ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮ ಆಸ್ತಿ, ಡ್ರಗ್ಸ್, ಮದ್ಯ ಸೇವನೆ ಮಾಡುವವರಿಗೆ ಇನ್ನು ಮುಂದೆ ಕಾಂಗ್ರೆಸ್ ನಲ್ಲಿ ಸ್ಥಾನವಿಲ್ಲ.

Twitter
Facebook
LinkedIn
WhatsApp
ಅಕ್ರಮ ಆಸ್ತಿ, ಡ್ರಗ್ಸ್, ಮದ್ಯ ಸೇವನೆ ಮಾಡುವವರಿಗೆ ಇನ್ನು ಮುಂದೆ ಕಾಂಗ್ರೆಸ್ ನಲ್ಲಿ ಸ್ಥಾನವಿಲ್ಲ.

ನವದೆಹಲಿ: ಯಾರಾದರೂ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ವೀಕರಿಸಲು ಬಯಸುತ್ತಿದ್ದರೆ ಅಂತಹವರಿಗೆ ಕಾಂಗ್ರೆಸ್ ಪಕ್ಷ ಹೊಸ ನಿಯಮಗಳನ್ನು ವಿಧಿಸಿದೆ. ಹೌದು.. ಕಾಂಗ್ರೆಸ್ ತನ್ನ ಹೊಸ ಸದಸ್ಯತ್ವ ನಿಯಮ ರೂಪದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ತನ್ನ ಹೊಸ ಸದಸ್ಯರಿಗೆ ಮದ್ಯ ಮತ್ತು ಮಾದಕ ದ್ರವ್ಯಗಳಿಂದ ದೂರವಿರಲು ಘೋಷಿಸಿಕೊಳ್ಳಬೇಕಾಗಿದೆ. ಸಾರ್ವಜನಿಕ ವೇದಿಕೆಗಳಲ್ಲಿ ಪಕ್ಷದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಟೀಕಿಸದಂತೆ ಲಿಖಿತ ಭರವಸೆ ನೀಡಬೇಕಾಗಿದೆ.

ಅತ್ಯಂತ ಪುರಾತನ ಪಕ್ಷದ ಸದಸ್ಯತ್ವದ ಅರ್ಜಿಯಲ್ಲಿ ಈ ನಿಬಂಧನೆಗಳನ್ನು ಸದಸ್ಯತ್ವ ಸ್ವೀಕರಿಸುತ್ತಿರುವವರು ಪೂರ್ಣಗೊಳಿಸಬೇಕಿದೆ. ಇವೆಲ್ಲದರ ಜೊತೆಗೆ ಕಾನೂನನ್ನು ಮೀರಿ ಆಸ್ತಿ ಮಾಡುವುದಿಲ್ಲ ಮತ್ತು ಕಾನೂನುಗಳನ್ನು ಮೀರಿ ಯಾವುದೇ ಆಸ್ತಿಯನ್ನು ಹೊಂದಿಲ್ಲ ಎಂದು ಘೋಷಿಸಬೇಕಾಗಿದೆ. ಇದರೊಂದಿಗೆ ಪಕ್ಷದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಮುಂದುವರೆಸಲು ‘ದೈಹಿಕ ಶ್ರಮ ಮತ್ತು ಕೆಲಸ’ಗಳನ್ನು ಕೈಗೊಳ್ಳಲು ಹಿಂಜರಿಯಬೇಡಿ ಮುಂತಾದ ಹತ್ತು ಅಂಶಗಳು ಸದಸ್ಯತ್ವ ಅರ್ಜಿಯಲ್ಲಿ ಉಲ್ಲೇಖವಾಗಿದೆ.
ಕಾಂಗ್ರೆಸ್ ಪಕ್ಷ ನವೆಂಬರ್ 1 ರಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದು 2022 ರ ಮಾರ್ಚ್ 31 ವರೆಗೂ ಈ ಅಭಿಯಾನ ನಡೆಯಲಿದೆ. ಈ ಬಳಿಕ ಮುಂದಿನ ವರ್ಷ ಆಗಸ್ಟ್ 21 ರಿಂದ ಸೆ.20 ರ ನಡುವೆ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಲ್ಲಾ ಪಕ್ಷದ ಕೇಂದ್ರ ಚುನಾವಣಾ ವಿಭಾಗದ ಅಧ್ಯಕ್ಷರಾದ ಮಧುಸೂಧನ್ ಮಿಸ್ತ್ರಿ ” ಕಾಂಗ್ರೆಸ್ ಸದಸ್ಯರು ಹಾಗೂ ಹೊಸ ಸದಸ್ಯರು ಈ ನಿಬಂಧನೆಗಳಿಗೆ ಪೂರಕವಾಗಿ ನಡೆದುಕೊಳ್ಳುವುದನ್ನು ನಿರೀಕ್ಷಿಸುತ್ತೇವೆ” ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು