ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!

Twitter
Facebook
LinkedIn
WhatsApp
ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!

ಬೆಂಗಳೂರು: ಬಿಜೆಪಿ ಪಕ್ಷದ ವಿಧಾನ ಪರಿಷತ್​ ಸದಸ್ಯೆ ತೇಜಸ್ವಿನಿಗೌಡ ರಮೇಶ್‌ಗೌಡ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಸ್ಪೀಕರ್ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಹೊರಟ್ಟಿ ಅವರು, ಬಿಜೆಪಿಯ ತೇಜಸ್ವಿನಿಗೌಡ ರಮೇಶ್‌ಗೌಡ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ‌ ರಾಜೀನಾಮೆ ನೀಡುತ್ತಿದ್ದೇನೆ ಎಂದು‌ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ತೇಜಸ್ವಿನಿ ರಮೇಶ್ ಅವಧಿ‌ ಜೂನ್‌ವರೆಗೂ ಇತ್ತ, ಅವರೇ ಖುದ್ದು ಹಾಜರಾಗಿ ರಾಜೀನಾಮೆ ಕೊಟ್ಟ ಕಾರಣ ಸ್ವೀಕಾರ ಮಾಡಿದ್ದೇನೆ. ಯಾರೇ ಶಾಸಕರು ರಾಜೀನಾಮೆ ನೀಡಿದರೂ ನಮಗೆ ಮನವರಿಕೆ ಆದ ಮೇಲೆ ಸ್ವೀಕಾರ ಮಾಡೋದು, ಕೆಲವೊಮ್ಮೆ ಭಾವೋದ್ವೇಗಕ್ಕೆ ಒಳಗಾಗಿ, ಒತ್ತಡಗಳಿಗೆ ಒಳಗಾಗಿ ರಾಜೀನಾಮೆ ಕೊಡಬಹುದು. ಹೀಗಾಗಿ ಸ್ವಲ್ಪ ಸಮಯವಕಾಶ ನೀಡಿ ಆ ಬಳಿಕ ರಾಜೀನಾಮೆ ಸ್ವೀಕಾರ ಮಾಡ್ತೀವಿ ಎಂದು ಸ್ಪೀಕರ್ ತಿಳಿಸಿದ್ದಾರೆ.

ಮೈಸೂರು ಕೊಡಗು ಕ್ಷೇತ್ರದಿಂದ ಟಿಕೆಟ್ ಮಿಸ್ ಆಗಿದ್ದಕ್ಕೆ ಬಿಜೆಪಿಗೆ ಗುಡ್ ಬೈ ಹೇಳಲು ತೇಜಸ್ವಿನಿಗೌಡ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕಿಯೇ ತಮ್ಮ ಎಂಎಲ್​ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ರಾಜೀನಾಮೆ ನೀಡುವುದಾಗಿ ಐವರು ಶಾಸಕರು ಬೆದರಿಕೆ..!

ಕೋಲಾರ ಲೋಕಸಭಾ (Kolar Lok sabha Constituency) ಕ್ಷೇತ್ರದ ಕಾಂಗ್ರೆಸ್​ ಟಿಕೆಟ್ ಇನ್ನಷ್ಟು ಕಗ್ಗಂಟಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಂಧಾನ ಸಭೆ ನಡೆಸಿದರೂ, ನಾಯಕರ ನಡುವಿನ ಭಿನ್ನಮತ ಶಮನವಾಗಿಲ್ಲ. ಸಚಿವ ಕೆ.ಹೆಚ್​​.ಮುನಿಯಪ್ಪ (KH Muniyappa) ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್ ಬೆದರಿಕೆ ಹಾಕಿದ್ದಾರೆ. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆ.ಹೆಚ್​.ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್​ ನೀಡಿದರೇ ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಕಾಂಗ್ರೆಸ್​​​ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್​​ ರಾಜೀನಾಮೆ ನೀಡುತ್ತೇವೆ ಎಂದರು.

12 ಗಂಟೆಗೆ ಸುಮಾರಿಗೆ ಸಭಾಪತಿಗೆ ಕಚೇರಿಗೆ ಭೇಟಿ ನೀಡಿ, ರಾಜಿನಾಮೆ ಪತ್ರ ನೀಡುತ್ತೇವೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ಸಭಾಪತಿಗಳನ್ನು ಭೇಟಿ ಮಾಡಲಿದ್ದೇವೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ನಮ್ಮ ಬಣಕ್ಕೆ ಟಿಕೆಟ್ ನೀಡುವಂತೆ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ದು. ಹೈಕಮಾಂಡ್​ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧವಾಗಿದ್ದೇವೆ. ನಾನು, ರಮೇಶ್​​ಕುಮಾರ್ ಸೇರಿ ಒಟ್ಟಿಗೆ ಕೆಲಸ ಮಾಡುವುದಾಗಿ ಹೇಳಿದ್ದೇವೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ