ಶುಕ್ರವಾರ, ಜೂನ್ 28, 2024
ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!-ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್; ಕಾಂಗ್ರೆಸ್ ಗಂಭೀರ ಆರೋಪ-ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ-T20 World Cup: ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಫೈನಲ್​ಗೇರಿದ ಭಾರತ.-ಬೆಳ್ತಂಗಡಿ: ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು; ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ 7 ಮಂದಿ ದುರ್ಮರಣ.!-ಕರಾವಳಿಯಾದ್ಯಂತ ಭಾರಿ ಮಳೆ ಹಿನ್ನೆಲೆ ನಾಳೆ ಜೂನ್ 28 ಶುಕ್ರವಾರದಂದು ಶಾಲಾ ಕಾಲೇಜಿಗೆ ರಜೆ ಘೋಷಣೆ..!-ಸಿದ್ದರಾಮಯ್ಯರವರ ಎದುರೆ CM ಸ್ಥಾನವನ್ನು ಡಿಕೆಶಿ ಗೆ ಬಿಟ್ಟುಬಿಡುವಂತೆ ಸ್ವಾಮೀಜಿ ಹೇಳಿಕೆ!-ಮಡಿಕೇರಿ: ಬೆಳಗ್ಗೆ ಕರ್ತವ್ಯಕ್ಕೆ ಹೊರಡುತ್ತಿರುವಾಗ ಹೃದಯಘಾತ; ಯುವತಿ ಸಾವು..!-ಮಂಗಳೂರು: ರಿಕ್ಷಾ ತೊಳೆಯುತ್ತಿರುವ ವೇಳೆ ವಿದ್ಯುತ್ ತಂತಿ ಬಿದ್ದು ಇಬ್ಬರು ರಿಕ್ಷಾ ಚಾಲಕರು ಮೃತ್ಯು..!-Rain Alert: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್; 3 ದಿನ ಭಾರಿ ಮಳೆಯ ಮುನ್ಸೂಚನೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ

Twitter
Facebook
LinkedIn
WhatsApp
ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಮಂಗಳೂರು: ಉಳ್ಳಾಲದ ಕಡಲ ತೀರದಲ್ಲಿ (Ullala beach) ಅಲೆಗಳ ಅಬ್ಬರಕ್ಕೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಸಮುದ್ರದ ಪಾಲಾಗಿದ್ದು, ಮೂವರು ಮಹಿಳೆಯರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ

ಮೃತ ಮಹಿಳೆಯನ್ನು ಪರಿಮೀ ರತ್ನ ಕುಮಾರಿ (57) ಎಂದು ಗುರುತಿಸಲಾಗಿದೆ. ಆಂದ್ರಪ್ರದೇಶದ Andhra Pradesh) ಸಿರಿಲಿಂಗಪಲ್ಲಿ ಮೂಲದ ನಾಲ್ವರು ಮಹಿಳೆಯರು ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದರು. ನೀರಿನಲ್ಲಿ ಆಟ ಆಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಮೂವರು ಮಹಿಳೆಯರನ್ನು ಎಳೆದೊಯ್ದಿದೆ. ಈ ವೇಳೆ ರತ್ನ ಕುಮಾರಿ ಸಾವಿಗೀಡಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ

ಪರಿಮೀ ರತ್ನ ಕುಮಾರಿಯವರನ್ನು ಸಹ ಸ್ಥಳೀಯರು ತಕ್ಷಣ ದಡಕ್ಕೆ ತಂದಿದ್ದು, ಈ ವೇಳೆ ಮಹಿಳೆ ಪ್ರಜ್ಞೆತಪ್ಪಿದ ಸ್ಥಿತಿಯಲ್ಲಿರುವುದನ್ನು ಕಂಡು, ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ಮಹಿಳೆ ಸಾವಿಗೀಡಾಗಿದ್ದಾಳೆ ಎಂದು ತಿಳಿದು ಬಂದಿದೆ

ಹೈದರಾಬಾದ್‍ನಿಂದ 5 ಮಂದಿ ಮಹಿಳೆಯರ ತಂಡ ಜೂ.ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಬಳಿಕ ಕಾರಿನ ಮೂಲಕ ಜೂ.7 ಕ್ಕೆ ಕೊಡಗಿಗೆ ತೆರಳಿ, ಬಳಿಕ ಜೂ.9ಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ತೆರಳಿ ಅಲ್ಲಿಂದ ಉಳ್ಳಾಲಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ