ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಷರತ್ತುಗಳಿಗೊಳಪಟ್ಟ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಾಲಯಗಳ ನಿರ್ಬಂಧ ತೆರವು- ಡಿಸಿ ರಾಜೇಂದ್ರ.

Twitter
Facebook
LinkedIn
WhatsApp
ಷರತ್ತುಗಳಿಗೊಳಪಟ್ಟ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಾಲಯಗಳ ನಿರ್ಬಂಧ ತೆರವು- ಡಿಸಿ ರಾಜೇಂದ್ರ.

ಮಂಗಳೂರು: ಕೊರೊನಾ ಸೋಂಕಿನ ಪಾಸಿಟಿವಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಹಿಂಪಡೆದು ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ ಸೇವೆಗಳನ್ನು ನಡೆಸಲು ಷರತ್ತುಗಳನ್ನು ಪಾಲಿಸುವ ನಿಬಂಧನೆಗಳಿಗೊಳಪಟ್ಟು ಜಿಲ್ಲಾಡಳಿತ ಅನುಮತಿ ನೀಡಿದೆ.

“ದೇವಾಲಯಗಳಲ್ಲಿ ಕೊರೊನಾ ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ದೇವಳದ ಆಡಳಿತ ವರ್ಗವು ಇದನ್ನು ಕಟ್ಟುನಿಟ್ಟಾಗಿ ಅನುಸರಿಸುವ ಜವಾಬ್ದಾರಿಯನ್ನು ಹೊಂದಿದೆ. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವರ್ಗದವರು ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್‌ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿಯನ್ನು ಹೊಂದಿರಬೇಕು” ಎಂದು ತಿಳಿಸಿದೆ.
“ದೇವಾಲಯಗಳಿಗೆ ಸೇವೆಗೆ ಬರುವ ಭಕ್ತರು 2 ಡೋಸ್ ಕೊರೊನಾ ಲಸಿಕೆ ಪಡೆದಿದ್ದರೂ ಸಹ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತವಾಗಿ ಆರ್‌ಟಿಪಿಸಿಆರ್‌‌ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ದೇವಾಲಯಗಳಿಗೆ ಬರುವ ಭಕ್ತರಿಗೆ ಕೊರೊನಾ ಲಸಿಕೆಯನ್ನು ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿಯನ್ನು ಮೂಡಿಸುವ ಸಲುವಾಗಿ ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು” ಎಂದು ಹೇಳಿದೆ.
“ದೇವಾಲಯಕ್ಕೆ ಬರುವ ಸಾರ್ವಜನಿಕರು ಕೊರೊನಾ ಲಸಿಕೆ ಪಡೆಯದಿದ್ದಲ್ಲಿ, ಅಂತಹವರುಗಳಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ದೇವಾಲಯಗಳಲ್ಲಿ ಕೊರೊನಾ ಲಸಿಕಾ ಕೇಂದ್ರಗಳನ್ನು ತೆರೆಯಲು ಹಾಗೂ ಜನಸಂದಣಿಯಾಗದಂತ ಲಸಿಕೆ ನೀಡಲು ಕ್ರಮವಹಿಸಬೇಕು” ಎಂದು ತಿಳಿಸಿದೆ.
ಮೇಲ್ಕಂಡ ದೇವಾಲಯಗಳಲ್ಲಿ ನಡೆಯುವಂತಹ ಪ್ರಮುಖ ಸೇವೆಗಳನ್ನು (ಅಂದರೆ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸೇವೆಗಳು ಇತ್ಯಾದಿ) ಆದಷ್ಟು ಮಿತಿಗೊಳಿಸುವುದು ಹಾಗೂ ಜನಸಂದಣಿಯಾಗದಂತೆ ದಿನವೊಂದಕ್ಕೆ ದೇವಳದ ಸ್ಥಳ ಸಾಮಥ್ರ್ಯವನ್ನು ಹೊಂದಿಕೊಂಡು ಕನಿಷ್ಟ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು