ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ರಾ ನಟ ಸಂಜಯ್ ದತ್? ನಟ ಹೇಳಿದ್ದಿಷ್ಟು.!

Twitter
Facebook
LinkedIn
WhatsApp
ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ರಾ ನಟ ಸಂಜಯ್ ದತ್? ನಟ ಹೇಳಿದ್ದಿಷ್ಟು.!

ಲೋಕಸಭಾ ಚುನಾವಣೆ (Lok Sabha Elections) ಸಮೀಪಿಸಿದೆ. ಎಲ್ಲ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿವೆ. ಹಲವು ಕ್ಷೇತ್ರಗಳಲ್ಲಿ ಸಿನಿಮಾ ಸೆಲೆಬ್ರಿಟಿಗಳನ್ನು ಕಣಕ್ಕೆ ಇಳಿಸಲಾಗುತ್ತಿದೆ. ಕಂಗನಾ ರಣಾವತ್​, ಅರುಣ್​ ಗೋವಿಲ್​ ಮುಂತಾದ ಕಲಾವಿದರು ಈ ಬಾರಿ ಚುನಾವಣೆಯಲ್ಲಿ (Elections) ಸ್ಪರ್ಧಿಸುತ್ತಿದ್ದಾರೆ. ಬಾಲಿವುಡ್​ನ ಮತ್ತೊರ್ವ ಸ್ಟಾರ್ ನಟ ಸಂಜಯ್​ ದತ್​ (Sanjay Dutt) ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂಬ ಬಗ್ಗೆ ಕೆಲವು ಕಡೆಗಳಲ್ಲಿ ಗಾಳಿಸುದ್ದಿ ಹಬ್ಬಿದೆ. ಅದಕ್ಕೆ ಸ್ವತಃ ಸಂಜಯ್​ ದತ್​ ಅವರು ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದ್ದಾರೆ.

‘ನಾನು ರಾಜಕೀಯಕ್ಕೆ ಸೇರುತ್ತೇನೆ ಎಂಬ ಎಲ್ಲಾ ವದಂತಿಗಳಿಗೆ ತೆರೆ ಎಳೆಯಲು ನಾನು ಬಯಸುತ್ತೇನೆ. ನಾನು ಯಾವುದೇ ಪಕ್ಷ ಸೇರುವುದಿಲ್ಲ ಅಥವಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ನಿರ್ಧರಿಸಿದರೆ ಅದನ್ನು ಘೋಷಿಸುವ ಮೊದಲ ವ್ಯಕ್ತಿ ನಾನೇ. ಸದ್ಯಕ್ಕೆ ನನ್ನ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳನ್ನು ನಂಬುವುದರಿಂದ ದೂರವಿರಿ’ ಎಂದು ಸಂಜಯ್​ ದತ್​ ಅವರು ‘ಎಕ್ಸ್​’ (ಟ್ವಿಟರ್​) ಖಾತೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ.

 

 

ಈ ಮೊದಲು ಕೂಡ ಸಂಜಯ್​ ದತ್​ ಅವರ ಬಗ್ಗೆ ಈ ರೀತಿಯ ಗಾಳಿ ಸುದ್ದಿಗಳು ಹಬ್ಬಿದ್ದವು. 2019ರಲ್ಲಿ ‘ರಾಷ್ಟ್ರೀಯ ಸಮಾಜ ಪಕ್ಷ’ ಸೇರುವಂತೆ ಅವರಿಗೆ ಆಫರ್​ ನೀಡಲಾಗಿತ್ತು ಎಂಬ ಮಾಹಿತಿ ಕೇಳಿಬಂದಿತ್ತು. ಆದರೆ ಅದು ನಿಜವಾಗಲಿಲ್ಲ. ಈಗ ಲೋಕಸಭಾ ಚುನಾವಣೆಯ ಕಾವು ಜೋರಾಗಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಜಯ್​ ದತ್​ ಅವರ ಬಗ್ಗೆ ಗಾಸಿಪ್​ ಹರಡಿದೆ. ಆದರೆ ಅವರೇ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಅಂಕೆ-ಕಂತೆಗಳಿಗೆ ಪೂರ್ಣ ವಿರಾಮ ಹಾಕಿದ್ದಾರೆ.

ಸಂಜಯ್​ ದತ್​ ಅವರಿಗೆ ದೇಶಾದ್ಯಂತ ಖ್ಯಾತಿ ಇದೆ. ಮೊದಲು ಬಾಲಿವುಡ್​ನಲ್ಲಿ ಮಾತ್ರ ಫೇಮಸ್​ ಆಗಿದ್ದ ಅವರು ಈಗ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಸಂಜಯ್​ ದತ್​ ಮಾಡಿದ ಅಧೀರ ಎಂಬ ಪಾತ್ರ ಎಲ್ಲರ ಗಮನ ಸೆಳೆಯಿತು. ಬಳಿಕ ಅವರಿಗೆ ದಕ್ಷಿಣ ಭಾರತದಿಂದ ಹಲವು ಅವಕಾಶಗಳು ಸಿಗಲಾರಂಭಿಸಿದವು. ಸದ್ಯಕ್ಕೆ ಅವರು ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಜಕೀಯದ ಬಗ್ಗೆ ಗಮನ ಹರಿಸಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist