ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ರಾಜೇಶ್ ನಾಪತ್ತೆ.

Twitter
Facebook
LinkedIn
WhatsApp
ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ರಾಜೇಶ್ ನಾಪತ್ತೆ.

ಸುಳ್ಯ: ತಾಲೂಕಿನ ‌ಬೆಳ್ಳಾರೆಯ ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ,ಉದ್ಯಮಿ ಹಾಗೂ ಕೃಷಿಕ ರಾಜೇಶ್ ಗುಂಡಿಗದ್ದೆಯವರು ಸೆ.4 ರಂದು ಮನೆಯಿಂದ ಕಾಣೆಯಾಗಿದ್ದು ಈ ಬಗ್ಗೆ ಸೆ.5 ರಂದು ಬೆಳ್ಳಾರೆ ಠಾಣೆಯಲ್ಲಿ ಅವರ ಪತ್ನಿ ಪೊಲೀಸು ದೂರು ನೀಡಿದ ಘಟನೆ ನಡೆದಿದೆ.
ರಾಜೇಶ್ ಗುಂಡಿಗದ್ದೆ (47) ಎಂಬವರು ಸೆ. 4 ರಂದು ಬೆಳಿಗ್ಗೆ ಮನೆಯಿಂದ ತಮ್ಮ ಇಕೋ ಸ್ಪೋರ್ಟ್ಸ್ ಕಾರು ( ಕೆಎ 21 ಪಿ 6758)ನಲ್ಲಿ ಸುಳ್ಯ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ಬಾರದೆ, ಫೋನ್ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿರುವುದಾಗಿ ಅವರ ಪತ್ನಿ ವಿನಯಶ್ರೀಯವರು ಬೆಳ್ಳಾರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ರಾಜೇಶ್ ಗುಂಡಿಗದ್ದೆಯವರು ಸುಳ್ಯಕ್ಕೆ ಬಂದು ನಂತರ ಕಲ್ಲುಗುಂಡಿ ಪೇಟೆಯಾಗಿ ಸಂಪಾಜೆ ಕಡೆಗೆ ಪ್ರಯಾಣಿಸಿರುವ ದೃಶ್ಯ ಸಿ.ಸಿ. ಟೀವಿಯಲ್ಲಿ ಸೆರೆಯಾಗಿರುವುದಾಗಿ ಮತ್ತು ಬಂದಡ್ಕ ಟವರ್ ಅಲ್ಲಿ ಇವರ ಮೊಬೈಲ್ ಸ್ವಿಚ್ ಆಫ್ ಆಗಿರುವುದಾಗಿ ತಿಳಿದು ಬಂದಿದೆ.
ಹಲವು ವರ್ಷಗಳ ಹಿಂದೆ ಬಾಳಿಲದಲ್ಲಿ ಸ್ಥಾಪನೆಯಾದ ರಬ್ಬರ್ ಉತ್ಪಾದಕರ ಸಂಘ ನಂತರದ ದಿನಗಳಲ್ಲಿ ಬೆಳ್ಳಾರೆಗೆ ಸ್ಥಳಾಂತರಗೊಂಡು ಬಳಿಕ ಬೆಳ್ಳಾರೆ ರಬ್ಬರ್ ಉತ್ಪಾದಕರ ಸಂಘ ಎಂಬ ಹೆಸರಿನಲ್ಲಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಭಾಗದಲ್ಲಿ ವ್ಯವಹಾರ ನಡೆಸುತ್ತಿತ್ತು. ರಾಜೇಶ್ ಗುಂಡಿಗದ್ದೆ ಇದರ ಅಧ್ಯಕ್ಷರಾಗಿದ್ದರು. ಬೆಳ್ಳಾರೆ, ಪೆರುವಾಜೆ, ಬಾಳಿಲ, ಐವರ್ನಾಡು, ಕೊಡಿಯಾಲ ಸೇರಿದಂತೆ ಆಸುಪಾಸಿನ ಗ್ರಾಮಗಳ ರಬ್ಬರು ಬೆಳೆಗಾರರು ರಬ್ಬರ್ ಹಾಲನ್ನು ಸಂಘಕ್ಕೆ ನೀಡುತ್ತಿದ್ದು, ತಮಗೆ ಅವಶ್ಯಕತೆ ಇರುವಾಗ ಹಣ ತೆಗೆದುಕೊಳ್ಳುತ್ತಿದ್ದರು. ವ್ಯವಹಾರದ ಅನುಕೂಲಕ್ಕಾಗಿ ಮಣಿಕ್ಕಾರ ಕಾಂಪ್ಲೆಕ್ಸ್ ಅಲ್ಲಿ ಕಚೇರಿ ಶಾಖೆಯನ್ನು ತೆರೆದಿದ್ದರು. ಇತ್ತೀಚೆಗಿನ ವರ್ಷಗಳಿಂದ ಹಾಲು ನೀಡಿದ ಗ್ರಾಹಕರಿಗೆ ಹಣ ಕೊಡಲು ಬಾಕಿ ಇರುವ ಮೊತ್ತ ಏರುತ್ತಾ ಹೋಗಿ ಕೋಟಿಗಟ್ಟಲೆ ಹಣ ಕೊಡಲು ಬಾಕಿ ಇದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದಾರೆ.

ಇದರೊಂದಿಗೆ ಸಂಘದ ಹೆಸರಲ್ಲಿ ಪಡೆದ ಸಾಲ ಮತ್ತು ಭೂಮಿ ಖರೀದಿ ಮತ್ತು ಅಭಿವೃದ್ಧಿಗೆ ಸೇರಿದಂತೆ ತಮ್ಮ ವೈಯಕ್ತಿಕ ನೆಲೆಯಲ್ಲಿ ಮಾಡಿದ ಸಾಲವೂ ವಿಪರೀತ ಇದೆ ಎನ್ನಲಾಗಿದೆ. ಹಣ ಪಾವತಿ ಬಾಕಿ ಏರುತ್ತಾ ಹೋದ ಹಾಗೆ ಗ್ರಾಹಕರು ಮತ್ತು ಇತರ ಸಾಲಗಾರರು ರಾಜೇಶರಲ್ಲಿ ಹಣ ನೀಡುವಂತೆ ಒತ್ತಡ ಹಾಕುತ್ತಿದ್ದರೆನ್ನಲಾಗಿದೆ. ರಬ್ಬರ್ ಉತ್ಪಾದಕರ ಸಂಘ ನಷ್ಟದಿಂದ ನಡೆಯುತ್ತಿದ್ದು ಬೆಂಗಳೂರು ಮೂಲದ ಕಂಪೆನಿಗೆ ಮಾರಾಟ ಮಾಡಿ ಸಂಘದ ಗ್ರಾಹಕರಿಗೆ ಹಣ ಪಾವತಿಸುವುದಾಗಿ ಇತ್ತೀಚೆಗೆ ಮಹಾಸಭೆಯಲ್ಲಿ ನಿರ್ಧಾರವಾಗಿತ್ತೆನ್ನಲಾಗಿದೆ.

ಅದರಂತೆ ಖರೀದಿದಾರರೊಬ್ಬರು ಸಂಘದ ಮೀಟಿಂಗ್‌ಗೆ ಬಂದು ಸಂಘವನ್ನು 12 ಕೋಟಿ ರೂ.ಗಳಿಗೆ ಖರೀದಿಸುವ ಭರವಸೆಯನ್ನು ನೀಡಿ ಸ್ವಲ್ಪ ಹಣವನ್ನು ನೀಡಿದ್ದರೆನ್ನಲಾಗಿದ್ದು, ಬಳಿಕ ಸಂಘದ ನಷ್ಟವನ್ನು ಸರಿದೂಗಿಸಲು ಕಷ್ಟವೆಂದು ಅಭಿಪ್ರಾಯಪಟ್ಟು ವ್ಯವಹಾರದಿಂದ ಹಿಂದೆ ಸರಿದರೆನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು