ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಗೋಲಿಬಾರ್ ಪ್ರಕರಣ; ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದ ಸರ್ಕಾರ

Twitter
Facebook
LinkedIn
WhatsApp
ಮಂಗಳೂರು ಗೋಲಿಬಾರ್ ಪ್ರಕರಣ; ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದ  ಸರ್ಕಾರ

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರಿಗೆ ಕರ್ನಾಟಕ ಸರ್ಕಾರ ಕ್ಲೀನ್ ಚಿಟ್ ನೀಡಿದೆ.
2019ರ ಡಿಸೆಂಬರ್ 19ರಂದು ಮಂಗಳೂರಿನಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ನಡೆದ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟು, 9ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಲಭೆ ನಿಯಂತ್ರಣದ ವೇಳೆ ಪೊಲೀಸರು ಯಾವುದೇ ತಪ್ಪು ಮಾಡಿಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್‌ ಮುಂದೆ ಸಮರ್ಥಿಸಿಕೊಂಡಿದೆ.

ಸ್ವಾತಂತ್ರ್ಯ ಹೋರಾಟಗಾರ, ದಿವಂಗತ ಎಚ್ ಎಸ್ ದೊರೆಸ್ವಾಮಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆ. ಅಶ್ರಫ್ 2020ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಾಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರನ್ನು ಒಳಗೊಂಡ ವಿಭಾಗೀಯ ಪೀಠದ ಮುಂದೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಸರ್ಕಾರದ ಹೇಳಿಕೆ ಸಲ್ಲಿಸಿದರು.
ಈ ಗಲಭೆ ಕುರಿತು ನಡೆದ ನ್ಯಾಯಾಂಗ ತನಿಖೆ ವರದಿಯನ್ನು ಸರ್ಕಾರ ಅಂಗೀಕರಿಸಿದೆ. ಪೊಲೀಸರು ತೆಗೆದುಕೊಂಡ ಕ್ರಮದಲ್ಲಿ ಯಾವುದೇ ಲೋಪ ಕಂಡುಬಂದಿಲ್ಲ ಎಂದು ಚಿನ್ನಪ್ಪ ತಿಳಿಸಿದರು. ಯಾರಾದರೂ ತಪ್ಪಿತಸ್ಥರು ಎಂದು ಕಂಡುಬಂದಿದ್ದಾರೆಯೇ ಎಂಬ ಪ್ರಶ್ನೆಗೆ, ಚಿನ್ನಪ್ಪ ‘ಇಲ್ಲ’ ಎಂದು ಉತ್ತರಿಸಿದರು.
ಉಡುಪಿ ಜಿಲ್ಲಾಧಿಕಾರಿ ನಡೆಸಿದ್ದ ನ್ಯಾಯಾಂಗ ತನಿಖೆಯ ವರದಿಯನ್ನು ಈ ವರ್ಷದ ಜುಲೈ ತಿಂಗಳಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದರು.

ಶಾಂತಿಯುತ ಪ್ರತಿಭಟನೆ ಮೇಲೆ ಪೊಲೀಸ್ ದೌರ್ಜನ್ಯ ಎಸಗಿರುವುದಕ್ಕೆ ಸಂಬಂಧಿಸಿದಂತೆ ಹತ್ತು ದೂರುಗಳು ಪೊಲೀಸರ ವಿರುದ್ಧ ದಾಖಲಾಗಿವೆ. ಎಫ್‌ಐಆರ್ ದಾಖಲಿಸುವ ಸಂಬಂಧ ಹಾಗೂ ಕಾನೂನಿಗೆ ಅನುಗುಣವಾಗಿ ತನಿಖೆ ನಡೆಸುವ ಕುರಿತು ಹೈಕೋರ್ಟ್‌ನಿಂದ ಸಕಾರಾತ್ಮಕ ನಿರ್ದೇಶನ ಬಂದಿತ್ತು. ಯಾವುದೇ ಪ್ರಕರಣ/ಎಫ್‌ಐಆರ್ ದಾಖಲಾಗಿಲ್ಲ ಮತ್ತು ತನಿಖೆ ನಡೆದಿಲ್ಲ. ಮ್ಯಾಜಿಸ್ಟ್ರೇಟ್ ಮುಂದೆ ಯಾವುದೇ ಆರೋಪಪಟ್ಟಿ ದಾಖಲಾಗಿಲ್ಲ. ಒಂದೇ ಒಂದು ದೂರನ್ನು ಪರಿಶೀಲಿಸಲಾಗಿಲ್ಲ. ಇದು ಪೊಲೀಸರು, ಪೊಲೀಸರಿಂದ, ಪೊಲೀಸರಿಗಾಗಿ ರೂಪಿಸಿದ ವರದಿ ಎಂದು ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಆರೋಪಿಸಿದರು.
‘ನಾವು ಪ್ರತಿ ದೂರನ್ನೂ ತನಿಖೆ ಮಾಡಿದ್ದೇವೆ. ಮೊದಲು ಸಿಐಡಿ ತನಿಖೆ ನಡೆದಿದೆ. ಬಳಿಕ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಯಾವುದೇ ದೌರ್ಜನ್ಯ ನಡೆಸಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ನ್ಯಾಯಾಲಯಕ್ಕೆ ಪ್ರತಿಯೊಂದು ವಿವರವನ್ನೂ ಮುಚ್ಚಿದ ಲಕೋಟೆಯಲ್ಲಿ ನೀಡಲಾಗಿದೆ’ ಎಂದು ಚಿನ್ನಪ್ಪ ಮಾಹಿತಿ ನೀಡಿದರು.

ದೂರುಗಳನ್ನು ಸ್ವೀಕರಿಸುವಲ್ಲಿ ಹಾಗೂ ವಿಚಾರಣೆಗಳನ್ನು ನಡೆಸುವಲ್ಲಿ ಅಳವಡಿಸಿಕೊಂಡ ಪ್ರಕ್ರಿಯೆ ಬಗ್ಗೆ ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿತು. ಬಳಿಕ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು