ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಯತ್ನಾಳ್ ಕಾರಣ: ರೇಣುಕಾಚಾರ್ಯ ವಾಗ್ದಾಳಿ

Twitter
Facebook
LinkedIn
WhatsApp
mp renukacharya ರೇಣುಕಾಚಾರ್ಯ

ದಾವಣಗೆರೆ: ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಯಡಿಯೂರಪ್ಪ ಮತ್ತು ಅವರ ಪುತ್ರ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಣವೆಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಇದಕ್ಕೆ ಬಿಎಸ್​ವೈ ಬಣದ ಎಂಪಿ ರೇಣುಕಾಚಾರ್ಯ ಅವರು ಯತ್ನಾಳ್​ಗೆ ತಿರುಗೇಟು ನೀಡಿದ್ದಾರೆ. ದಾವಣಗೆರೆಯಲ್ಲಿಂದು ಮಾತನಾಡಿದ ರೇಣುಕಾಚಾರ್ಯ, ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ ಎಂದು ತಿರುಗೇಟು ನೀಡಿದ್ದಾರೆ.

ದಾವಣಗೆರೆಯಲ್ಲಿ (Davanagere) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿನ ಬೆಳಗಾದರೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸುತ್ತಾರೆ. ಬಸನಗೌಡ ಯತ್ನಾಳ್ ರಾಜ್ಯದಲ್ಲಿ ಪಕ್ಷದ ಹಿನ್ನಡೆಗೆ ನೇರ ಕಾರಣ. ರಾಜ್ಯದ ಜನ ಬಿವೈ ವಿಜಯೇಂದ್ರ ಅವರ ನಾಯಕತ್ವ ಒಪ್ಪಿದ್ದಾರೆ. ಇದೇ ಕಾರಣ ಲೋಕ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಗಾಳಿ ಇದ್ದರೂ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆದ್ದಿದೆ ಎಂದರು

ವಕ್ಫ್ ವಿರುದ್ಧ ಹೋರಾಟಕ್ಕೆ ನೇಮಕವಾದ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ವಿಜಯೇಂದ್ರ ಈ ಮೂರು ತಂಡಗಳು ಮಾತ್ರ ಅಧಿಕೃತ. ಯತ್ನಾಳ್ ತಂಡಕ್ಕೆ ಯಾರು ಬೆಲೆ ಕೊಡಬೇಡಿ. ಯಾವುದೇ ಕಾರಣಕ್ಕೂ ವಿಜಯೇಂದ್ರ ಅಧ್ಯಕ್ಷ ಸ್ಥಾನ ಬದಲಾಗಲ್ಲ. ಬರುವ ವಿಧಾನಸಭೆ ಚುನಾವಣೆ ವಿಜಯೇಂದ್ರ ನೇತ್ರತ್ವದಲ್ಲಿಯೇ ಎದುರಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ಕಿಡಿಕಾರಿದರು.

ಹನುಮಂತ ಸೋಲಿನಿಂದ ಜನಾರ್ದನ ರೆಡ್ಡಿಗೆ ಭಾರೀ ಹಿನ್ನಡೆ:

ಬಳ್ಳಾರಿ: ಸಂಡೂರು ಉಪಚುನಾವಣೆಯಲ್ಲಿ ಗೆದ್ದು ಬಳ್ಳಾರಿ ಜಿಲ್ಲಾ ರಾಜಕೀಯಕ್ಕೆ ಮರಳಿದ್ದನ್ನು ಅದ್ಧೂರಿಯಾಗಿ ಆಚರಿಸಲು ಬಯಸಿದ್ದ ಗಂಗಾವತಿ ಶಾಸಕ ಹಾಗೂ ಬಿಜೆಪಿ ಮುಖಂಡ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸೋಲಿನಿಂದ ಭಾರೀ ಮುಖಭಂಗವಾಗಿದೆ.

ಉಪಚುನಾವಣೆಯಲ್ಲಿ ಚುನಾಯಿತ ಕಾಂಗ್ರೆಸ್ ಶಾಸಕ ಇ ಅನ್ನಪೂರ್ಣ ತುಕಾರಾಂ ಅವರಿಗೆ ಸಮಬಲದ ಪೈಪೋಟಿ ನೀಡಿದ ಸಂತಸದಲ್ಲಿ ಬಿಜೆಪಿ ಇದ್ದರೂ, ಫಲಿತಾಂಶ ಜನಾರ್ಧನ ರೆಡ್ಡಿಯವರಿಗೆ ತೀವ್ರ ಬೇಸರವನ್ನು ತರಿಸಿದೆ.

ಸಂಡೂರಿನ ಚುನಾವಣಾ ಕದನದಲ್ಲಿ ಹೊಸ ರಾಜಕೀಯ ಇತಿಹಾಸ ಸೃಷ್ಟಿಸಲು ಇರುವ ಎಲ್ಲ ಸಂಪನ್ಮೂಲಗಳನ್ನು ಜನಾರ್ದನ ರೆಡ್ಡಿ ಬಳಸಿದ್ದರು. ಶನಿವಾರ ಸಂಡೂರು ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 93,616 ಮತಗಳನ್ನು ಪಡೆದು ಜಯಗಳಿಸಿದ್ದು, ಎದುರಾಳಿ ಅಭ್ಯರ್ಥಿ ಬಂಗಾರು ಹನುಮಂತ 83,967 ಅವರು ಮತಗಳನ್ನು ಪಡೆದು ತೀವ್ರ ಪೈಪೋಟಿ ನೀಡಿದ್ದಾರೆ.

9,649 ಮತಗಳ ಅಂತರದಿಂದ ಅನ್ನಪೂರ್ಣ ಅವರು ಗೆಲುವು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಮತಗಳ ಹೆಚ್ಚಳದಿಂದ ಬಿಜೆಪಿ ನಾಯಕರು ಸಂತಸಗೊಂಡಿದ್ದಾರೆ.

ಚುನಾವಣೆಗೂ ಮುನ್ನ ಹೇಳಿಕೆ ನೀಡಿದ್ದ ಜನಾರ್ದನ ರೆಡ್ಡಿ ಅವರು ಸಂಡೂರು ಉಪಚುನಾವಣೆಯಲ್ಲಿ ಗೆದ್ದು, ಈ ಗೆಲುವನ್ನು ಪ್ರಧಾನಿ ಮೋದಿ ಅವರಿಗೆ ಉಡುಗೊರೆಯಾಗಿ ನೀಡುತ್ತೇನೆಂದು ಹೇಳಿದ್ದರು. ಆದರೆ, ಸಂಡೂರಿನ ಮತದಾರರು ಇದಕ್ಕೆ ಅವಕಾಶ ನೀಡಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist