ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈಶ್ವರಪ್ಪನವರ ಪಕ್ಷೇತರ ಸ್ಪರ್ಧೆಯ ಸಮಸ್ಯೆಯೂ ಬೇಗ ಬಗೆಹರಿಸಲಿದೆ ; ಬಿವೈ ವಿಜಯೇಂದ್ರ

Twitter
Facebook
LinkedIn
WhatsApp
ಈಶ್ವರಪ್ಪನವರ ಪಕ್ಷೇತರ ಸ್ಪರ್ಧೆಯ ಸಮಸ್ಯೆಯೂ ಬೇಗ ಬಗೆಹರಿಸಲಿದೆ ; ಬಿವೈ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ಬಿಜೆಪಿಯಲ್ಲಿ ತಯಾರಿ ಜೋರಾಗಿದೆ. ಕಾರ್ಯತಂತ್ರಗಳನ್ನು ರೂಪಿಸಲಾಗುತ್ತಿದೆ. ರಾಜ್ಯದಲ್ಲಿದ್ದ ಸಣ್ಣಪುಟ್ಟ ಗೊಂದಲಗಳು ಬಗೆಹರಿಯುತ್ತಿವೆ. ಶಿವಮೊಗ್ಗವೂ ಸೇರಿ ಎಲ್ಲ ಸಮಸ್ಯೆಗಳೂ ಪರಿಹಾರವಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ವಿಶ್ವಾಸ ವ್ಯಕ್ತಪಡಿಸಿದರು.

ಈ ನೆಲ್ಲೂರು ಹಸು ತಳಿಯು ಚಿತ್ರದಲ್ಲಿರುವಂತೆ ಪ್ರಕಾಶಮಾನವಾದ ಬಿಳಿ ತುಪ್ಪಳವನ್ನು ಹೊಂದಿದ್ದು, ಭುಜದ ಮೇಲಿರುವ ವಿಶಿಷ್ಟವಾದ ಗೂನು ಆಕೃತಿಗೆ ಹೆಸರುವಾಸಿಯಾಗಿದೆ. ಇದು ಆಂಧ್ರ ಪ್ರದೇಶದಲ್ಲಿ ಜನ್ಮ ಪಡೆದಿರುವುದು ಎಂಬುದು ಗಮನಾರ್ಹ. ಆದರೆ ಅದೀಗ ಬ್ರೆಜಿಲ್‌ನ ಅತ್ಯಂತ ಪ್ರಮುಖ ತಳಿಗಳಲ್ಲಿ ಒಂದಾಗಿದೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಹೆಸರನ್ನೇ ಈ ಈ ಜಾನುವಾರಿಗೂ ಇಡಲಾಗಿದ್ದು, ವೈಜ್ಞಾನಿಕವಾಗಿ ಬಾಸ್ ಇಂಡಿಕಸ್ ಎಂದು ವರ್ಗೀಕರಿಸಲಾಗಿದೆ. ಭಾರತದ ಮತ್ತೊಂದು ಸದೃಢ ವಂಶಸ್ಥ ಜಾನುವಾರು ಅಂದರೆ ಅದು ಒಂಗೋಲ್.

ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು (Narendra Modi) ಪ್ರಧಾನಿ ಆಗುವುದು ಖಚಿತವಾಗಿರುವ ಕಾರಣ ಬಿಜೆಪಿಗೆ (BJP Karnataka) ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ರಾಜ್ಯದಲ್ಲಿ ಕೆಲವೊಂದು ಸಮಸ್ಯೆಗಳಿದ್ದು, ಅವು ಶೀಘ್ರವೇ ಬಗೆಹರಿಯಲಿವೆ ಎಂದು ಅಭಿಪ್ರಾಯಪಟ್ಟರು.

ನಮ್ಮ ಪಕ್ಷದಲ್ಲಿ ಕೇಂದ್ರದ ನಾಯಕರು ಬಲಿಷ್ಠರಾಗಿದ್ದಾರೆ. ಕೇವಲ ಬಿ.ವೈ. ವಿಜಯೇಂದ್ರ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ಮಾತು ಕೇಳಿ ‌ಅವರು ಯಾವುದೇ ತೀರ್ಮಾನವನ್ನು ಮಾಡುವುದಿಲ್ಲ. ಒಂದು ಬಲಿಷ್ಠ ನಾಯಕತ್ವ ನಮ್ಮ ಕೇಂದ್ರದಲ್ಲಿದೆ. ಬಲಿಷ್ಠ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿ ಎಲ್ಲ ನಾಯಕರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಫಲಿತಾಂಶ ಬಂದಾಗ ಸಕ್ರಿಯತೆ ಬಗ್ಗೆ ಗೊತ್ತಾಗುತ್ತದೆ

ಚುನಾವಣೆ ಫಲಿತಾಂಶ ಬಂದಾಗ ಯಾರೆಲ್ಲ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸಂಬಂಧ ಎಲ್ಲರೂ ಶ್ರಮ ವಹಿಸಬೇಕು ಎಂದು ಬಿ.ವೈ. ವಿಜಯೇಂದ್ರ ಕರೆ ನೀಡಿದರು.

ಮೋದಿ, ಬಿಜೆಪಿ ಪರ ಅಲೆ

ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಪರ ಅಲೆ, ಬಿಜೆಪಿ ಪರ ಅಲೆಯೇ ಇದಕ್ಕೆ ಕಾರಣ ಎಂದು ಬಿ.ವೈ. ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ