಿಸಿದ ಹೊಸ ಯೋಜನೆಗಳನ್ನು ತನ್ನದೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರುಗಳಿಗೆ ಅಭಿವೃದ್ಧಿಗಾಗಿ ಎಷ್ಟು ಹಣ ನೀಡಿದ್ದಾರೆ ಎಂದು ಭಯಂಗಪಡಿಸಲಿ ಎಂದು ಸವಾಲು ಹಾಕಿದರು. ಸರ್ಕಾರ ಗೃಹಜೋತಿ ಯೋಜನೆಯನ್ನು ಶರತ್ತು ಹಾಕಿ ಅನುಷ್ಠಾನಗೊಳಿಸಿದೆ ಉಚಿತ ವಿದ್ಯುತ್ ನೀಡಲು ಅರಸಪಡುತ್ತಿದೆ ವಿದ್ಯುತ್ ಕ್ಷಾಮ ತಲೆದೂರಿದು ಹದಗೆಡುವ ಪರಿಸ್ಥಿತಿ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು ಸರಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ವಸಂತ ಪೂಜಾರಿ ಸಂಜಯ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ