ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್​ ಮೈಂಡ್ ಎನ್​ಐಎ ವಶಕ್ಕೆ..!

Twitter
Facebook
LinkedIn
WhatsApp
ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್​ ಮೈಂಡ್ ಎನ್​ಐಎ ವಶಕ್ಕೆ..!

ಬೆಂಗಳೂರು, ಏಪ್ರಿಲ್ 12: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast case) ಪ್ರಕರಣದ ಬಾಂಬರ್ ಹಾಗೂ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ. ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಖಚಿತ ಮಾಹಿತಿ ಮತ್ತು ಗುಪ್ತಚರ ಇಲಾಖೆಗೆ ದೊರೆತ ಸುಳಿವಿನ ಆಧಾರದಲ್ಲಿ ಎನ್ಐಎ ತಂಡವು ಹಲವಾರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಉಗ್ರರು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಎನ್​ಐಎ ಅಧಿಕಾರಿಗಳು ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ.

ಬಾಂಬರ್​​ನನ್ನು ಪತ್ತೆಹಚ್ಚಿದ್ದು ಹೇಗೆ?

ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್‌ ಪತ್ತೆಗೆ ಆತ ಧರಿಸಿದ್ದ ಕ್ಯಾಪ್‌ನ ಸಹಾಯದಿಂದ ಕಾರ್ಯಾಚಣೆ ನಡೆಸಲಾಗಿತ್ತು. ಮತೀನ್ ತಾಹಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮುಸ್ಸಾವಿರ್ ಹುಸೇನ್ ಶಾಜಿಬ್​ನದ್ದೇ ಕೃತ್ಯ ಎಂಬುದು ದೃಢಪಟ್ಟಿತ್ತು. ನಂತರ ಆತನ ಪತ್ತೆಗೆ ಬಲೆಬೀಸಲಾಗಿತ್ತು. ಶಂಕಿತ ಭಯೋತ್ಪಾದಕ ಕರ್ನಾಟಕ ಮೂಲದವನಾಗಿದ್ದು, ಮಲೆನಾಡು ಪ್ರದೇಶದಲ್ಲಿ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಇದೆ.

ಸದ್ಯ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ವಿಶೇಷ ನ್ಯಾಯಾಲಯಕ್ಕೆ ಎನ್​ಐಎ ಹಾಜರುಪಡಿಸಲಿದೆ. ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಲಿದೆ.

 

ಜೈಲಿನಲ್ಲಿದ್ದವರ ವಿಚಾರಣೆಯೂ ನೆರವಿಗೆ ಬಂತು

ಈಗಾಗಲೇ ಭಯೋತ್ಪಾದನೆ ಚಟುವಟಿಕೆಗಳ ಶಂಕೆಯ ಮೇಲೆ ಜೈಲಿನಲ್ಲಿರುವ ಉಗ್ರಗಾಮಿಗಳನ್ನು ವಿಚಾರಣೆಗೆ ಒಳಪಡಿಸಿದ್ದೂ ಸಹ ಬಾಂಬರ್​​ನ ಪತ್ತೆಗೆ ನೆರವಾಯಿತು. ಈ ವೇಳೆ, ಜೈಲಿನಲ್ಲಿದ್ದ ಶಂಕಿತ ಉಗ್ರ ಶಾರಿಕ್, ಮತೀನ್ ಮತ್ತು ಈಗ ವಶಕ್ಕೆ ಪಡೆಯಲಾಗಿರುವ ಮುಸ್ಸಾವಿರ್ ಹುಸೇನ್ ನಡುವೆ ಸಂಪರ್ಕ ಇರುವುದೂ ಬಹಿರಂಗಗೊಂಡಿತ್ತು. ಕಳೆದ 3-4 ವರ್ಷಗಳಿಂದ ಅಧಿಕಾರಿಗಳಿಂದ ತಪ್ಪಿಸಿಕೊಳ್ಳುತ್ತಿದ್ದರೂ, ಶಂಕಿತನ ಗುರುತು, ವಿಳಾಸ ಮತ್ತು ಇತಿಹಾಸಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಕಲೆಹಾಕುವಲ್ಲಿ ಎನ್​ಐಎ ಅಧಿಕಾರಿಗಳು ಯಶಸ್ವಿಯಾಗಿದ್ದರು.

ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟದಲ್ಲಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬಾಂಬ್ ಇಟ್ಟಿದ್ದ ವ್ಯಕ್ತಿಯ ಪತ್ತೆಗೆ ನಂತರ ಶೋಧ ಕಾರ್ಯ ತೀವ್ರಗೊಳಿಸಲಾಗಿತ್ತು. ಬಳಿಕ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist