ಗುರುವಾರ, ಮೇ 9, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?

Twitter
Facebook
LinkedIn
WhatsApp
ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?
ಚುನಾವಣೆಗಳಲ್ಲಿ (Election) ಅಭ್ಯರ್ಥಿಗಳ ಪರ ಚಲನಚಿತ್ರ ನಟರು ಪ್ರಚಾರ ಮಾಡುವುದು ರಾಜ್ಯಕ್ಕೆ ಹೊಸದೇನು ಅಲ್ಲ. ಈ ಹಿಂದಿನ ಅನೇಕ ಚುನಾವಣೆಗಳಲ್ಲಿ ಚಿತ್ರರಂಗದ ನಟ, ನಟಿಯರು ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದನು ನೋಡಬಹುದು. ನಟರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಜಾತಿ, ಭಾಷೆ ಲೆಕ್ಕಾಚಾರವಿರುತ್ತದೆ. ಇದೀಗ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ (Bengaluru South) ಪ್ರಚಾರಕ್ಕೆ ತೆಲಗು ಚಿತ್ರರಂಗದ ನಟನನ್ನು ಕರೆತರು ಬಿಜೆಪಿ ತಂತ್ರ ರೂಪಿಸಿದೆ.

ಹೌದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಪ್ತಿಯಲ್ಲಿ ಬರುವ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್​, ಹೆಚ್​ಎಸ್​ಆರ್​ ಲೇಔಟ್, ಜಯನಗರ, ಜೆಪಿ ನಗರ, ಬಸವನಗುಡಿ ಸೇರಿದಂತೆ ಕೆಲ ಭಾಗದಲ್ಲಿ ತೆಲುಗು ಭಾಷಿಕರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ತೆಲಗು ಚಿತ್ರರಂಗದ ನಟ, ಜನಸೇನಾ ಪಕ್ಷದ ನಾಯಕ ಪವನ್​ ಕಲ್ಯಾಣ ಅವರನ್ನು ಪ್ರಚಾರಕ್ಕೆ ಕರೆತರಲು ಬಿಜೆಪಿ ಯೋಚಿಸಿದೆ.

ಈ ವಿಚಾರವಾಗಿ ಗುರುವಾರ (ಮಾ.28) ರಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ ಗರುಡಾಚಾರ್ಯ ನಿವಾಸದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಸಭೆಯಲ್ಲಿ ವಿಪಕ್ಷ ನಾಯಕ ಆರ್​. ಅಶೋಕ್​, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮತ್ತು ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ, ಪ್ರಧಾನಿ ಮೋದಿ ಮತ್ತು ಅಮಿತ್​​ ಶಾ ರ್ಯಾಲಿ ಮತ್ತು ರೋಡ್​ ಶೋ ನಡೆಸಬೇಕು. ಪ್ರಧಾನಿ ಮೋದಿ, ಅಮಿತ್​​ ಶಾ, ಪವನ್ ಕಲ್ಯಾಣ್ ಮೂವರನ್ನು ಒಂದೆ ವೇದಿಕೆಯಲ್ಲಿ ಕರೆತರಬೇಕು. ಪವನ್​ ಕಲ್ಯಾಣ ಒಂದು ದಿನ ಬಿಜೆಪಿ ಪರವಾಗಿ ಬೆಂಗಳೂರು ದಕ್ಷಿಣದಲ್ಲಿ ಪ್ರಚಾರ ಮಾಡಲು ಅನುಮತಿ ನೀಡಬೇಕೆಂದು ರಾಜ್ಯ ಘಟಕಕ್ಕೆ ಬೆಂಗಳುರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಮನವಿ ಸಲ್ಲಿಸಿದೆ.

ಇನ್ನು ಪವನ್​ ಕಲ್ಯಾಣ ಆಂದ್ರ ಪ್ರದೇಶ ರಾಜಕೀಯದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಪವನ್​​ ಕಲ್ಯಾಣ ತಮ್ಮ ಬಿರುಸಿನ ಮಾತುಗಳ ಮೂಲಕ ಜನರನ್ನು ಸೆಳೆಯಬಲ್ಲರು. ಅಲ್ಲದೆ ಈ ಹಿಂದೆ ಪ್ರಧಾನಿ ಮೋದಿಯ ಸಮಾವೇಶದಲ್ಲಿ ಪವನ ಕಲ್ಯಾಣ ಕಾಣಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ಬಿಜೆಪಿಯ ಭದ್ರಕೋಟೆ ಬೆಂಗಳೂರು ದಕ್ಷಿಣ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಈ ಲೋಕಸಭಾ ಕ್ಷೇತ್ರವು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಎಂಟರಲ್ಲಿ ಮೂರು ಕ್ಷೇತ್ರಗಳು ಕಾಂಗ್ರೆಸ್​ ಪಾಲಾಗಿದ್ದರೇ, ಐದು ಬಿಜೆಪಿಯ ಪಾಲಾಗಿವೆ. ಇನ್ನು ಈ ಲೋಕಸಭಾ ಕ್ಷೇತ್ರದಲ್ಲಿ 1996 ರಿಂದ ಈಗವರೆಗು ಬಿಜೆಪಿ ನಾಯಕರೇ ಸಂಸದರಾಗಿ ಆಯ್ಕೆಯಾಗುತ್ತಿದ್ದಾರೆ. 1996 ರಿಂದ 2009ರ ವರೆಗು ದಿವಂಗತ ಅನಂತ ಕುಮಾರ್ ಸಂಸದರಾಗಿದ್ದರು. 2014 ರಿಂದ ಇಲ್ಲಿಯವರೆಗು ತೇಜಸ್ವಿ ಸೂರ್ಯ ಸಂಸದರಾಗಿದ್ದಾರೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಟಿಎಮ್​ ಲೇಔಟ್​ ಶಾಸಕ, ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ತಂದೆ ಸಚಿವರಾಗಿದ್ದರಿಂದ ಹೆಚ್ಚು ಪ್ರಭಾವ ಬೀರುವುದರಿಂದ ಬಿಜೆಪಿ ಈ ಪ್ಲಾನ್​ ಮಾಡಲು ಮುಂದಾಗಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ