ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೈಮಾ ಅವಾರ್ಡ್‌ 2021: ರಚಿತಾ ರಾಮ್, ರಶ್ಮಿಕಾ, ಬಿ.ಸುರೇಶ್‌, ದರ್ಶನ್, ರಕ್ಷಿತ್ ಶೆಟ್ಟಿಗೆ ಪ್ರಶಸ್ತಿ!

Twitter
Facebook
LinkedIn
WhatsApp
ಸೈಮಾ ಅವಾರ್ಡ್‌ 2021: ರಚಿತಾ ರಾಮ್, ರಶ್ಮಿಕಾ, ಬಿ.ಸುರೇಶ್‌, ದರ್ಶನ್, ರಕ್ಷಿತ್ ಶೆಟ್ಟಿಗೆ ಪ್ರಶಸ್ತಿ!

2021ರ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಸಿನಿಮಾದಲ್ಲಿ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.
ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.
ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.
“ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದು ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.
ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ:
ಅತ್ಯುತ್ತಮ ನಟ: ದರ್ಶನ್​ (ಯಜಮಾನ)
ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)
ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)
ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)
ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)
ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)
ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)
ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)
ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)
ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)
ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)
ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)
ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು