ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

23 ಶ್ವಾನ ತಳಿಗಳ ನಿಷೇಧ ಹೇರಿದ್ದ ಕೇಂದ್ರ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ..!

Twitter
Facebook
LinkedIn
WhatsApp
23 ಶ್ವಾನ ತಳಿಗಳ ನಿಷೇಧ ಹೇರಿದ್ದ ಕೇಂದ್ರ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ..!

ಬೆಂಗಳೂರು: ಮನುಷ್ಯರ ಮೇಲೆ ದಾಳಿ ಮಾಡುವಷ್ಟು ಅಪಾಯಕಾರಿಯಾಗಿರುವ 23 ತಳಿಗಳ ನಾಯಿಗಳ (Dog Breeds) ಸಾಕಣೆ, ಮಾರಾಟಕ್ಕೆ ನಿಷೇಧ ಹೇರಿದ್ದ ಕೇಂದ್ರ ಸರ್ಕಾರಕ್ಕೆ (Central Government) ಭಾರಿ ಹಿನ್ನಡೆಯಾಗಿದೆ. 23 ಅಪಾಯಕಾರಿ ಶ್ವಾನ ತಳಿಗಳ ನಿಷೇಧ ಹೇರಿದ್ದ ಕೇಂದ್ರ ಸರ್ಕಾರದ ಆದೇಶಕ್ಕೆ ಈಗ ಕರ್ನಾಟಕ ಹೈಕೋರ್ಟ್‌ (Karnataka High Court) ತಡೆಯಾಜ್ಞೆ ನೀಡಿದೆ. ಕೇಂದ್ರದ ಆದೇಶವನ್ನು ರದ್ದುಗೊಳಿಸಿ ರಾಜ್ಯ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿ ಶ್ವಾನಗಳ ಟ್ರೇನರ್‌ ಆಗಿರುವ ಕಿಂಗ್‌ ಸೋಲೊಮೊನ್‌ ಡೇವಿಡ್‌ ಹಾಗೂ ಇನ್ನೊಬ್ಬರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಕೇಂದ್ರ ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು. ಅದರಲ್ಲೂ ವಿಶೇಷವಾಗಿ, ಕೇಂದ್ರ ಸರ್ಕಾರದ ಆದೇಶವು ಕರ್ನಾಟಕದಲ್ಲಿ ಜಾರಿಯಾಗುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿತು. “ಈ ತಳಿಯ ಶ್ವಾನಗಳ ಸಾಕಣೆ ಮಾಡುವವರು, ತಜ್ಞರ ಜತೆ ಸಮಾಲೋಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಬೇಕಿತ್ತು” ಎಂದು ಕೂಡ ತಿಳಿಸಿತು.

 

ಕೇಂದ್ರದ ಆದೇಶ ಏನಾಗಿತ್ತು?

ಕೇಂದ್ರ ಸರ್ಕಾರವು 23 ತಳಿಗಳ ಶ್ವಾನಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದು, ಅವುಗಳನ್ನು ಸಾಕುವುದು, ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಪಶು ಸಂಗೋಪನೆ ಇಲಾಖೆಯ ತಜ್ಞರ ಸಮಿತಿಯ ವರದಿ ಮತ್ತು ಪ್ರಾಣಿ ದಯಾ ಸಂಘ ‘ಪೆಟಾ’ದ ಮನವಿ ಮೇರೆಗೆ ಕೇಂದ್ರ ಸರ್ಕಾರವು ಮಾರ್ಚ್‌ 13ರಂದು ಆದೇಶ ಹೊರಡಿಸಿತ್ತು. ಮನುಷ್ಯರ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡುವ, ಮನುಷ್ಯರಿಗೆ ತುಂಬ ಅಪಾಯಕಾರಿಯಾಗಿರುವ ಕಾರಣದಿಂದಾಗಿ ಈ ತಳಿಗಳ ಶ್ವಾನಗಳನ್ನು ನಿಷೇಧಿಸಿತ್ತು.

ಯಾವ ತಳಿಗಳಿಗೆ ನಿರ್ಬಂಧ ವಿಧಿಸಿತ್ತು?

ಪಿಟ್‌ಬುಲ್‌ ಟೆರಿಯರ್‌, ಟೋಸಾ ಇನು, ಅಮೆರಿಕನ್‌ ಸ್ಟೆಫರ್ಡ್‌ಶೈರ್‌ ಟೆರಿಯರ್‌, ಫಿಲಾ ಬ್ರೇಸಿಲೈರೋ, ಡೋಗೊ ಅರ್ಜೆಂಟಿನೋ, ಅಮೆರಿಕನ್‌ ಬುಲ್‌ಡಾಗ್‌, ಬೋರ್ಬೊಯೆಲ್‌, ಕಂಗಲ್‌, ಸೆಂಟ್ರಲ್‌ ಏಷ್ಯನ್‌ ಶೀಪ್‌ಡಾಗ್‌, ಕೌಕಾಸಿಯನ್‌ ಶೆಫರ್ಡ್‌ ಡಾಗ್‌, ಸೌತ್‌ ರಷ್ಯನ್‌ ಶೆಫರ್ಡ್‌ ಡಾಗ್‌, ಟಾರ್ನ್‌ಜಾಕ್‌, ಜಪಾನೀಸ್‌ ಟೋಸಾ, ಮಾಸ್ಟಿಫ್‌, ವೂಲ್ಫ್‌ ಡಾಗ್ಸ್‌, ಬ್ಯಾನ್‌ಡಾಗ್‌ ಸೇರಿ 23 ತಳಿಗಳ ಶ್ವಾನಗಳ ಸಾಕಣೆ, ಮಾರಾಟವನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು. ಈ ಕುರಿತು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಹೊರಡಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist