ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಎಚ್‌ಎಲ್ ಕಸ್ಟಮರ್ ಕೇರ್‌ ಹೆಸರಿನಲ್ಲಿ ಮಂಗಳೂರಿನಲ್ಲಿ ವ್ಯಕ್ತಿಗೆ ವಂಚನೆ

Twitter
Facebook
LinkedIn
WhatsApp
ಡಿಎಚ್‌ಎಲ್ ಕಸ್ಟಮರ್ ಕೇರ್‌ ಹೆಸರಿನಲ್ಲಿ ಮಂಗಳೂರಿನಲ್ಲಿ ವ್ಯಕ್ತಿಗೆ ವಂಚನೆ

ಮಂಗಳೂರು: ಡಿಎಚ್‌ಎಲ್ ಕಸ್ಟಮರ್ ಕೇರ್‌ನಿಂದ ಕಾಲ್ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 49,998 ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋಸ ಹೋಗಿರುವ ವ್ಯಕ್ತಿಯು ನ.13ರಂದು ಬೆಳಗ್ಗೆ 10:17ರ ಸುಮಾರಿಗೆ ಡಿಎಚ್‌ಎಲ್ ಕಸ್ಟಮರ್ ಕೇರ್‌ಗೆ ಕಾಲ್ ಮಾಡಿದ್ದರು. ಬಳಿಕ ಅಪರಿಚಿತ ವ್ಯಕ್ತಿಯೋರ್ವರು ಕರೆ ಮಾಡಿ ಡಿಎಚ್‌ಎಲ್ ಕಸ್ಟಮರ್ ಕೇರ್‌ನಿಂದ ಕಾಲ್ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ ಎನಿ ಡೆಸ್ಕ್ ಆ್ಯಪ್‌ನ್ನು ಡೌನ್‌ಲೋಡ್ ಮಾಡುವಂತೆ ಹೇಳಿದ್ದಾರೆ. ಬಳಿಕ ಮೊಬೈಲ್‌ಗೆ ಒಂದು ಲಿಂಕ್ ಒಂದನ್ನು ಕಳುಹಿಸಿರುತ್ತಾನೆ.

ಆತ ಕಳುಹಿಸಿದ ಲಿಂಕ್‌ ಗೆ 5 ರೂ. ಪಾವತಿ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಲಿಂಕ್ ಓಪನ್ ಮಾಡಿ ತಮ್ಮ ಬ್ಯಾಂಕ್ ಖಾತೆ ನಂಬ್ರ ಹಾಗೂ ಒಟಿಪಿಯನ್ನು ದೂರುದಾರರು ನಮೂದಿಸಿದ್ದು, ತಕ್ಷಣ ತಮ್ಮ ಬ್ಯಾಂಕ್ ಖಾತೆಯಿಂದ 24,999 ರೂ. ಎರಡು ಬಾರಿ ಕಡಿತಗೊಂಡಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು