ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೈತರ ವಿರುದ್ದ ದೊಣ್ಣೆ ಎತ್ತಿಕೊಳ್ಳಲು ಕಾರ್ಯಕರ್ತರಿಗೆ ಕರೆ; ಹರ್ಯಾಣ ಸಿಎಂ ವಿಡಿಯೋ ವೈರಲ್!

Twitter
Facebook
LinkedIn
WhatsApp
ರೈತರ ವಿರುದ್ದ ದೊಣ್ಣೆ ಎತ್ತಿಕೊಳ್ಳಲು ಕಾರ್ಯಕರ್ತರಿಗೆ ಕರೆ; ಹರ್ಯಾಣ ಸಿಎಂ ವಿಡಿಯೋ ವೈರಲ್!

ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ರೈತರನ್ನು ಎದುರಿಸಲು ಕೋಲು ಎತ್ತಿಕೊಳ್ಳಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಹರ್ಯಾಣದ ಮುಖ್ಯಮಂತ್ರಿ ಮನೋಹರ್‌ಲಾಲ್‌ ಖಟ್ಟರ್‌ ಕರೆಕೊಟ್ಟಿರುವ ವಿಡಿಯೋ ವೈರಲ್‌ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ.
ಇತ್ತೀಚೆಗೆ ಮಾತನಾಡಿದ್ದ ಅವರು, ರೈತರನ್ನು ನಿಯಂತ್ರಿಸಬೇಕಿದೆ. ಪ್ರತಿ ಜಿಲ್ಲೆಯಲ್ಲಿ, ವಿಶೇಷವಾಗಿ ಉತ್ತರ ಹಾಗೂ ಪಶ್ಚಿಮ ಹರ್ಯಾಣದಲ್ಲಿ ಈ ಸಮಸ್ಯೆ ಇಲ್ಲ. ಇಲ್ಲೇ ನಮ್ಮವರನ್ನು ಸ್ವಯಂಸೇವರಕರನ್ನಾಗಿ ಮಾಡಿ. 500-1000ರ ಗುಂಪು ಮಾಡಿ. ಪ್ರತಿ ಜಾಗದಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ… ಎಂದು ಕರೆ ಕೊಟ್ಟಿದ್ದ ವಿಡಿಯೋ ವೈರಲ್ ಆಗಿದೆ.
ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ. ಕೋಲು ಎತ್ತಿಕೊಂಡರೆ ಸಮಯದ ಬಗ್ಗೆ ಚಿಂತೆ ಮಾಡಬೇಡಿ. ತಿಂಗಳೆರಡು ತಿಂಗಳಾದರೂ, ಇಲ್ಲಿ ಕಲಿಯುವುದಕ್ಕಿಂತ ಅಲ್ಲಿ ಕಲಿಯುತ್ತೀರಿ. ಲೀಡರ್‌ ಆಗಿಬಿಡಬಹುದು. ಇದು ಇತಿಹಾಸದಲ್ಲಿ ದಾಖಲಾಗಿ ಬಿಡುತ್ತದೆ ಎಂದು ಪ್ರೇರಣೆಯ ಮಾತುಗಳನ್ನಾಡಿದ್ದಾರೆ.
ಭಾನುವಾರ ನಡೆದ ಬಿಜೆಪಿಯ ಕಿಸಾನ್ ಮೋರ್ಚಾದ ಸಭೆಯಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಲು ಸಿದ್ದವಿರುವವರು ಸಂಘಟಿತರಾಗುವಂತೆ ಕರೆ ನೀಡಿದ್ದಾರೆ. ರೈತ ಹೋರಾಟ ಆರಂಭವಾದಾಗಿನಿಂದ ರೈತರ ವಿರುದ್ಧ ಮಾತನಾಡುತ್ತಾ ಬಂದಿರುವ ಖಟ್ಟರ್‌ ಈ ವಿಡಿಯೋ ಹೋರಾಟ ನಿರಂತರ ರೈತರನ್ನು ಇನ್ನಷ್ಟು ಕೆರಳಿಸಿದೆ.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷದಿಂದ ಪಂಜಾಬ್‌ನಲ್ಲಿ ನಂತರದಲ್ಲಿ ಹರ್ಯಾಣದಲ್ಲಿ ರೈತರು ಹೋರಾಟ ಆರಂಭಿಸಿದರು. ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿರುವ ಹರ್ಯಾಣ ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದಾಗಲೆಲ್ಲಾ, ತೀವ್ರವಾದ ಪ್ರತಿಭಟನೆ ವ್ಯಕ್ತವಾಗಲಾರಂಭಿಸಿತು.
ಕಳೆದ ತಿಂಗಳು ಬಸ್ತಾರಾ ಟಾಲ್‌ಪ್ಲಾಜ ಬಳಿ ಎಸ್‌ಡಿಎಂ ರೈತರ ತಲೆ ಒಡೆಯುವಂತೆ ಕರೆ ನೀಡಿದ್ದರು, ಆಗಲೂ ಹಿಂಸಾಚಾರ ನಡೆದಿತ್ತು. ಇದನ್ನು ಮುಖ್ಯಮಂತ್ರಿ ಸಮರ್ಥಿಸಿಕೊಂಡಿದ್ದರೂ ಕೂಡ. ಅಧಿಕಾರವನ್ನು ಪ್ರಶ್ನಿಸುತ್ತಿರುವ ರೈತರ ಮೇಲೆ ಪ್ರತಿಕಾರದ ನಡೆಯನ್ನು ಅನುಸರಿಸುತ್ತಿರುವ ಖಟ್ಟರ್‌ ಅವರ ನಿಲುವನ್ನು ರೈತ ಸಂಘಟನೆಗಳು ತೀವ್ರವಾಗಿ ವಿರೋಧಿಸಿ, ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಲಾಖಿಮ್‌ಪುರ್‌ ಖೇರಿ ಹಿಂಸಾಚಾರವನ್ನು ಪ್ರತಿಭಟಿಸಿ, ಹಾಗೂ ಖಟ್ಟರ್‌ ಹೇಳಿಕೆಯನ್ನು ಖಂಡಿಸಿ ಅಕ್ಟೋಬರ್‌ 4 ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.
ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಹೇಳಿಕೆ ಹಾಗೂ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಆಗಿರುವ ದಾಳಿಯನ್ನು ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಅವರು ಕಟುವಾಗಿ ಟೀಕಿಸಿದ್ದಾರೆ.
“ಲಖಿಂಪುರ್‌‌ ಖೇರಿಗೆ ಭೇಟಿ ನೀಡಲು ಹಾಗೂ ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ. ನಿನ್ನೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಸೀತಾಪುರಕ್ಕೆ ಅವರು ತೆರಳದಂತೆ, ಯಾವುದೇ ವಾರಂಟ್‌ ಇಲ್ಲದೆಯೂ ತಡೆದಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು