ಶುಕ್ರವಾರ, ಜೂನ್ 28, 2024
ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ-T20 World Cup: ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಫೈನಲ್​ಗೇರಿದ ಭಾರತ.-ಬೆಳ್ತಂಗಡಿ: ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು; ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ 7 ಮಂದಿ ದುರ್ಮರಣ.!-ಕರಾವಳಿಯಾದ್ಯಂತ ಭಾರಿ ಮಳೆ ಹಿನ್ನೆಲೆ ನಾಳೆ ಜೂನ್ 28 ಶುಕ್ರವಾರದಂದು ಶಾಲಾ ಕಾಲೇಜಿಗೆ ರಜೆ ಘೋಷಣೆ..!-ಸಿದ್ದರಾಮಯ್ಯರವರ ಎದುರೆ CM ಸ್ಥಾನವನ್ನು ಡಿಕೆಶಿ ಗೆ ಬಿಟ್ಟುಬಿಡುವಂತೆ ಸ್ವಾಮೀಜಿ ಹೇಳಿಕೆ!-ಮಡಿಕೇರಿ: ಬೆಳಗ್ಗೆ ಕರ್ತವ್ಯಕ್ಕೆ ಹೊರಡುತ್ತಿರುವಾಗ ಹೃದಯಘಾತ; ಯುವತಿ ಸಾವು..!-ಮಂಗಳೂರು: ರಿಕ್ಷಾ ತೊಳೆಯುತ್ತಿರುವ ವೇಳೆ ವಿದ್ಯುತ್ ತಂತಿ ಬಿದ್ದು ಇಬ್ಬರು ರಿಕ್ಷಾ ಚಾಲಕರು ಮೃತ್ಯು..!-Rain Alert: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್; 3 ದಿನ ಭಾರಿ ಮಳೆಯ ಮುನ್ಸೂಚನೆ.!-T20 ವಿಶ್ವಕಪ್: ಫೈನಲ್ ಗೆ ಎಂಟ್ರಿಕೊಟ್ಟು ಇತಿಹಾಸ ಸೃಷ್ಟಿಸಿದ ದಕ್ಷಿಣ ಆಫ್ರಿಕಾ-L K Advani : ಏಮ್ಸ್ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ಲಾಲ್​​ಕೃಷ್ಣ ಅಡ್ವಾಣಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

4 ಜನ ಬೆಸ್ಕಾಂ ಸಿಬ್ಬಂದಿಗಳು ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ; ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು..!

Twitter
Facebook
LinkedIn
WhatsApp
4 ಜನ ಬೆಸ್ಕಾಂ ಸಿಬ್ಬಂದಿಗಳು ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ; ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು..!

ಚಿಕ್ಕಬಳ್ಳಾಪುರ, ಜೂ.07: ಭೀಕರ ಅಪಘಾತದಲ್ಲಿ ಕರ್ನಾಟಕ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ನ ಇಬ್ಬರು ಸಿಬ್ಬಂದಿ ಮತ್ತು ಬೆಸ್ಕಾಂನ (BESCOM) ಓರ್ವ ಲೈನ್​ ಮ್ಯಾನ್ ಸೇರಿ ಮೂವರು​ ಮೃತಪಟ್ಟಿರುವ ಘಟನೆ ಗೌರಿಬಿದನೂರು (Gauribidanur) ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭವಿಸಿದೆ. ಕೆಪಿಟಿಸಿಎಲ್ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೇರೆ ಗ್ರಾಮದ ಬಳಿ ಇರುವ ಬೆಸ್ಕಾಂ ಸೇಕ್ಷನ್ ಕಚೇರಿಯಲ್ಲಿ ನಾಲ್ವರು ಲೈನ್ ಮ್ಯಾನ್​ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ನಿನ್ನೆ(ಜೂ.06) ರಾತ್ರಿ ಕರ್ತವ್ಯಕ್ಕೆ ಹೋಗಿದ್ದಾರೆ. ಮದ್ಯೆರಾತ್ರಿ ವಿದ್ಯುತ್ ರಿಪೇರಿ ಎಂದು ನಗರಗೇರೆಯಿಂದ ವಾಟದಹೊಸಹಳ್ಳಿ ಗ್ರಾಮಕ್ಕೆ ಹೋಗಿ ವಾಪಸ್ ನಗರಗೇರೆಗೆ ವೇಣುಗೋಪಾಲ್ ಕಾರಿನಲ್ಲಿ ಬರುತ್ತಿದ್ದಾಗ ಪ್ರಯಾಣಿಸುತ್ತಿದ್ದ ಬ್ರೀಜಾ ಕಾರು ನಿಯಂತ್ರಣ ತಪ್ಪಿ, ನಾಲ್ಕು ಜನರಲ್ಲಿ ಶ್ರೀಧರ್, ⁠ವೇಣುಗೋಪಾಲ್, ⁠ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ⁠ಶಿವಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು

ಇನ್ನುಈ ಕಾರು ಸಿಬ್ಬಂದಿ ವೇಣುಗೋಪಾಲ್​ಗೆ ಸೇರಿದ್ದು, ಆತನೇ ಕಾರನ್ನು ಚಾಲನೆ ಮಾಡುತ್ತಿದ್ದರು. ರಸ್ತೆಯಲ್ಲಿ ತಿರುವು ಇದ್ದರೂ ಅತಿವೇಗವಾಗಿ ಚಲಾಯಿಸಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿ ಮೃತರಲ್ಲೊಬ್ಬರಾದ ಶ್ರೀಧರ್,  ಎದರುಗಡೆ ಇದ್ದ ಮರದಲ್ಲಿ ಹಾರಿ ಹೋಗಿ ರಾತ್ರಿಯಿಡಿ ನೇತಾಡಿ ಕೊನೆಗೆ ಮೃತಪಟ್ಟಿದ್ದಾನೆ. ಬೆಳಿಗ್ಗೆ ದಾರಿಹೋಕರು ಗಮನಿಸಿ ಗೌರಿಬಿದನೂರು ಗ್ರಾಮಾಂತರ ಠಾನೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಕಾರಿನಲ್ಲಿದ್ದ ಶಿವಕುಮಾರ್ ನನ್ನು ಆಸ್ಪತ್ರೆಗ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ನಾಲ್ಕು ಜನ ಬೆಸ್ಕಾಂ ಸಿಬ್ಬಂಧಿಗಳು ರಾತ್ರಿ ಪಾಳಯದಲ್ಲಿ ಕರ್ತವ್ಯದಲ್ಲಿ ಇದ್ದರೂ ಪಾನಮತ್ತರಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮದ್ಯದ ಅಮಲಿನಲ್ಲಿ ಕಾರು ಅತಿವೇಗವಾಗಿ ಚಲಾವಣೆ ಮಾಡಿದ ಕಾರಣ ನಿಯಂತ್ರಣ ತಪ್ಪಿ ಅಪಘಾತವಾಗಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಇದ್ರಿಂದ ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಎ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ