ಬೆಳಗಾವಿ: ಚೀನಾದಿಂದ ಕಳಪೆ ಬೀಜಗಳು ಬರುತ್ತಿವೆ.ರೈತರು ಎಚ್ಚರದಿಂದ ಇರಬೇಕು ಎಂದು ಬೆಳಗಾವಿ ಜಂಟಿ ಕೃಷಿ ನಿರ್ದೇಶಕ ಶಿವನಗೌಡ .ಎಸ್. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ.ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ.ಈಗಾಗಲೇ ಇಂಗ್ಲೆಂಡ್, ಕೆನಡಾದಲ್ಲಿ ಅನೇಕ ರೈತರಿಗೆ ಇಂತಹ ಬೀಜಗಳನ್ನು ಕಳಿಸಲಾಗಿದೆ. ವಿವಿಧ ತಳಿಗಳ ಬಿತ್ತನೆ ಬೀಜದ ಈ ಪೊಟ್ಟಣಗಳನ್ನು ಯಾರು ಎಲ್ಲಿಂದ ಕಳುಹಿಸುತ್ತಾರೆ ಎಂಬ ವಿವರಗಳೇ ಇರುವುದಿಲ್ಲ.
ಈ ಬೀಜಗಳ ಬಳಕೆಯಿಂದ ಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದೆ. ಕ್ರಮೇಣ ಭೂಮಿಯೇ ಬಂಜರಾಗುವ ಸಾಧ್ಯತೆಯೂ ಇದೆ ಎಂದೂ ಅವರು ಎಚ್ಚರಿಸಿದ್ದಾರೆ.
ಇಂತಹ ಬಿತ್ತನೆ ಬೀಜದ ಪೊಟ್ಟಣಗಳ ಪಾರ್ಸಲ್ ಬಂದರೆ ರೈತರು ವಾಪಸ್ ಕಳುಹಿಸಬೇಕು. ಒಂದು ವೇಳೆ ಸ್ವೀಕರಿಸಿದರೂ ಪೊಟ್ಟಣದ ಸಮೇತ ಅದನ್ನು ಸುಟ್ಟು ಹಾಕಬೇಕು ಇಲ್ಲವೆ, ಸಮೀಪದ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚೀನಾ ಗಳಿಂದ ಕಳಪೆ ಬೀಜಗಳು ಬರುತ್ತಿರುವುದು ಸಾಮಾನ್ಯವಾಗಿದೆ. ರೈತರು ಈ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.