ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂವಿಧಾನ ಬಿಟ್ಟು, ರಾಜಕಾರಣಿಗಳಂತೆ ವರ್ತಿಸಿದ ಸಿಂಧುರಿ, ಶಿಲ್ಪ ನಾಗ್ ಗೆ ಶಾಕ್ ನೀಡಿದ ಸರ್ಕಾರ!

Twitter
Facebook
LinkedIn
WhatsApp
ರಾಜಕಾರಣಿಗಳಂತೆ ಬಹಿರಂಗವಾಗಿ ಕಿತ್ತಾಡಲು ಶುರುಮಾಡಿದ ಅಧಿಕಾರಿಗಳು-ಮೈಸೂರಿನಲ್ಲಿ ಅಧಿಕಾರಿ ಶಿಲ್ಪಾ ನಾಗ್ ರಾಜೀನಾಮೆ.

ಮೈಸೂರು: ಸಂವಿಧಾನ ಹಾಗೂ ಕಾನೂನು ಅಂಶಗಳನ್ನು ಗಾಳಿಗೆ ತೂರಿ ರಾಜಕಾರಣಿಗಳಂತೆ ತಮ್ಮ ವೈಯಕ್ತಿಕ ವಿಷಯಗಳನ್ನು ಮಾಧ್ಯಮದ ಮೂಲಕ ಪದೇ ಪದೇ ತಿಳಿಸುತ್ತಿದ್ದ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ನಗರಪಾಲಿಕೆ ಕಮಿಷನರ್ ಶಿಲ್ಪ ನಾಗ್ ಗೆ ಕೊನೆಗೂ ಸರ್ಕಾರ ವರ್ಗಾವಣೆ ಬಿಸಿ ಮುಟ್ಟಿಸಿದೆ.

ಜಿಲ್ಲೆಯ ಆಡಳಿತ ಹಾಗೂ ಇತರ ವಿಷಯಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ವರದಿ ನೀಡುವುದನ್ನು ಬಿಟ್ಟು ತಮ್ಮ ವೈಯಕ್ತಿಕ ಆರೋಪಗಳನ್ನು ಮಾಧ್ಯಮದ ಮೂಲಕ ಹಂಚಿಕೊಂಡ ಇಬ್ಬರು ಅಧಿಕಾರಿಗಳಿಗೆ ಸರ್ಕಾರ ವರ್ಗಾವಣೆ ಮಾಡುವ ಸರಿಯಾದ ದಾರಿ ತೋರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ತಮ್ಮ ಅಧಿಕಾರ ವ್ಯಾಪ್ತಿ ನೀಡಿ ಪದೇ ಪದೇ ಮಾಧ್ಯಮಗಳಿಗೆ ತಮ್ಮ ವೈಯಕ್ತಿಕ ವಿಷಯಗಳನ್ನು ಹಂಚಿಕೊಂಡು ಸಂವಿಧಾನದಲ್ಲಿ ಹಾಗೂ ಕಾನೂನಿನಲ್ಲಿ ಉಲ್ಲೇಖಿತವಾಗಿರುವ ಅಧಿಕಾರಿಗಳ ವ್ಯಾಪ್ತಿಯನ್ನು ಬಿಟ್ಟು ವರ್ತಿಸಿದ ಅಧಿಕಾರಿಗಳಿಗೆ ಸರ್ಕಾರ ಸೂಕ್ತ ದಾರಿಯನ್ನು ತೋರಿಸಿದೆ ಎಂದು ಸಾರ್ವಜನಿಕರಿಂದ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಹೈಡ್ರಾಮಾ ಗಳಿಗೆ ಈ ಮೂಲಕ ತೆರೆ ಬಿದ್ದಿದೆ ಎನ್ನಲಾಗಿದೆ. ರೋಹಿಣಿ ಸಿಂಧೂರಿ ಯವರನ್ನು ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಶಿಲ್ಪ ನಾಗ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ. ಒಟ್ಟಿನಲ್ಲಿ ಸರ್ಕಾರದ ಆಡಳಿತ ನಡೆಸಬೇಕಾದವರು ರಾಜಕಾರಣಿಗಳ ತರಹ ವರ್ತಿಸಿರುವ ಪ್ರಕರಣಕ್ಕೆ ಸರ್ಕಾರ ತೆರೆ ಎಳೆಯುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು