ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅನಿಲ್​ ದೇಶ್​ಮುಖ್​ ನ.12ರವರೆಗೆ ಇ.ಡಿ.ಕಸ್ಟಡಿಗೆ.

Twitter
Facebook
LinkedIn
WhatsApp
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಬಂಧನ .

ದೆಹಲಿ: ಅಕ್ರಮ ಹಣವರ್ಗಾವಣೆ ಪ್ರಕರಣದಡಿ ಈಗಾಗಲೇ ಇ.ಡಿ.ಯಿಂದ ಬಂಧಿತರಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್ ರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಸಿಬಿಐ ಕೂಡ ಮನವಿ ಮಾಡಿದೆ.  ಮೊನ್ನೆ ಅನಿಲ್​ ದೇಶ್​ಮುಖ್​​ರನ್ನು ಬಂಧಿಸಿದ್ದ ಇ.ಡಿ.ಅಧಿಕಾರಿಗಳು ಅವರನ್ನು ಮುಂಬೈ ಕೋರ್ಟ್​ಗೆ ಹಾಜರುಪಡಿಸಿದ್ದರು. ಹಾಗೇ, ಇನ್ನೂ 9 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ತಿರಸ್ಕರಿಸಿದ್ದ ಕೋರ್ಟ್​ ಅನಿಲ್​ ದೇಶ್​​ಮುಖ್​ರನ್ನು ಜೈಲಿಗೆ ಕಳಿಸಿತ್ತು. 

ಇನ್ನು ತಮ್ಮ ಮನವಿಯನ್ನು ಪುರಸ್ಕರಿಸದ ಸೆಷನ್ಸ್​ ಕೋರ್ಟ್​​ ತೀರ್ಪಿನ ವಿರುದ್ಧ ಇ.ಡಿ.ಅಧಿಕಾರಿಗಳು ಕೂಡ ಬಾಂಬೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ನವೆಂಬರ್​ 12ರವರೆಗೂ ಇ.ಡಿ.ಅಧಿಕಾರಿಗಳು ಅನಿಲ್​ ದೇಶ್​ಮುಖ್​​ರನ್ನು ವಿಚಾರಣೆ ನಡೆಸಬಹುದು ಎಂದೂ ಹೇಳಿದೆ.  ಇನ್ನು ಅನಿಲ್​ ದೇಶ್​ಮುಖ್​ ಅವರನ್ನು ಇ.ಡಿ.ಅಧಿಕಾರಿಗಳು ವಿಚಾರಣೆ ಮಾಡಿ ಮುಗಿಸುತ್ತಿದ್ದಂತೆ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂದರೆ ಅನಿಲ್​ ದೇಶ್​​ಮುಖ್​​ರನ್ನು ಕಸ್ಟಡಿಗೆ ಕೊಡುವಂತೆ ಸಿಬಿಐ ಅಧಿಕಾರಿಗಳು ಕೋರ್ಟ್​ಗೆ ಮನವಿ ಸಲ್ಲಿಸಲಿದ್ದಾರೆ. ನ್ಯಾಯಾಲಯ ಅನುಮತಿ ನೀಡಿದರೆ,  ದೇಶಮುಖ್ ವಿರುದ್ಧ ಇರುವ ಭ್ರಷ್ಟಾಚಾರ ಆರೋಪ ಮತ್ತು ಪೊಲೀಸ್​ ಅಧಿಕಾರಿಗಳ ವರ್ಗಾವಣೆಯಲ್ಲಿ ನಡೆಸಿದ್ದಾರೆ ಎನ್ನಲಾದ ಅಕ್ರಮದ ಬಗ್ಗೆ ಸಿಬಿಐ ಅವರನ್ನು ಪ್ರಶ್ನಿಸಲಿದೆ.

ಅನಿಲ್​ ದೇಶ್​​ಮುಖ್​ ವಿರುದ್ಧ ಮಾಜಿ ಪೊಲೀಸ್​ ಅಧಿಕಾರಿ ಪರಮ್​ ಬೀರ್​ ಸಿಂಗ್​ ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದಾರೆ. ಈ ಹಿಂದಿನ ಪೊಲೀಸ್ ಅಧಿಕಾರಿ ಸಚಿನ್​ ವಾಜ್​​ರನ್ನು ಬಳಸಿಕೊಂಡು  ಬಾರ್​ ಆ್ಯಂಡ್​ ರೆಸ್ಟೋರೆಂಟ್​, ಹೋಟೆಲ್​ಗಳ  ಮೂಲಕ 100 ಕೋಟಿ ರೂಪಾಯಿ ವಸೂಲಿ ಮಾಡುತ್ತಿದ್ದರು ಎಂದು ಪರಮ್​ ಬೀರ್​ ಸಿಂಗ್​​ ಪತ್ರ ಬರೆದು ಉದ್ಧವ್​ ಠಾಕ್ರೆಗೆ ತಿಳಿಸಿದ್ದರು. ಅದಾದ ಮೇಲೆ ಅನಿಲ್​ ದೇಶ್​ಮುಖ್​ ಮೇಲಿನ ಆರೋಪಗಳೆಲ್ಲ ಮುನ್ನೆಲೆಗೆ ಬಂದು, ಇ.ಡಿ. ಮತ್ತು ಸಿಬಿಐ ಎರಡೂ ತನಿಖಾ ದಳಗಳೂ ಪ್ರಕರಣ ದಾಖಲು ಮಾಡಿವೆ. ಅನಿಲ್​ ದೇಶ್​ಮುಖ್​ ವಿರುದ್ಧ ಮಾಡಲಾದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ನಡೆಸಲಾದ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸುವಂತೆ ಮಾರ್ಚ್​ನಲ್ಲಿಯೇ ಬಾಂಬೆ ಹೈಕೋರ್ಟ್ ಸಿಬಿಐಗೆ ಸೂಚಿಸಿತ್ತು.  ಇನ್ನು ಇ.ಡಿ. ವಿಚಾರಣೆಗೆ ಅವರು ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು